ಶಿಕ್ಷಣ, ಕ್ರೀಡೆ ಒಂದೇ ನಾಣ್ಯದ ಎರಡು ಮುಖ: ವಿರೂಪಾಕ್ಷ

KannadaprabhaNewsNetwork |  
Published : Jul 29, 2026, 02:45 AM IST
ಎಕ್ಸಲೆಂಟ್‌ನಲ್ಲಿ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಹಾಗೂ ಟೇಬಲ್ ಟೆನ್ನಿಸ್ ಪಂದ್ಯಾವಳಿಗೆ ಚಾಲನೆ | Kannada Prabha

ಸಾರಾಂಶ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ, ಕಲ್ಲಬೆಟ್ಟು ಆಶ್ರಯದಲ್ಲಿ 2026–27ನೇ ಸಾಲಿನ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಬಾಲಕ-ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನಿಸ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭವು ಎಕ್ಸಲೆಂಟ್ ಶಿಕ್ಷಣ ಸಮೂಹ ಸಂಸ್ಥೆಗಳ ಕ್ರೀಡಾಂಗಣದಲ್ಲಿನಡೆಯಿತು.

ಮೂಡುಬಿದಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ, ಕಲ್ಲಬೆಟ್ಟು ಆಶ್ರಯದಲ್ಲಿ 2026–27ನೇ ಸಾಲಿನ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಬಾಲಕ-ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನಿಸ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭವು ಎಕ್ಸಲೆಂಟ್ ಶಿಕ್ಷಣ ಸಮೂಹ ಸಂಸ್ಥೆಗಳ ಕ್ರೀಡಾಂಗಣದಲ್ಲಿನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿದ ಮೂಡುಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ ಎಚ್.ಎನ್., ಶಿಕ್ಷಣ ಮತ್ತು ಕ್ರೀಡೆ ಒಂದೇ ನಾಣ್ಯದ ಎರಡು ಮುಖಗಳಾಗಿದ್ದು, ಇವೆರಡೂ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆಭದ್ರ ಬುನಾದಿ ಹಾಕುತ್ತವೆ ಎಂದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್, ಶಿಕ್ಷಣ ಮತ್ತು ಕ್ರೀಡೆ ಎರಡರಲ್ಲೂ ಯಶಸ್ಸು ಸಾಧಿಸಲು ಶಿಸ್ತು, ನಿರಂತರ ಅಭ್ಯಾಸ ಹಾಗೂ ಕಠಿಣ ಪರಿಶ್ರಮ ಅತ್ಯಗತ್ಯ ಎಂದರು.

ದ.ಕ. ಜಿಲ್ಲಾ ದೈಹಿಕ ಪರಿವೀಕ್ಷಣಾಧಿಕಾರಿ ವಿಷ್ಣು ಹೆಬ್ಬಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರಿತೇಶ್ ಶೆಟ್ಟಿ, ಮೂಡುಬಿದಿರೆ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸುಧೀರ್ ಕುಮಾರ್, ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ನವೀನ್ ಅಂಬೂರಿ, ಗ್ರೇಡ್–2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ವಿನ್ನಿಫ್ರೆಡ್ ಪಿಂಟೋ ಉಪಸ್ಥಿತರಿದ್ದರು. ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಶಿವಪ್ರಸಾದ್ ಭಟ್ ಸ್ವಾಗತಿಸಿದರು. ಶಿಕ್ಷಕಿ ವನಿತಾ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದು ಕಿದಿಯೂರು ಕ್ರೆ.ಕೋ.ಆಪ್ ಸೊಸೈಟಿ ಕಿನ್ನಿಮುಲ್ಕಿ ಶಾಖೆ ಶುಭಾರಂಭ
ಹಾಸನ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂಲ್ಕಿಯ ಮಹಿಳೆ ಸಾವು