ಕನ್ನಡಪ್ರಭ ವಾರ್ತೆ ಮಂಡ್ಯ
ಪ್ರಧಾನಿ ನರೇಂದ್ರ ಮೋದಿ ಅವರು, ಬಿಹಾರದ ಬಾಗಲ್ಪುರದಿಂದ ಪಿಎಂ ಕಿಸಾನ್ ಸಮ್ಮಾನ್ ಯೋಜನೆ ೧೯ನೇ ಕಂತಿನ ಹಣ ಬಿಡುಗಡೆ ಮಾಡಿದ ಕಾರ್ಯಕ್ರಮವನ್ನು ಮಂಡ್ಯದ ವಿ.ಸಿ.ಫಾರಂನಲ್ಲಿ ಆನ್ಲೈನ್ ಮೂಲಕ ವೀಕ್ಷಿಸಿ ಬಳಿಕ ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿಯವರು ಈ ಯೋಜನೆಯ ೧೯ನೇ ಕಂತಿನಲ್ಲಿ ಮಂಡ್ಯ ಜಿಲ್ಲೆಯ ೨,೨೪,೬೩೪ ರೈತರಿಗೆ ೪೪.೯೩ ಕೋಟಿ ಹಣ ಜಮೆ ಆಗಿದೆ. ರಾಜ್ಯದ ಒಟ್ಟಾರೆ ೪,೭೫,೦೪೫೭ ಅರ್ಹ ಫಲಾನುಭವಿ ರೈತರಿಗೆ ಒಟ್ಟು ೯೫೦.೦೯ ಕೋಟಿ ಮೊತ್ತ ಜಮೆ ಆಗಿದೆ ಎಂದು ಸಚಿವರು ಮಾಹಿತಿ ನೀಡಿದರು.ದೇಶದಲ್ಲಿ ಒಟ್ಟಾರೆ ಅರ್ಹ ೯.೮ ಕೋಟಿ ರೈತರ ಖಾತೆಗೆ ೨ ಸಾವಿರ ರು. ಹಣ ಜಮೆ ಮಾಡಲಾಗಿದೆ. ಪ್ರಧಾನಿಗಳು ೨೨,೦೦೦ ಕೋಟಿ ರು. ಹಣ ಬಿಡುಗಡೆ ಮಾಡಿದ್ದಾರೆ. ರೈತಪರ ಕಾಳಜಿ ಹಾಗೂ ಕೃಷಿಯನ್ನು ಅಭಿವೃದ್ಧಿಪಡಿಸುವ ಇಚ್ಛಾಶಕ್ತಿಯಿಂದ ಪ್ರಧಾನಿಗಳು ಈ ಯೋಜನೆಯನ್ನು ಮುಂದುವರಿಸಿದ್ದಾರೆ ಎಂದರು.
ರೈತರ ನಿರೀಕ್ಷೆ ಇನ್ನೂ ಹೆಚ್ಚಿದೆ. ಅದನ್ನು ಮೋದಿ ಅವರು ಖಂಡಿತಾ ಈಡೇರಿಸುತ್ತಾರೆ. ರೈತರು ಕೂಡ ಸರ್ಕಾರ ಕೊಡುವ ಅನುಕೂಲಗಳನ್ನು ಸದ್ಬಳಕೆ ಮಾಡಿಕೊಂಡು ವೈಜ್ಞಾನಿಕವಾಗಿ ಬೆಳೆ ತೆಗೆಯಬೇಕು ಎಂದು ಸಲಹೆ ನೀಡಿದರು.
ಜಿಲ್ಲಾಧಿಕಾರಿ ಕುಮಾರ್, ಸಿಇಒ ನಂದಿನಿ, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಶಾಸಕ ಎಚ್.ಟಿ.ಮಂಜು, ವಿಧಾನ ಪರಿಷತ್ ಸದಸ್ಯರಾದ ಕೆ.ವಿವೇಕಾನಂದ, ಮಂಜೇಗೌಡ, ಮಾಜಿ ಶಾಸಕ ಡಾ.ಕೆ.ಅನ್ನದಾನಿ ಸೇರಿದಂತೆ ಇತರರಿದ್ದರು.