ಶಿಕ್ಷಣ ಇಂದು ವ್ಯಾಪಾರ ಕೇಂದ್ರವಾಗಿದೆ: ಶಾಸಕ ಮಂಜುನಾಥ್

KannadaprabhaNewsNetwork |  
Published : Feb 19, 2026, 02:00 AM IST
ತಾಲೂಕಿನ ಬಂಡಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟನೆ | Kannada Prabha

ಸಾರಾಂಶ

ಬಂಡಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಭಿನ್ನವಾಗಿ ಶಾಲಾ ವಾರ್ಷಿಕೋತ್ಸವ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು.

- ಸರ್ಕಾರಿ ಶಾಲೆಗಳು ನಲುಗಿ ಹೋಗುವಂತಹ ಪರಿಸ್ಥಿತಿ ಇದೆ

- ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವಕನ್ನಡಪ್ರಭ ವಾರ್ತೆ ಹನೂರು

ಬಂಡಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಭಿನ್ನವಾಗಿ ಶಾಲಾ ವಾರ್ಷಿಕೋತ್ಸವ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು.ತಾಲೂಕಿನ ಬಂಡಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಾಲಾ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಬಳಿಕ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಶಿಕ್ಷಣವು ಒಂದು ವ್ಯಾಪಾರವಾಗಿದ್ದು ಇದರ ನಡುವೆ ಸರ್ಕಾರಿ ಶಾಲೆಗಳು ನಲುಗಿ ಹೋಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ದಿನಮಾನಗಳಲ್ಲಿ ಇಲ್ಲೊಂದು ಸರ್ಕಾರಿ ಶಾಲೆ ಎಲ್ಲದರಲ್ಲೂ ಮೇಲುಗೈ ಸಾಧಿಸುವ ಮೂಲಕ ಖಾಸಗಿ ಶಾಲೆಗೆ ಕಮ್ಮಿ ಇಲ್ಲ ಎಂಬುದನ್ನ ಸಾಕ್ಷಿ ಸಮೇತ ದೃಢಪಡಿಸಿದೆ ಎಂದರು.

ನಾವೆಲ್ಲರೂ ಕೂಡ ಈ ಶಾಲೆಯ ವ್ಯವಸ್ಥೆಯನ್ನು ನೋಡಿ ಕಣ್ತುಂಬಿಕೊಂಡು ತುಂಬಾ ಖುಷಿಯನ್ನು ಪಟ್ಟಿದ್ದೇವೆ. ನಮ್ಮ ಹನೂರು ಶೈಕ್ಷಣಿಕ ವಲಯದ ಇನ್ನಿತರ ಸರ್ಕಾರಿ ಶಾಲೆಗಳು ಸಹ ಇದೇ ಮಾದರಿಯಲ್ಲಿ ಬೆಳೆದರೆ ಉತ್ತಮವಾಗಿರುತ್ತದೆ ಎಂದರು.

ಚಲನಚಿತ್ರ ನಿರ್ದೇಶಕ ಚೇತನ್ ಕುಮಾರ್ ಮಾತನಾಡಿ, ಹಳ್ಳಿಗಾಡಿನಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಅನೇಕ ಪ್ರತಿಭೆಗಳು ಹುಟ್ಟುತ್ತವೆ. ಇಂತಹ ಬಂಡಳ್ಳಿ ಗ್ರಾಮದಲ್ಲಿ ಹುಟ್ಟಿದಂತಹ ಪ್ರತಿಭೆ ಖ್ಯಾತ ಚಲನಚಿತ್ರ ನಿರ್ದೇಶಕ ಎಸ್.ಮಹೇಂದರ್ ಇಂದು ದೇಶದಾದ್ಯಂತ ಉತ್ತಮ ಹೆಸರು ಮಾಡಿದ್ದಾರೆ. ಅವರ ಚಿತ್ರಗಳನ್ನು ನೋಡುತ್ತಾ ಬೆಳೆದಂತಹ ನಾವು ಅವರಿಂದಲೇ ಸ್ಫೂರ್ತಿ ಪಡೆದು ಅವರಂತೆ ಆಗಿದ್ದೇವೆ. ಹಾಗಾಗಿ ಸರ್ಕಾರಿ ಶಾಲಾ ಮಕ್ಕಳು ಹೆಚ್ಚು ಪ್ರತಿಭೆಗಳನ್ನು ಒಳಗೊಂಡಂತ ಮಕ್ಕಳಾಗಿದ್ದು ಪೋಷಕರು ಸಹ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಕೊಡುವ ಕಡೆ ಗಮನ ವಹಿಸಬೇಕು ಎಂದರು.

ಗಮನ ಸೆಳೆದ ನೃತ್ಯಗಳು:

ಬಂಡಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ನೃತ್ಯಗಳು ನೆರೆದಿದ್ದ ಸಭಿಕರನ್ನ ಮನೋರಂಜನೆಯ ಜೊತೆಗೆ ಪುಳಕಿತಗೊಳಿಸಿದವು. ಬಣ್ಣ ಬಣ್ಣದ ಚಿತ್ತಾರಗಳನ್ನು ಒಳಗೊಂಡಂತಹ ಆಕರ್ಷಕ ಕೊಡುಗೆಗಳನ್ನು ತೊಟ್ಟು ಮಕ್ಕಳು ವಿವಿಧ ಹಾಡುಗಳಿಗೆ ನೃತ್ಯ ಮಾಡಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ಇದೇ ಸಂದರ್ಭದಲ್ಲಿ ಮಾಜಿ ಶಾಸಕರಾದ ಆರ್.ನರೇಂದ್ರ, ಪರಿಮಳ ನಾಗಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಚಾಮುಲ್ ನ ಅಧ್ಯಕ್ಷ ನಂಜುಂಡಸ್ವಾಮಿ, ಜೆಸ್ಸಿಮ್, ಮುರುಡೇಶ್ವರ ಸ್ವಾಮಿ, ಹಾಗೂ ಶಿಕ್ಷಣ ಸಂಯೋಜಕರಾದ ಅಶೋಕ್, ಬಂಡಳ್ಳಿ ಶಾಲೆಯ ಮುಖ್ಯ ಶಿಕ್ಷಕ ಗುರುಸ್ವಾಮಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣೇಗೌಡ, ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು.

---------

17ಸಿಎಚ್ಎನ್‌18

ಹನೂರು ತಾಲೂಕಿನ ಬಂಡಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಾಲಾ ವಾರ್ಷಿಕೋತ್ಸವವನ್ನು ಶಾಸಕ ಮಂಜುನಾಥ್ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರ ಪಾಪರ್‌ ಆದರೂ ಕೈ ಶಾಸಕರು ವಿದೇಶಕ್ಕೆ: ಅಶೋಕ್‌
ಶಾಸಕ ಸುಬ್ಬಾರೆಡ್ಡಿ ಅನರ್ಹ: ಪ್ರಜಾಪ್ರಭುತ್ವಕ್ಕೆ ಸಂದ ಜಯ