ಜಾಲತಾಣ ಮೇಲೆ ಹದ್ದಿನ ಕಣ್ಣು: ಎಸ್ಪಿ ಹರಿರಾಮ್‌ ಶಂಕರ್‌

KannadaprabhaNewsNetwork |  
Published : Jun 04, 2025, 01:33 AM IST
3ಎಸ್ಪಿ | Kannada Prabha

ಸಾರಾಂಶ

ಉಡುಪಿ ಜಿಲ್ಲೆಯಲ್ಲಿ ಕಳೆದ 3 ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನಾಕಾರಿ ಪೋಸ್ಟ್‌ಗಳನ್ನು ಪ್ರಸಾರ ಮಾಡಿರುವ ಇಬ್ಬರ ಮೇಲೆ ಪ್ರಕರಣ ದಾಖಲಾಗಿದ್ದು, ಅವರನ್ನು ಬಂಧಿಸಲಾಗಿದೆ. ಯಾರೂ ಇಂತಹ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಬಾರದು ಎಂದು ಉಡುಪಿಯ ನೂತನ ಎಸ್ಪಿ ಹರಿರಾಮ್ ಶಂಕರ್ ಎಚ್ಚರಿಕೆ ನೀಡಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಇಬ್ಬರನ್ನು ಬಂಧಿಸಿದ್ದೇವೆಕನ್ನಡಪ್ರಭ ವಾರ್ತೆ ಉಡುಪಿ

ಉಡುಪಿ ಜಿಲ್ಲೆಯಲ್ಲಿ ಕಳೆದ 3 ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನಾಕಾರಿ ಪೋಸ್ಟ್‌ಗಳನ್ನು ಪ್ರಸಾರ ಮಾಡಿರುವ ಇಬ್ಬರ ಮೇಲೆ ಪ್ರಕರಣ ದಾಖಲಾಗಿದ್ದು, ಅವರನ್ನು ಬಂಧಿಸಲಾಗಿದೆ. ಇಂತಹ ಪ್ರಕರಣಗಳನ್ನು ಪೊಲೀಸ್ ಇಲಾಖೆ ತೀವ್ರ ನಿಗಾ ವಹಿಸಿದೆ. ಆದ್ದರಿಂದ ಯಾರೂ ಇಂತಹ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಬಾರದು ಎಂದು ಉಡುಪಿಯ ನೂತನ ಎಸ್ಪಿ ಹರಿರಾಮ್ ಶಂಕರ್ ಎಚ್ಚರಿಕೆ ನೀಡಿದ್ದಾರೆ.ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನಾಕಾರಿ ಪೋಸ್ಟ್‌ಗಳು ಹರಿದಾಡುತ್ತಿವೆ. ಇಂತಹ ಪೋಸ್ಟ್‌ಗಳನ್ನು ಪೊಲೀಸ್ ಇಲಾಖೆ ಬಹಳ ಗಂಭೀರ ತೆಗೆದುಕೊಂಡಿದೆ. ಉಡುಪಿ ಜಿಲ್ಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನಾಕಾರಿ ಸಂದೇಶಗಳನ್ನು ಮೇಲೆ ಕಣ್ಣಿಡುವುದಕ್ಕೆ ತಂಡ ರಚಿಸಲಾಗಿದೆ. ಜೊತೆಗೆ ರಾಜ್ಯ ಮಟ್ಟದಲ್ಲಿಯೂ ಸಾಮಾಜಿಕ ಜಾಲತಾಣಗಳ ಪರಿಶೀಲನೆ ನಡೆಯುತ್ತಿದೆ ಎಂದವರು ಹೇಳಿದ್ದಾರೆ. ಇಂತಹ ಪ್ರಕರಣಗಳಲ್ಲಿ ಸಿಕ್ಕಿಬಿದ್ದು ಬಂಧನಕ್ಕೊಳಗಾದವರಿಗೆ ಸರ್ಕಾರಿಯಾಗಲಿ, ಖಾಸಗಿಯಾಗಿ ಉದ್ಯೋಗ, ಅಥವಾ ಸೈನ್ಯ ಅಥವಾ ಪೊಲೀಸ್ ಇಲಾಖೆಯಲ್ಲಿಯೂ ಅವಕಾಶ ಸಿಗುವುದಿಲ್ಲ, ಆದ್ದರಿಂದ ಫೇಸ್‌ಬುಕ್, ವಾಟ್ಸಾಪ್‌ ಅಥವಾ ಇನ್ಸ್ಟಾಗ್ರಾಮ್‌ಗಳಲ್ಲಿ ಇಂತಹ ಪೋಸ್ಟ್‌ಗಳನ್ನು ಹಾಕುವ, ಶೇರ್‌ ಮಾಡುವ ಅಥವಾ ಫಾರ್ವರ್ಡ್ ಮಾಡಬಾರದು ಎಂದವರು ಕಿವಿಮಾತು ಹೇಳಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿವಗಂಗೆ ಕ್ಷೇತ್ರದ ಅಭಿವೃದ್ದಿಗೆ ಬದ್ಧ : ಶಾಸಕ ಶ್ರೀನಿವಾಸ್
ದಕ್ಷಿಣಕಾಶಿ ಶಿವಗಂಗೆಯಲ್ಲಿ ಗಂಗಪ್ಪನಧಾರೆ ಸಂಪನ್ನ