ಇ ಸಿಎಂ, ಮಂತ್ರಿ ಬದಲಾವಣೆ ಹೈಕಮಾಂಡಿಗೆ ಬಿಟ್ಟದ್ದು :ಬಿ.ಕೆ.ಹರಿಪ್ರಸಾದ್

KannadaprabhaNewsNetwork |  
Published : Feb 17, 2025, 12:34 AM IST

ಸಾರಾಂಶ

ಬಿಜೆಪಿ ಹಾಗೂ ಆರ್.ಎಸ್.ಎಸ್ ಶಾಂತಿ ಕದಡಲು ಬಹಳ ಪ್ರಯತ್ನ ಮಾಡುತ್ತಿವೆ. ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಸೃಷ್ಟಿಯಾದ ಅಶಾಂತಿಯ ವಾತಾವರಣದಲ್ಲಿ ಶೇ.90ರಷ್ಟು ಎರಡೇ ತಿಂಗಳಲ್ಲಿ ಕಡಿಮೆಯಾಗಿದೆ ಎಂದು ನುಡಿದರು.ಯಾರೇ ಆಗಲಿ ಯಾವುದೇ ಧರ್ಮ, ಜಾತಿ, ಭಾಷೆಯ ಹೆಸರಿನಲ್ಲಿ ಶಾಂತಿ ಕದಡುವ ಯತ್ನಕ್ಕೆ ಕೈ ಹಾಕಿದರೆ ಕಾನೂನು ಪ್ರಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ರಾಜ್ಯದ ಗೃಹ ಸಚಿವರಿಗೆ ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ಕಲಬುರಗಿ

ರಾಜ್ಯದಲ್ಲಿ ಮುಖ್ಯಮಂತ್ರಿ ಹಾಗೂ ಮಂತ್ರಿಗಳ ಬದಲಾವಣೆ ಕುರಿತು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಬೇಕು. ಸದ್ಯಕ್ಕೆ ಪಕ್ಷದ ಹೈಕಮಾಂಡ್ ಕಲಬುರಗಿಯಲ್ಲೇ ಇರುವುದರಿಂದ ಎಲ್ಲವೂ ಅವರಿಗೇ ಗೊತ್ತು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ.ಕೆ.ಹರಿಪ್ರಸಾದ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಇಲ್ಲಿಯವರೇ ಆಗಿರುವುದರಿಂದ ಎಲ್ಲವೂ ಅವರಿಗೆ ಮಾತ್ರ ಗೊತ್ತು ಎಂದರು.

ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಈ ರೀತಿಯ ಚರ್ಚೆಗಳು ನಡೆಯುತ್ತಲೇ ಬಂದಿವೆ.

ರಾಜಕೀಯದಲ್ಲಿ ಇವೆಲ್ಲಾ ಮಾಮೂಲು ಎಂದು ವ್ಯಾಖ್ಯಾನಿಸಿದರು.

ನನ್ನ ವಿಚಾರದಲ್ಲಿ ಯಾವ ಶ್ರೀಗಳು ಸಹ ಮಾತಾಡಬಾರದು ಎಂದು ಹೇಳಿದ ಅವರು, ಸ್ವಾಮೀಜಿಗಳು ಎನಿಸಿಕೊಂಡವರು ರಾಜಕೀಯ ಮಾತಾಡಬಾರದು ಎಂದರು. ಮೈಸೂರಿನ ಉದಯಗಿರಿ ಗಲಾಟೆ ಕುರಿತು ಪ್ರಸ್ತಾಪಿಸಿದ ಹರಿಪ್ರಸಾದ, ಈ ಗಲಾಟೆ ಬಿಜೆಪಿ ಮತ್ತು ಆರ್.ಎಸ್.ಎಸ್ ಕೃತ್ಯ ಎಂದರು.

ಬಿಜೆಪಿ ಹಾಗೂ ಆರ್.ಎಸ್.ಎಸ್ ಶಾಂತಿ ಕದಡಲು ಬಹಳ ಪ್ರಯತ್ನ ಮಾಡುತ್ತಿವೆ. ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಸೃಷ್ಟಿಯಾದ ಅಶಾಂತಿಯ ವಾತಾವರಣದಲ್ಲಿ ಶೇ.90ರಷ್ಟು ಎರಡೇ ತಿಂಗಳಲ್ಲಿ ಕಡಿಮೆಯಾಗಿದೆ ಎಂದು ನುಡಿದರು.

ಯಾರೇ ಆಗಲಿ ಯಾವುದೇ ಧರ್ಮ, ಜಾತಿ, ಭಾಷೆಯ ಹೆಸರಿನಲ್ಲಿ ಶಾಂತಿ ಕದಡುವ ಯತ್ನಕ್ಕೆ ಕೈ ಹಾಕಿದರೆ ಕಾನೂನು ಪ್ರಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ರಾಜ್ಯದ ಗೃಹ ಸಚಿವರಿಗೆ ಮನವಿ ಮಾಡಿದರು.

ವಿಜಯಪುರದಲ್ಲಿ ಪಾಕಿಸ್ತಾನದ ಬಾವುಟ ಹಾರಿಸಿದ ವ್ಯಕ್ತಿ ಸಂಘ ಪರಿವಾರಕ್ಕೆ ಸೇರಿದವನು ಎಂಬುದು ಎಲ್ಲರಿಗೂ ಗೊತ್ತಿದೆ. ಸಂಘ ಪರಿವಾರದವರು ಕೆಲವು ಕಡೆ ಬುರ್ಖಾ ಧರಿಸಿ ಗಲಾಟೆ ಮಾಡುತ್ತಾರೆ. ಉದಯಗಿರಿ ಗಲಾಟೆ ಹೊಸದೇನೂ ಅಲ್ಲ. ಆರ್.ಎಸ್.ಎಸ್ ಗೆ ನೂರು ವರ್ಷ ತುಂಬುತ್ತಿರುವ ಹಿನ್ನೆಲೆ ಪಿತೃ ಪಕ್ಷ ಆಚರಣೆ ಹೆಸರಿನಲ್ಲಿ ಹೀಗೆಲ್ಲಾ ಮಾಡುತ್ತಾರೆ ಎಂದು ವಿಶ್ಲೇಷಿಸಿದರು.

ಉದಯಗಿರಿ ಮಾದರಿಯ ಚಿಂತನೆಗಳನ್ನು ಅನುಷ್ಠಾನಕ್ಕೆ ತರಲು ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಕರ್ನಾಟಕದಲ್ಲಿ ಅದು ಸಾಧ್ಯವಿಲ್ಲ. ಶಾಂತಿ ಕದಡುವ ಯತ್ನ ಇವರೇ ಮಾಡುತ್ತಿದ್ದಾರೆ. ಈ ಕುರಿತು ತನಿಖೆ ನಡೆಯಬೇಕು ಎಂದರು.

PREV

Recommended Stories

ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆಶಿ
ನೀವು ಬೆಳಗಾವಿ ಕೇಳಿದ್ರೆ, ನಾವು ಮುಂಬೈ ಕೇಳಬೇಕಾಗುತ್ತೆ