ರಾಜಕೀಯ ಲಾಭಕ್ಕಾಗಿ ಇಡಿ ದುರ್ಬಳಕೆ: ಸಚಿವ ಲಾಡ್‌

KannadaprabhaNewsNetwork |  
Published : Jun 14, 2025, 12:29 AM ISTUpdated : Jun 14, 2025, 12:30 AM IST
ಸಂತೋಷ ಲಾಡ್ | Kannada Prabha

ಸಾರಾಂಶ

ದೇಶದಲ್ಲಿ ೧೧ ವರ್ಷದ ಅವಧಿಯಲ್ಲಿ ೪,೫೦೦ ಇಡಿ ದಾಳಿಯಾಗಿದ್ದು, ಇದರಲ್ಲಿ ಯಶಸ್ಸಿನ ದರ ಶೇ.೧ರಷ್ಟೂ ಇಲ್ಲ. ಹೀಗಾಗಿ, ಸುಪ್ರೀಂಕೋರ್ಟ್ ಛೀಮಾರಿ ಹಾಕಿದೆ. ಬಿಜೆಪಿಯೇತರ ಆಡಳಿತ ಮತ್ತು ಕಾಂಗ್ರೆಸ್ ಸರ್ಕಾರ ಇರುವ ರಾಜ್ಯಗಳಲ್ಲಿ ಶೇ. ೯೦ಕ್ಕಿಂತ ಹೆಚ್ಚು ದಾಳಿಗಳಾಗಿವೆ. ಯಾವುದೇ ರಾಜಕೀಯ ಪಕ್ಷಗಳು ಶಾಶ್ವತವಾಗಿ ಅಧಿಕಾರದಲ್ಲಿ ಇರಲ್ಲ. ಈ ಬಗ್ಗೆ ಬಿಜೆಪಿ ಗಮನ ಹರಿಸಲಿ.

ಹುಬ್ಬಳ್ಳಿ: ಕೇವಲ ರಾಜಕೀಯ ಲಾಭಕ್ಕಾಗಿ ಇಡಿಯಂತಹ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಈ ರೀತಿಯ ದಾಳಿ ನಡೆಸುವುದು ಸರಿಯಲ್ಲ ಎಂದು ಸಚಿವ ಸಂತೋಷ ಲಾಡ್ ಕಿಡಿಕಾರಿದ್ದಾರೆ.

ಬಳ್ಳಾರಿಯಲ್ಲಿ ಇಡಿ ದಾಳಿ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ದೇಶದಲ್ಲಿ ೧೧ ವರ್ಷದ ಅವಧಿಯಲ್ಲಿ ೪,೫೦೦ ಇಡಿ ದಾಳಿಯಾಗಿದ್ದು, ಇದರಲ್ಲಿ ಯಶಸ್ಸಿನ ದರ ಶೇ.೧ರಷ್ಟೂ ಇಲ್ಲ. ಹೀಗಾಗಿ, ಸುಪ್ರೀಂಕೋರ್ಟ್ ಛೀಮಾರಿ ಹಾಕಿದೆ. ಬಿಜೆಪಿಯೇತರ ಆಡಳಿತ ಮತ್ತು ಕಾಂಗ್ರೆಸ್ ಸರ್ಕಾರ ಇರುವ ರಾಜ್ಯಗಳಲ್ಲಿ ಶೇ. ೯೦ಕ್ಕಿಂತ ಹೆಚ್ಚು ದಾಳಿಗಳಾಗಿವೆ. ಯಾವುದೇ ರಾಜಕೀಯ ಪಕ್ಷಗಳು ಶಾಶ್ವತವಾಗಿ ಅಧಿಕಾರದಲ್ಲಿ ಇರಲ್ಲ. ಈ ಬಗ್ಗೆ ಬಿಜೆಪಿ ಗಮನ ಹರಿಸಲಿ ಎಂದರು.

ಚುನಾವಣೆಗೆ ಹಣ ಬಳಕೆ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಲಾಡ್, ಹಣ ಬಳಕೆ ಬಗ್ಗೆ ಎಲ್ಲಿಯೂ ಸಾಬೀತಾಗಿಲ್ಲ. ಆರೋಪ ಇದೆಯಾದರೂ ತನಿಖೆ ನಡೆಯುತ್ತಿದೆ. ಆದರೆ, ಚುನಾವಣಾ ಬಾಂಡ್‌ಗಳ ಬಗ್ಗೆ ಏಕೆ ಪ್ರಶ್ನೆ ಬರುತ್ತಿಲ್ಲ. ಅವುಗಳಿಂದ ಬಂದಿರುವ ₹೮.೫೦೦ ಕೋಟಿ ಹಣ ಏನಾಗಿದೆ? ಇದೊಂದು ಹಗಲು ಭ್ರಷ್ಟಾಚಾರವಾಗಿದ್ದು, ಅಲ್ಲಿ ಇಡಿ ದಾಳಿ ಏಕಾಗಿಲ್ಲ? ಐಪಿಎಲ್ ಬೆಟ್ಟಿಂಗ್, ವಂಚನೆ ಮಾಡುವವರ, ಗೋವು ಮಾಂಸ ರಫ್ತು ಮಾಡುವ ಕಂಪನಿಗಳಿಂದ ಚಂದಾ ಪಡೆದು ಬಿಜೆಪಿ ಪಕ್ಷ ಕಟ್ಟಿದೆ. ಈ ಬಗ್ಗೆ ಚರ್ಚೆ ಆಗಬೇಕು ಎಂದು ಒತ್ತಾಯಿಸಿದರು.

ಅಹಮದಾಬಾದ್‌ ವಿಮಾನ ದುರಂತದಲ್ಲಿ ಮಡಿದವವರಿಗೆ ಸಂತಾಪ ಸೂಚಿಸಿ, ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸಿದರು. ಹೊಸ ವಿಮಾನವೇ ಈ ರೀತಿ ದುರಂತಕ್ಕೀಡಾಗೀರುವುದು ದುರಾದೃಷ್ಟಕರ ಎಂದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಪ್ರಯಾಣಿಸಿದ ಸಚಿವ ಲಾಡ್: ಕುಂದಗೋಳ ತಾಲೂಕಿನ ವಿವಿಧ ಹಳ್ಳಿಗಳಲ್ಲಿ ಶುಕ್ರವಾರ ಮಳೆ ಹಾನಿ ಪ್ರದೇಶಗಳನ್ನು ವೀಕ್ಷಣೆ ಮಾಡಲು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಮಾಧ್ಯಮ ಪ್ರತಿನಿಗಳೊಂದಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾಹನದಲ್ಲಿ ಸಂಚಾರ ಮಾಡಿ ಸರಳತೆ ಮೆರೆದರು. ಇಲ್ಲಿನ ಪ್ರವಾಸಿ ಮಂದಿರದಿಂದ ಕುಂದಗೋಳವರೆಗೆ ವಾರ್ತಾ ಇಲಾಖೆಯ ವಾಹನದಲ್ಲಿ ಸಂಚರಿಸಿದ ಅವರು, ವಾಹನದಲ್ಲಿ ಪತ್ರಕರ್ತರೊಂದಿಗೆ ಹಾನಿ ಪ್ರದೇಶದ ಬಗ್ಗೆ ವಿವರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''