ಕನ್ನಡಪ್ರಭ ವಾರ್ತೆ ಮಂಡ್ಯ
ಬೀದರ್ನ ಕಲ್ಯಾಣ ಕರ್ನಾಟಕ ಪ್ರತಿಷ್ಠಾನದಿಂದ ಆರಂಭವಾಗಿರುವ ಕರ್ನಾಟಕ ಸುವರ್ಣ ಸಂಭ್ರಮ-೫೦ರ ಅಕ್ಷರ ಜ್ಯೋತಿ ಯಾತ್ರೆಯನ್ನು ನಗರದಲ್ಲಿ ಸ್ವಾಗತಿಸಿ, ಎಸ್.ಬಿ.ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಚಿಂತನೆ ಇಲ್ಲದೆ ಯಾವುದೂ ಅರಳುವುದಿಲ್ಲ. ಚಿಂತನೆ, ಯೋಜನೆ, ಯೋಚನೆಗಳಿಂದ ಎಲ್ಲರೂ ಕ್ರಿಯಾಶೀಲರಾಗಿ ಸಮಾಜ ಕಟ್ಟುವಲ್ಲಿ ಸಕ್ರಿಯರಾಗಬೇಕಿದೆ. ಸಮಾಜದಲ್ಲಿನ ಕೊರತೆಗಳ ಬಗ್ಗೆ ಟೀಕಿಸುತ್ತಾ, ಕೊರಗುತ್ತಾ ಕೂರುವ ಬದಲು, ಒಂದಿಷ್ಟು ಕೈಗಳು ಒಂದಾಗಿ ದುಡಿದರೆ ನಮ್ಮ ಸುತ್ತಲಿನ ವ್ಯವಸ್ಥೆಯನ್ನು ಬದಲಿಸಿ, ಸರಿಪಡಿಸಿ ಸುಂದರಗೊಳಿಸಬಹುದು. ಕತ್ತಲೆಯನ್ನು ಶಪಿಸುವ ಬದಲು ಪುಟ್ಟ ಹಣತೆ ಬೆಳಗುವ ಸಂಕಲ್ಪ ಮಾಡಬೇಕಿದೆ ಎಂದು ಅಭಿಪ್ರಾಯಿಸಿದರು.ಇಂದಿನ ವಿದ್ಯಾರ್ಥಿಗಳೇ ಮುಂದಿನ ಪ್ರಜೆಗಳು ಎಂಬಂತೆ ನಾವು ನಮ್ಮ ಭವಿಷ್ಯವನ್ನು ಉತ್ತಮಪಡಿಸಿಕೊಂಡು ದೇಶಕ್ಕೆ ಭದ್ರ ಬುನಾದಿ ಹಾಕಬೇಕು. ಇಂತಹ ಜ್ಯೋತಿಯಾತ್ರೆ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಬಹಳ ಮುಖ್ಯವಾದದ್ದು . ಇದು ಜೀವನದಲ್ಲಿ ತಿರುವು ಪಡೆದುಕೊಳ್ಳುವತ್ತ ಸಾಗುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಗೂ ಮಹತ್ವದವಾದ ತಿರುವು, ಉದ್ದೇಶ ತುಂಬಾ ವ್ಯಾಪ್ತಿಯನ್ನು ಒಳಗೊಂಡು ವಿಶಾಲವಾದದ್ದಾಗಿದೆ ಎಂದು ಪ್ರತಿಪಾದಿಸಿದರು.
ಶ್ರೀ ಬಸವೇಶ್ವರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ.ಎಸ್.ಷಡಕ್ಷರಿ ಮಾತನಾಡಿ, ೬೦ ದಿನಗಳ ಕಾಲ ಹಮ್ಮಿಕೊಂಡಿರುವ ಯಾತ್ರೆ ರಾಜ್ಯಾದ್ಯಂತ ಸಂಚರಿಸಲಿದೆ. ವಿದ್ಯಾರ್ಥಿಗಳಿಗೆ ಶಿಕ್ಷಣದ ಆಸಕ್ತಿ ಮೂಡಿಸಿ ಉನ್ನತ ಸಾಧನೆಗೆ ಛಲ ಮೂಡಿಸುವುದು, ವಿದ್ಯಾರ್ಥಿಗಳ ಮನೋಭಾವದಲ್ಲಿ ಸಕಾರಾತ್ಮಕ ಚಿಂತನೆ ಬೆಳೆಸುವುದು ಇದರ ಉದ್ದೇಶವಾಗಿದೆ ಎಂದರು.