ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ಟಿಎಪಿಸಿಎಂಎಸ್ ರೈತ ಸಮುದಾಯ ಭವನದಲ್ಲಿ ಶನಿವಾರ ನಡೆದ ಸಿಪಿಐ(ಎಂ) ಪಕ್ಷದ ಸರ್ವಸದಸ್ಯರ ಸಭೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಜನವಿರೋಧಿ ನೀತಿಗಳ ಕಿರುಹೊತ್ತಿಗೆ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಚುನಾವಣೆ ಬಾಂಡ್ ಹೆಸರಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ಸುಪ್ರೀಂಕೋರ್ಟ್ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಯಾಗಬೇಕು ಎಂದು ಆಗ್ರಹಿಸಿದರು.
ಜಗತ್ತಿನ ಅತಿದೊಡ್ಡ ಭ್ರಷ್ಟಾಚಾರ ಪ್ರಕರಣ ಚುನಾವಣೆ ಬಾಂಡ್ ಹೆಸರಿನಲ್ಲಿ ನಡೆದಿದೆ. ಬಿಜೆಪಿಯು ಸುಮಾರು 8500 ಕೋಟಿ ರು.ಸುಲಿಗೆ ಮಾಡಿದೆ. ಕಳೆದ 10 ವರ್ಷಗಳಿಂದ ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿ ಅವರ ಸರ್ಕಾರದ ನೀತಿಗಳಿಂದ ದೇಶದಲ್ಲಿ ಬಡವರು - ಶ್ರೀಮಂತರ ಅಂತರ ಹೆಚ್ಚಿದೆ. ಬಡವರಿಂದ ತೆರಿಗೆ ವಸೂಲಿ ಮಾಡಿ ಶ್ರೀಮಂತ ಉದ್ಯಮಿಗಳ ಸಾಲ ಮನ್ನಾ, ತೆರಿಗೆ ಮನ್ನಾದ ಹೆಸರಿನಲ್ಲಿ ಸಂಪತ್ತಿನ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿದರು.ದೆಹಲಿ ಮುಖ್ಯಮಂತ್ರಿ ಅರವಿಂದ್ ಕ್ರೇಜಿವಾಲ್ ರನ್ನು ರಾಜಕೀಯ ಉದ್ದೇಶದಿಂದ ಬಂಧನ ಮಾಡಿರುವುದು ಸರಿಯಲ್ಲ. ಕೂಡಲೇ ಅವರನ್ನು ಬಿಡುಗಡೆ ಮಾಡಬೇಕು. ಪ್ರಸ್ತುತ ಕೋಮುವಾದಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ನಿರ್ಧರಿಸಿದ್ದೇವೆ ಎಂದು ಹೇಳಿದರು.
ಈ ವೇಳೆ ರಾಜ್ಯ ಸಮಿತಿ ಸದಸ್ಯರಾದ ದೇವಿ, ಎಂ.ಪುಟ್ಟಮಾಧು, ಜಿಲ್ಲಾ ಮಂಡಳಿ ಸದಸ್ಯರಾದ ಎನ್.ಎಲ್.ಭರತ್ ರಾಜ್, ತಾಲೂಕು ಘಟಕದ ಕಾರ್ಯದರ್ಶಿ ಸುಶೀಲಾ, ಜಿಲ್ಲಾ ಸಮಿತಿ ಸದಸ್ಯರಾದ ಎನ್.ಲಿಂಗರಾಜಮೂರ್ತಿ, ಬಸವರಾಜು ಇದ್ದರು.