ಸಾಮಾಜಿಕ ನ್ಯಾಯ ಗಮನದಲ್ಲಿಟ್ಟುಕೊಂಡು ಶಿಗ್ಗಾಂವಿ ಅಭ್ಯರ್ಥಿ ಆಯ್ಕೆ-ಸಚಿವ ಎಚ್‌.ಕೆ. ಪಾಟೀಲ

KannadaprabhaNewsNetwork |  
Published : Oct 21, 2024, 12:43 AM ISTUpdated : Oct 21, 2024, 12:44 AM IST
ಪೋಟೋ ಇದೆ. | Kannada Prabha

ಸಾರಾಂಶ

ಶಿಗ್ಗಾಂವಿಯಲ್ಲಿ ಸಾಮಾಜಿಕ ನ್ಯಾಯ ಗಮನದಲ್ಲಿಟ್ಟುಕೊಂಡು ಅಭ್ಯರ್ಥಿ ಆಯ್ಕೆ ಮಾಡುತ್ತೇವೆ. ಸೋಮವಾರದೊಳಗೆ ಹೆಸರು ಫೈನಲ್‌ ಆಗಲಿದೆ ಎಂದು ಸಚಿವ ಎಚ್‌.ಕೆ. ಪಾಟೀಲ ಹೇಳಿದರು.

ಹಾವೇರಿ: ಶಿಗ್ಗಾಂವಿಯಲ್ಲಿ ಸಾಮಾಜಿಕ ನ್ಯಾಯ ಗಮನದಲ್ಲಿಟ್ಟುಕೊಂಡು ಅಭ್ಯರ್ಥಿ ಆಯ್ಕೆ ಮಾಡುತ್ತೇವೆ. ಸೋಮವಾರದೊಳಗೆ ಹೆಸರು ಫೈನಲ್‌ ಆಗಲಿದೆ ಎಂದು ಸಚಿವ ಎಚ್‌.ಕೆ. ಪಾಟೀಲ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್‌ಗೆ ನಮ್ಮ ಅಭಿಪ್ರಾಯ ತಿಳಿಸಿದ್ದೇವೆ. ಕಾರ್ಯಕರ್ತರ ಅಭಿಪ್ರಾಯ, ನಾಯಕರ ಶಿಫಾರಸು, ಶಾಸಕರ ಅಭಿಪ್ರಾಯ ಹೈಕಮಾಂಡ್‌ಗೆ ಕಳಿಸಲಾಗಿದೆ. ಕಾಂಗ್ರೆಸ್ ತನ್ನ ತತ್ವ ಸಿದ್ದಾಂತಗಳನ್ನು ಎಂದಿಗೂ ಬಿಡುವುದಿಲ್ಲ. ಮುಸ್ಲಿಂ ಸಮುದಾಯದ ಇಬ್ಬರು ಆಕಾಂಕ್ಷಿಗಳನ್ನು ಕುಳಿಸಿ ಮಾತಾಡಿ ಅಭ್ಯರ್ಥಿ ಮಾಡುತ್ತೇವೆ. ಶಿಗ್ಗಾಂವಿಯಲ್ಲಿ ಟಿಕೆಟ್ ಬದಲಾವಣೆ ಆಗುತ್ತದೆ ಎಂದು ಹೇಳಲಾಗುವುದಿಲ್ಲ.

ಕಾಂಗ್ರೆಸ್‌ನಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆಯುವುದಿಲ್ಲ. ರಾಜಕಾರಣದಲ್ಲಿ ಸಾಫ್ಟ್‌, ಹಾಡ್೯ ಎಂಬುದಿಲ್ಲ ಎಂದು ಹೇಳಿದರು. ಮುಡಾ ಪ್ರಕರಣದಲ್ಲಾದ ರಾಜಕಾರಣ ಬಗ್ಗೆ ಜನರು ಚುನಾವಣೆಯಲ್ಲಿ ಉತ್ತರ ಕೊಡುತ್ತಾರೆ. ಚುನಾವಣೆ ಘೋಷಣೆಗೂ ಇಡಿ ರೇಡ್‌ಗೂ ಏನು ಸಂಬಂಧ, ಚುನಾವಣೆ ಘೋಷಣೆ ಆಗುತ್ತಿದ್ದಂತೆ ಇ ಡಿ ಕ್ರಿಯಾಶೀಲವಾಯ್ತಾ ಎಂದು ಪ್ರಶ್ನಿಸಿದ ಅವರು, ಮುಡಾ ಪ್ರಕರಣದಲ್ಲಿ ಯಾವುದಾದರೂ ಹಣಕಾಸು ಬದಲಾವಣೆ ಆಗಿದೆಯಾ, ಯಾರಾದ್ರು ಆಸ್ತಿ ತಗೊಂಡು ಓಡಿ ಹೋಗಿದ್ದಾರಾ, ರಾಜಕೀಯ ದುರುದ್ದೇಶ, ಕುತಂತ್ರ ಪ್ರಜಾಪ್ರಭುತ್ವಕ್ಕೆ ಸೂಕ್ತವಲ್ಲ. ಇಡಿಯನ್ನು ರಾಜಕೀಯ ದುರುದ್ದೇಶಕ್ಕೆ ಕೇಂದ್ರ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ