ಹಿಂದೂ ಧರ್ಮದಲ್ಲಿ ಮಂತ್ರಾಕ್ಷತೆಗೆ ಮಹತ್ವ: ಎಡನೀರು ಶ್ರೀ

KannadaprabhaNewsNetwork |  
Published : Dec 02, 2023, 12:45 AM IST
ಫೋಟೋ: ೧ಪಿಟಿಆರ್-ಮಂತ್ರಾಕ್ಷತೆಅಯೋಧ್ಯೆಯಿಂದ ತರಲಾದ ಮಂತ್ರಾಕ್ಷತೆಯನ್ನು ವಿವಿಧ ತಾಲೂಕುಗಳಿಗೆ ಕಳುಹಿಸಿಕೊಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. | Kannada Prabha

ಸಾರಾಂಶ

ಅಯೋಧ್ಯೆಯಿಂದ ತರಲಾದ ಮಂತ್ರಾಕ್ಷತೆ ಕಲಶಕ್ಕೆ ಪುತ್ತೂರು, ಬೆಳ್ತಂಗಡಿಯಲ್ಲಿ ಅದ್ಧೂರಿ ಸ್ವಾಗತ, ಎಡನೀರು ಸ್ವಾಮೀಜಿ ಭಾಗಿ, ಆಶೀರ್ವಚನ ನೀಡಿದರು.

ಕನ್ನಡಪ್ರಭವಾರ್ತೆ ಪುತ್ತೂರು: ಹಿಂದೂ ಧರ್ಮದಲ್ಲಿ ಮಂತ್ರಾಕ್ಷತೆಗೆ ಬಹಳ ಮಹತ್ವವಿದೆ. ಇದೀಗ ಅಯೋಧ್ಯೆಯಿಂದ ತರಲಾದ ಮಂತ್ರಾಕ್ಷತೆಯನ್ನು ಪ್ರತಿಯೊಬ್ಬ ಹಿಂದೂ ಮನೆಗೆ ತಲುಪಿಸಿ ಶ್ರೀರಾಮ ಕೈಂಕರ್ಯದಲ್ಲಿ ತೊಡಗಿಕೊಂಡಲ್ಲಿ ಶ್ರೀರಾಮನ ಪುನಃ ಪ್ರತಿಷ್ಠೆಗೆ ಅರ್ಥ ಬರುವ ಜತೆಗೆ ಹಿಂದೂ ಧರ್ಮ ಉಜ್ವಲಿಸುತ್ತದೆ ಎಂದು ಎಡನೀರು ಮಠದ ಶ್ರೀ ಸಚ್ಚಿದಾನಂದ ಸ್ವಾಮೀಜಿ ಹೇಳಿದ್ದಾರೆ.

ಗುರುವಾರ ಶ್ರೀ ಲಕ್ಷ್ಮೀ ವೆಂಕಟ್ರಮಣ ದೇವಸ್ಥಾನದ ಸಭಾಮಂದಿರದಲ್ಲಿ ಅಯೋಧ್ಯೆ ರಾಮಜನ್ಮ ಭೂಮಿ ಮಂದಿರದಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀರಾಮ ಜನ್ಮಭೂಮಿ ಮಂದಿರದಲ್ಲಿ ಜ.೨೨ರಂದು ಶ್ರೀರಾಮ ಪ್ರಾಣಪ್ರತಿಷ್ಠೆ ಅಂಗವಾಗಿ ಅಯೋಧ್ಯೆಯಿಂದ ತರಲಾದ ಮಂತ್ರಾಕ್ಷತೆಯನ್ನು ವಿವಿಧ ತಾಲೂಕುಗಳಿಗೆ ಕಳುಹಿಸಿಕೊಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದರು.

ವಿಶ್ವ ಹಿಂದೂ ಪರಿಷತ್‌ನ ಪ್ರಾಂತ ಪ್ರಮುಖ್ ನ.ಸೀತಾರಾಮ ಮಾತನಾಡಿ, ೧೫೨೮ ರಲ್ಲಿ ಭವ್ಯ ಮಂದಿರವನ್ನು ಹೊರಗಡೆ ಶಕ್ತಿ ನಾಶ ಮಾಡಿದೆ. ರಾಮಮಂದಿರ ಪುನರ್ ನಿರ್ಮಾಣದ ಹೋರಾಟಗಳು ಕೈಗೊಂಡು ೪೯೬ ವರ್ಷಗಳು ಕಳೆದಿದ್ದರೂ ಹಿಂದೂಗಳ ಸಹನೆ ಶಕ್ತಿಯಾಗಿ ರೂಪುಗೊಂಡಿದೆ. ಆ ಬಳಿಕದ ದಿನಗಳಲ್ಲಿ ಹಿಂದೂ ಧರ್ಮವನ್ನು ಜಗತ್ತು ನೋಡುವ ದೃಷ್ಟಿ ಬದಲಾಯಿತು. ಭಕ್ತರ ಭಾವನೆಗೆ ತಕ್ಕಂತೆ ಸರಕಾರದ ಅನುದಾನವಿಲ್ಲದೆ ಭವ್ಯ ತೀರ್ಥ ಕ್ಷೇತ್ರ ಜಗತ್ತಿನ ತೀರ್ಥ ಕ್ಷೇತ್ರವಾಗಿ ರೂಪುಗೊಳ್ಳಲಿದೆ ಎಂದರು.

ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಜಿಲ್ಲಾ ಸಂಚಾಲಕ ಡಾ.ಕೃಷ್ಣ ಪ್ರಸನ್ನ ಪುತ್ತೂರು, ಜಿಲ್ಲಾ ಸಂಘ ಸಂಚಾಲಕ ವಿನಯಚಂದ್ರ, ವಿಭಾಗ ಕಾರ್ಯದರ್ಶಿ ದೇವಿಪ್ರಸಾದ್ ಇದ್ದರು. ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಜಿಲ್ಲಾ ಅಧ್ಯಕ್ಷ ರವೀಂದ್ರ ಪಿ. ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರಿ ಶಾಲೆಗಳು ಅಮೃತ ಮಹೋತ್ಸವ ಆಚರಿಸಿಕೊಳ್ಳುವುದು ಸಂತಸದ ಸಂಗತಿ
ಕಾಂಗ್ರೆಸ್ಸಲ್ಲಿ ಸಚಿವ ಸ್ಥಾನಕ್ಕಾಗಿ ಹೆಚ್ಚಿದ ಕೂಗು!