ಕನ್ನಡಪ್ರಭ ವಾರ್ತೆ ರಾಮನಗರ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಜಿಲ್ಲೆಯಲ್ಲಿ ಸಾಕಷ್ಟು ಅನಧಿಕೃತ ಶಾಲೆಗಳು ಅಸ್ತಿತ್ವದಲ್ಲಿವೆ. ಇದೀಗ ಕೆಲ ಶಾಲೆಗಳು ಅನಧಿಕೃತವಾಗಿ ಆರಂಭವಾಗಿವೆ. ಶಿಕ್ಷಣ ಇಲಾಖೆಯಿಂದ ಯಾವುದೇ ಅನುಮತಿ ಪಡೆಯದಿದ್ದರೂ ಇಂತಹ ಶಾಲೆಗಳು ರಾಜಾರೋಷವಾಗಿ ಫ್ಲೆಕ್ಸ್, ಬ್ಯಾನರ್, ಕರಪತ್ರಗಳ ಮೂಲಕ ಮಕ್ಕಳ ದಾಖಲಾತಿಗೆ ಆಹ್ವಾನಿಸುತ್ತಿವೆ ಎಂದು ಹೇಳಿದರು.
ಅನುಮತಿ ಪಡೆಯದ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ತಮ್ಮ ಸಂಘಟನೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದರೂ ಯಾವ ಕ್ರಮವನ್ನೂ ಜರುಗಿಸುತ್ತಿಲ್ಲ. ಶಿಕ್ಷಣ ಇಲಾಖೆಯ ಕೆಲವು ಅಧಿಕಾರಿಗಳು ಜಾನ ಕುರುಡರಂತೆ ವರ್ತಿಸುತ್ತಿದ್ದಾರೆ. ಅನಧಿಕೃತ ಶಾಲೆಗಳಿಂದಾಗಿ ಹಲವಾರು ವರ್ಷಗಳಿಂದ ಅಸ್ತಿತ್ವದಲ್ಲಿರುವ ಅಧಿಕೃತ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಕೊರತೆಯಾಗುತ್ತಿದೆ ಎಂದರು.ಅನಧಿಕೃತ ಶಾಲೆಗಳಲ್ಲಿ ದಾಖಲಾಗುವ ಮಕ್ಕಳು ಸರ್ಕಾರದ ಸ್ಯಾಟ್ಸ್ ತಂತ್ರಾಂಶದಲ್ಲಿ ದಾಖಲಾಗುವುದಿಲ್ಲ. ಹೀಗಾಗಿ ಜನಸಂಖ್ಯೆಯಲ್ಲಿರುವ ಮಕ್ಕಳ ಸಂಖ್ಯೆಗೂ ಇಲಾಖೆಯ ಸ್ಯಾಟ್ಸ್ ತಂತ್ರಾಂಶದಲ್ಲಿನ ವಿದ್ಯಾರ್ಥಿಗಳ ಅಂಕಿ ಅಂಶ ವ್ಯತ್ಯಾಸವಾಗುತ್ತಿದೆ. ಇದೇ ಕಾರಣಕ್ಕೆ ಯುಡೈಸ್ ಪ್ಲಸ್ ತಂತ್ರಾಂಶದಲ್ಲಿ ಅಪಾರ್ ಐಡಿ ಸೃಜನೆಯಾಗುವುದಿಲ್ಲ. ಈ ಮಾಹಿತಿ ಶಿಕ್ಷಣ ಇಲಾಖೆಗೆ ತಿಳಿದಿದ್ದರೂ ಸಹ ಇಂತಹ ಶಾಲೆಗಳ ವಿರುದ್ದ ಕ್ರಮ ಕೈಗೊಂಡು, ಮಕ್ಕಳ ದಾಖಲಾತಿಯನ್ನು ಅಧಿಕಾರಿಗಳು ತಡೆಯುತ್ತಿಲ್ಲ ಎಂಬುದು ದುರಾದೃಷ್ಟಕರ ಎಂದು ಹೇಳಿದರು.
ಅನುಮತಿ ಇಲ್ಲದ ತರಗತಿಗಳು:
ಸುದ್ದಿಗೋಷ್ಠಿಯಲ್ಲಿ ಉಸ್ಮಾರ್ಡ್ ಸಂಘಟನೆಯ ಪದಾಧಿಕಾರಿಗಳಾದ ಕಿರಣ್ ಪ್ರಸಾದ್, ಸಿದ್ದರಾಜು, ಪಟೇಲ್ ಸಿ.ರಾಜು, ಸುನಿಲ್, ಅಲ್ತಾಫ್ ಅಹಮದ್, ಅಜ್ಗರ್, ಅತೀಕ್ , ಸುನಿತಾ, ಸಲ್ಮಾ, ಪ್ರೇಮಾನಂದ ಇದ್ದರು.