ಕನ್ನಡಪ್ರಭ ವಾರ್ತೆ ಬಂಗಾರಪೇಟೆ
ಪ್ರಾಧಿಕಾರದ ನೆರವು ಪಡೆಯಿರಿ
ರಾಜ್ಯದ ಪ್ರತಿಯೊಂದು ನ್ಯಾಯಾಲಯದಲ್ಲೂ ಉಚಿತ ಕಾನೂನು ಸೇವಾ ಪ್ರಾಧಿಕಾರವಿದ್ದು ಎಲ್ಲಾ ಸಾರ್ವಜನಿಕರು ಕಛೇರಿಗೆ ಬಂದು ಅರ್ಜಿ ಸಲ್ಲಿಸುವುದರಿಂದ ಉಚಿತ ಕಾನೂನು ಸಲಹೆಯನ್ನು ಪಡೆಯಬಹುದು. ಇತ್ತೀಚಿನ ದಿನಗಳಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಕಾಯ್ದೆ ಪೋಕ್ಸೋದಡಿ ಒಂದಲ್ಲ ಒಂದು ಪ್ರಕರಣಗಳು ದಾಖಲಾಗುತ್ತಿರುವುದು ಪ್ರತಿನಿತ್ಯ ನೋಡುತ್ತಿದ್ದೇವೆ. ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ತಡೆಯಲು ಈ ಕಾಯ್ದೆ ಜಾರಿಗೆ ತರಲಾಗಿದೆ ಎಂದರು.ಪೋಕ್ಸೋ ಕಾಯ್ದೆಯಡಿ ರಾಜಕಾರಣಿಗಳು, ಸ್ವಾಮೀಜಿಗಳು ಸಿಲುಕಿದ್ದು ಜಾಮೀನು ಸಿಗದೆ ಜೈಲಿನಲ್ಲಿ ಕೊಳೆಯುವಂತಾಗಿದೆ. 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹೆಣ್ಣು ಮಕ್ಕಳಿಗೆ ತಂದೆ ತಾಯಂದಿನ ಒಪ್ಪಿಗೆ ಮೇರೆಗೆ ಮದುವೆ ಮಾಡಿದರೂ ಬಾಲ್ಯವಿವಾಹ ವಿರೋಧಿ ಕಾಯ್ದೆಯಡಿ ಕೇಸು ದಾಖಲಾಗುತ್ತದೆ ಎಂದರುಇದೇ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಧಯದ್ಯಕ್ಷರಾದ ಎಸ್.ನಾರಾಯಣಪ್ಪ ಮಾತನಾಡಿ ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋದಿ ದಿನವಾದ ಇಂದು ಎಲ್ಲಾ ಕಾರ್ಮಿಕರಿಗೆ ಬಾಲಕಾರ್ಮಿಕ ಪದ್ದತಿ ಕುರಿತು ಅರಿವು ಮೂಡಿಸಬೇಕು ಎಂದರು.
ಬಾಲ್ಯವನ್ನು ಕಸಿದುಕೊಳ್ಳಬೇಡಿಬಾಲಕಾರ್ಮಿಕ ಪದ್ಧತಿ ಸಾಮಾಜಿಕ ಪಿಡುಗು ಇದನ್ನು ತಡೆಯಬೇಕು,ಬಾಲಕಾರ್ಮಿಕ ಪದ್ಧತಿ ಮಕ್ಕಳ ಮೇಲೆ ಎಸಗುವ ದೌರ್ಜನ್ಯ, ಇದನ್ನು ವಿರೋಧಿಸಲೇಬೇಕು. ಉತ್ತಮ ಬಾಲ್ಯ ಪ್ರತಿಯೊಂದು ಮಗುವಿನ ಮೂಲಭೂತ ಹಕ್ಕು. ಓದುವ, ಆಟವಾಡುವ ವಯಸ್ಸಿನಲ್ಲಿ ದುಡಿಮೆ ಮಗುವಿನ ಬಾಲ್ಯದ ಹಕ್ಕುಗಳನ್ನು ಕಸಿದುಕೊಳ್ಳುತ್ತದೆಂದರು.
ಈ ಸಂಧರ್ಭದಲ್ಲಿ ವಕೀಲರ ಸಂಘದ ಉಪಾಧ್ಯಕ್ಷರಾದ ಬಿ.ಎಂ. ಆನಂದ್, ಪ್ಯಾನಲ್ ವಕೀಲರಾದ ರಮೇಶ್, ಪಂಕಜ, ಕಿರಣ್ಕುಮಾರ್ ಜಿ ಇಂಗಳೆ, ಕಮಲಿ, ಮತ್ತು ವಕೀಲರು ಹಾಗೂ ಕಾರ್ಖಾನೆಯ ಕಾರ್ಮಿಕರು ಹಾಜರಿದ್ದರು.