ದುರ್ಗಾಂಬಿಕಾ ಜಾತ್ರೆ: ಬಯಲು ಜಂಗೀ ಕುಸ್ತಿಗೆ ಚಾಲನೆ

KannadaprabhaNewsNetwork |  
Published : Mar 23, 2024, 01:15 AM IST
ಕ್ಯಾಪ್ಷನಃ22ಕೆಡಿವಿಜಿ42, 43ಃದಾವಣಗೆರೆಯಲ್ಲಿ ದುರ್ಗಾಂಬಿಕಾ ದೇವಿ ಜಾತ್ರೆ ಅಂಗವಾಗಿ ಇಂದಿನಿಂದ ಬಯಲು ಜಂಗೀ ಕುಸ್ತಿಗೆ ಚಾಲನೆ ನೀಡಿದ್ದು, ಮೊದಲ ದಿನದ ಕುಸ್ತಿ ಪಂದ್ಯಾವಳಿಯ ದೃಶ್ಯಗಳು | Kannada Prabha

ಸಾರಾಂಶ

ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ ನಿಮಿತ್ತ ನಗರದ ಬೀರಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಬಯಲು ಜಂಗಿ ಕುಸ್ತಿ ಪಂದ್ಯಾವಳಿಗಳಿಗೆ ಶುಕ್ರವಾರ ಚಾಲನೆ ನೀಡಲಾಯಿತು. ಕುಸ್ತಿ ಪಂದ್ಯಾವಳಿಯಲ್ಲಿ ಮೊದಲ ದಿನ ರಾಜ್ಯದ ಬಳ್ಳಾರಿ, ಬಾಗಲಕೋಟೆ, ಧಾರವಾಡ, ಹುಬ್ಬಳ್ಳಿ, ದಾವಣಗೆರೆ ಸೇರಿದಂತೆ ಅನೇಕ ಜಿಲ್ಲೆಯ ಮತ್ತು ಮಹಾರಾಷ್ಟ್ರ, ಹರಿಯಾಣ, ಪಂಜಾಬ್, ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯದ ಕುಸ್ತಿ ಜಟ್ಟಿಗಳು ಪಾಲ್ಗೊಂಡು ಅಖಾಡದಲ್ಲಿ ಸೆಣೆಸಾಡಿದರು.

ದಾವಣಗೆರೆ: ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ ನಿಮಿತ್ತ ನಗರದ ಬೀರಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಬಯಲು ಜಂಗಿ ಕುಸ್ತಿ ಪಂದ್ಯಾವಳಿಗಳಿಗೆ ಶುಕ್ರವಾರ ಚಾಲನೆ ನೀಡಲಾಯಿತು.

ಕುಸ್ತಿ ಪಂದ್ಯಾವಳಿಯಲ್ಲಿ ಮೊದಲ ದಿನ ರಾಜ್ಯದ ಬಳ್ಳಾರಿ, ಬಾಗಲಕೋಟೆ, ಧಾರವಾಡ, ಹುಬ್ಬಳ್ಳಿ, ದಾವಣಗೆರೆ ಸೇರಿದಂತೆ ಅನೇಕ ಜಿಲ್ಲೆಯ ಮತ್ತು ಮಹಾರಾಷ್ಟ್ರ, ಹರಿಯಾಣ, ಪಂಜಾಬ್, ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯದ ಕುಸ್ತಿ ಜಟ್ಟಿಗಳು ಪಾಲ್ಗೊಂಡು ಅಖಾಡದಲ್ಲಿ ಸೆಣೆಸಾಡಿದರು.

ರಾಜ್ಯ ಕುಸ್ತಿ ಪಟುಗಳ ಸಂಘದ ಅಧ್ಯಕ್ಷ ಬಿ.ವೀರಣ್ಣ ಮಾತನಾಡಿ, ಜಾತ್ರೆ ನಿಮಿತ್ತ ಮೂರು ದಿನಗಳ ಕಾಲ ಬಯಲು ಜಂಗಿ ಕುಸ್ತಿ ಹಮ್ಮಿಕೊಳ್ಳಲಾಗಿದೆ. ಕುಸ್ತಿಯಲ್ಲಿ ಹೊರ ರಾಜ್ಯಕ್ಕೂ ದಾವಣಗೆರೆ ಹೆಸರು ಹೋಗುವಂತೆ ಕುಸ್ತಿಗಳನ್ನು ನಡೆಸಲಾಗುವುದು ಎಂದರು.

ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲು ಹೆಸರಾಂತ ವಿಕ್ಕಿ ಪೈಲ್ವಾನ್, ಸುಮಿತ್ ಪೈಲ್ವಾನ್ ಸೇರಿದಂತೆ ರಾಷ್ಟ್ರೀಯ, ಅಂತರ ರಾಷ್ಟ್ರೀಯ, ಕುಸ್ತಿ ಪೈಲ್ವಾನರು ಈಗಾಗಲೇ ದಾವಣಗೆರೆಗೆ ಬಂದಿದ್ದಾರೆ. ಅವರು ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಕುಸ್ತಿಯಲ್ಲಿ ವಿಜೇತರಾದವರಿಗೆ ನಗದು ಬಹುಮಾನ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದರು.

ದುರ್ಗಾಂಬಿಕಾ ದೇವಸ್ಥಾನ ಧರ್ಮದರ್ಶಿ ಗೌಡರ ಚನ್ನಬಸಪ್ಪ, ಪಾಲಿಕೆ ಮಾಜಿ ಮೇಯರ್ ಗೋಣೆಪ್ಪ, ಪಾಲಿಕೆ ಸದಸ್ಯ ವೀರೇಶ್, ಪಾಲಿಕೆ ಮೇಯರ್ ವಿನಾಯಕ್ ಪೈಲ್ವಾನ್, ಪಿ.ಜೆ. ನಾಗರಾಜ್, ಅಮೃತ್ ಮೈಸೂರು, ಶ್ರೀನಿವಾಸ್, ರಾಮಣ್ಣ, ಅರುಣ್ ಕುಮಾರ್, ಸುರೇಶ್, ರಾಘವೇಂದ್ರ ಚೌವ್ಹಾಣ್, ಶಂಕರ್ ಪಿಸಾಳೆ, ಬಣಕಾರ್ ಭರಮಪ್ಪ ಇತರರು ಇದ್ದರು.

- - - -22ಕೆಡಿವಿಜಿ42, 43ಃ:

ದಾವಣಗೆರೆಯಲ್ಲಿ ದುರ್ಗಾಂಬಿಕಾ ದೇವಿ ಜಾತ್ರೆ ಅಂಗವಾಗಿ ಇಂದಿನಿಂದ ಬಯಲು ಜಂಗೀ ಕುಸ್ತಿಗೆ ಚಾಲನೆ ನೀಡಿದ್ದು, ಮೊದಲ ದಿನದ ಪಂದ್ಯದಲ್ಲಿ ಅಖಾಡದಲ್ಲಿ ಗೆಲವಿಗೆ ಶ್ರಮಿಸುತ್ತಿರುವ ಕುಸ್ತಿಪಟುಗಳು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸ್ತೆ ಸುರಕ್ಷತೆಗೆ ಸಾರಿಗೆ ಇಲಾಖೆ ಎಐ ಆಧರಿತ ಕ್ಯಾಮೆರಾ ಅಳವಡಿಕೆ
ಮಂಡ್ಯ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಸ್ವತಂತ್ರ ಸ್ಪರ್ಧೆ - ಸುಮಲತಾ ಪರ ನಾರಾಯಣಗೌಡ ಬ್ಯಾಟಿಂಗ್‌