ರಾಮನಗರ: ನಗರದ ಹೊರ ವಲಯದ ಜಾನಪದ ಲೋಕದಲ್ಲಿ ನವರಾತ್ರಿ ದಸರಾ ಹಬ್ಬದ ಅಂಗವಾಗಿ ದಸರಾ ಬೊಂಬೆಗಳ ವಿಶೇಷ ಪ್ರದರ್ಶನ ಏರ್ಪಡಿಸಲಾಗಿದೆ.
ರಾಮನಗರ: ನಗರದ ಹೊರ ವಲಯದ ಜಾನಪದ ಲೋಕದಲ್ಲಿ ನವರಾತ್ರಿ ದಸರಾ ಹಬ್ಬದ ಅಂಗವಾಗಿ ದಸರಾ ಬೊಂಬೆಗಳ ವಿಶೇಷ ಪ್ರದರ್ಶನ ಏರ್ಪಡಿಸಲಾಗಿದೆ. ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಆಯೋಜಿಸಿರುವ ದಸರಾ ಬೊಂಬೆಗಳ ಪ್ರದರ್ಶನ ಅ.15ರಿಂದ ನವೆಂಬರ್ 15ರವರೆಗೆ ಇರಲಿದೆ. ಈ ಪ್ರದರ್ಶನಕ್ಕೆ ಪರಿಷತ್ತಿನ ಅಧ್ಯಕ್ಷ ಪ್ರೊ.ಹಿ.ಶಿ.ರಾಮಚಂದ್ರೇಗೌಡ ಚಾಲನೆ ನೀಡಿದರು. ರಾಜ್ಯ ಪರಿಸರ ಪರಿಚಾರಕ ಮುಕುಂದರಾವ್ ಲೋಕಂಡೆ , ಪರಿಷತ್ತಿನ ಕಾರ್ಯಾಧ್ಯಕ್ಷ ಪ್ರೊ.ಹಿ.ಚಿ.ಬೋರಲಿಂಗಯ್ಯ, ಮ್ಯಾನೇಜಿಂಗ್ ಟ್ರಸ್ಟಿ ಆದಿತ್ಯ ನಂಜರಾಜ್ ಮತ್ತಿತರರು ಹಾಜರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.