24ರಿಂದ ದತ್ತ ಜಯಂತಿ: ಶಾಂತಿಯುತ ಆಚರಣೆಗೆ ಡಿಸಿ ಸೂಚನೆ

KannadaprabhaNewsNetwork |  
Published : Dec 08, 2023, 01:45 AM IST
ಚಿಕ್ಕಮಗಳೂರಿನ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಅಧ್ಯಕ್ಷತೆಯಲ್ಲಿ ದತ್ತ ಜಯಂತಿ ಕಾರ್ಯಕ್ರಮದ ಪೂರ್ವ ಸಿದ್ದತಾ ಸಭೆ ನಡೆಯಿತು. | Kannada Prabha

ಸಾರಾಂಶ

24ರಿಂದ ದತ್ತ ಜಯಂತಿ: ಶಾಂತಿಯುತ ಆಚರಣೆಗೆ ಡಿಸಿ ಸೂಚನೆ

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ದತ್ತ ಜಯಂತಿ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಇದೇ ಡಿ. 24 ರಿಂದ 26 ರವರೆಗೆ ನಡೆಯುವ ದತ್ತ ಜಯಂತಿ ಕಾರ್ಯಕ್ರಮವನ್ನು ಶಾಂತಿಯುತವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ದತ್ತ ಜಯಂತಿ ಕಾರ್ಯಕ್ರಮದ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರ ಮತ್ತು ನ್ಯಾಯಾಲಯದ ಸೂಚನೆಯಂತೆ ವ್ಯವಸ್ಥಾಪನ ಸಮಿತಿ ಮೂಲಕ ಮೂರು ದಿನಗಳ ಕಾಲ ವಿವಿಧ ಪೂಜಾ ಕಾರ್ಯಕ್ರಮ ನಡೆಯಲಿದ್ದು, ಇದಕ್ಕೆ ಬೇಕಾದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.ಈ ಸಂಬಂಧ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ನೇಮಿಸಿ ಶಿಷ್ಟಾಚಾರದಂತೆ ದತ್ತ ಜಯಂತಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲು ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ವಿವಿಧ ಜವಾಬ್ದಾರಿಗಳನ್ನು ನೀಡಲಾಗಿದೆ. ದತ್ತ ಜಯಂತಿ ಕಾರ್ಯಕ್ರಮಕ್ಕೆ ಅಲ್ಲಂಪುರ ದಿಂದ ಐಡಿ ಪೀಠದವರೆಗೆ ರಸ್ತೆ, ಕುಡಿಯುವ ನೀರು, ಪಾರ್ಕಿಂಗ್, ತಾತ್ಕಾಲಿಕ ಶೌಚಾಲಯ ವ್ಯವಸ್ಥೆ, ಆರೋಗ್ಯ ಸೇವೆ ಮತ್ತು ವಾಹನಗಳ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ ಎಂದ ಅವರು, ಕಾರ್ಯಕ್ರಮ ಶಾಂತಿ ಮತ್ತು ವ್ಯವಸ್ಥಿತವಾಗಿ ನಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು. ವ್ಯವಸ್ಥಾಪನ ಸಮಿತಿಯು ಪೂಜಾ ವಿಧಿ ವಿಧಾನಗಳನ್ನು ಮಾಡಲು ಎಲ್ಲ ರೀತಿಯ ಸಹಕಾರ ನೀಡಲಾಗಿದ್ದು, ಬರುವ ಭಕ್ತರಿಗೆ ಅಗತ್ಯ ಮೂಲಭೂತ ಸೌಕರ್ಯ ಸೇರಿದಂತೆ ಭಕ್ತಾಧಿಗಳಿಗೆ ಪ್ರಸಾದ ವ್ಯವಸ್ಥೆ ಮಾಡಿ ಕೊಳ್ಳಲಾಗಿದೆ. ಹೊರ ಜಿಲ್ಲೆಗಳಿಂದ ಬರುವ ಭಕ್ತರು ಲಾಂಗ್‌ಚಾರ್ಸಿ ಹೊಂದಿದ ಬಸ್ ಅಥವಾ ಇತರೆ ವಾಹನಗಳನ್ನು ಬಳಸದೆ ಸಣ್ಣ-ಸಣ್ಣ ವಾಹನಗಳಲ್ಲಿ ಭಕ್ತರು ಬಂದು ದರ್ಶನ ಪಡೆದುಕೊಳ್ಳಬೇಕು. ವಾಹನ ಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಅದೇ ಸ್ಥಳದಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಿಕೊಳ್ಳ ಬೇಕು. ಭಕ್ತರಿಗೆ ಅನುಕೂಲವಾಗುವಂತೆ ಫಲಕಗಳನ್ನು ಹಾಕಲಾಗಿದ್ದು, ಅವುಗಳನ್ನು ಪಾಲಿಸುವಂತೆ ಹಾಗೂ ಬರುವ ಭಕ್ತರು ಯಾವುದೇ ಕಾರಣಕ್ಕೂ ಅಹಿತಕರ ವಾತಾವರಣ ಉಂಟಾಗದಿರುವಂತೆ ಸಹಕರಿಸಬೇಕು. ಡಿ.24 ರಂದು ಬೆಳಿಗ್ಗೆ 8ಕ್ಕೆ ಪ್ರಾರಂಭವಾಗುವ ಪೂಜಾ ವಿಧಿ ವಿಧಾನಗಳ ಜೊತೆಗೆ ಅನುಸೂಯ ಜಯಂತಿ ಇರಲಿದ್ದು, 25 ರಂದು ಅದೇ ರೀತಿ ಪೂಜಾ ಕಾರ್ಯಕ್ರಮಗಳ ಜೊತೆ 26 ರಂದು ದತ್ತ ಜಯಂತಿ ಜರುಗಲಿದ್ದು, ಪ್ರತಿಯೊಬ್ಬರು ಶಾಂತಿಯಿಂದ ಐಡಿ ಪೀಠಕ್ಕೆ ಭೇಟಿ ನೀಡಿ ದರ್ಶನ ಪಡೆಯಬೇಕು ಎಂದು ಹೇಳಿದರು. ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗೋಪಾಲಕೃಷ್ಣ, ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಂ ಅಮಟೆ, ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ಹೆಚ್ಚುವರಿ ಪೊಲೀಸ್ ಮುಖ್ಯಾಧಿ ಕಾರಿ ಕೃಷ್ಣಮೂರ್ತಿ, ಉಪ ವಿಭಾಗಾಧಿಕಾರಿ ರಾಜೇಶ್, ತಹಸೀಲ್ದಾರ್ ಡಾ. ಸುಮಂತ್, ಐ.ಡಿ ಪೀಠದ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಎನ್. ಯೋಗೇಶ ಹಾಗೂ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹೇಮಂತ್‌, ಸದಸ್ಯರು, ವಿವಿಧ ಸಂಘಟನೆಗಳ ಮುಖಂಡರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

7 ಕೆಸಿಕೆಎಂ 4ಚಿಕ್ಕಮಗಳೂರಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಅಧ್ಯಕ್ಷತೆಯಲ್ಲಿ ದತ್ತ ಜಯಂತಿಯ ಪೂರ್ವ ಸಿದ್ದತಾ ಸಭೆ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಗವಂತನ ಶಕ್ತಿ ಪಡೆದವರಿಂದ ಡಿಕೆಶಿ ಸಿಎಂ ಆಗುವ ದಿನಾಂಕ ನಿಗದಿ : ಇಕ್ಬಾಲ್
ಜನ ನಂಗೆ ಇನ್ನೊಂದು ಅವಕಾಶ ಕೊಡಲಿ : ಎಚ್ಡಿಕೆ