ಹಾವೇರಿ: ಶಿಗ್ಗಾಂವಿಯಲ್ಲಿ ಸಾಮಾಜಿಕ ನ್ಯಾಯ ಗಮನದಲ್ಲಿಟ್ಟುಕೊಂಡು ಅಭ್ಯರ್ಥಿ ಆಯ್ಕೆ ಮಾಡುತ್ತೇವೆ. ಸೋಮವಾರದೊಳಗೆ ಹೆಸರು ಫೈನಲ್ ಆಗಲಿದೆ ಎಂದು ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಕಾಂಗ್ರೆಸ್ನಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆಯುವುದಿಲ್ಲ. ರಾಜಕಾರಣದಲ್ಲಿ ಸಾಫ್ಟ್, ಹಾಡ್೯ ಎಂಬುದಿಲ್ಲ ಎಂದು ಹೇಳಿದರು. ಮುಡಾ ಪ್ರಕರಣದಲ್ಲಾದ ರಾಜಕಾರಣ ಬಗ್ಗೆ ಜನರು ಚುನಾವಣೆಯಲ್ಲಿ ಉತ್ತರ ಕೊಡುತ್ತಾರೆ. ಚುನಾವಣೆ ಘೋಷಣೆಗೂ ಇಡಿ ರೇಡ್ಗೂ ಏನು ಸಂಬಂಧ, ಚುನಾವಣೆ ಘೋಷಣೆ ಆಗುತ್ತಿದ್ದಂತೆ ಇ ಡಿ ಕ್ರಿಯಾಶೀಲವಾಯ್ತಾ ಎಂದು ಪ್ರಶ್ನಿಸಿದ ಅವರು, ಮುಡಾ ಪ್ರಕರಣದಲ್ಲಿ ಯಾವುದಾದರೂ ಹಣಕಾಸು ಬದಲಾವಣೆ ಆಗಿದೆಯಾ, ಯಾರಾದ್ರು ಆಸ್ತಿ ತಗೊಂಡು ಓಡಿ ಹೋಗಿದ್ದಾರಾ, ರಾಜಕೀಯ ದುರುದ್ದೇಶ, ಕುತಂತ್ರ ಪ್ರಜಾಪ್ರಭುತ್ವಕ್ಕೆ ಸೂಕ್ತವಲ್ಲ. ಇಡಿಯನ್ನು ರಾಜಕೀಯ ದುರುದ್ದೇಶಕ್ಕೆ ಕೇಂದ್ರ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.