ಕನ್ನಡಪ್ರಭ ವಾರ್ತೆ ಸಿಂದಗಿ
ಅವರು ತಾಲೂಕಿನ ಕನ್ನೋಳ್ಳಿ ಹಿರೇಮಠದ ಶ್ರೀಜಗದುರು ದಾರುಕಾಚಾರ್ಯರ ಜಾತ್ರಾ ಮಹೋತ್ಸವ ಮತ್ತು ಲಿಂ.ಶ್ರೀ ಮರುಳಾರಾಧ್ಯ ಶಿವಾಚಾರ್ಯರ ೧೧೦ನೇ ಜಯಂತ್ಯುತ್ಸವದ ನಿಮಿತ್ತ ಶ್ರೀ ಸಿದ್ದಲಿಂಗೇಶ್ವರ ಜ್ಞಾನಜ್ಯೋತಿ ವಿದ್ಯಾಪ್ರಸಾರ ಸಂಘದ ಅಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಮಾತೋಶ್ರೀ ಬಸಲಿಂಗಮ್ಮ ಭಾಳಪ್ಪ ಭೂಸನೂರ ಕಲಾ, ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯ ಉದ್ಘಾಟಿಸಿ ಅವರು ಮಾತನಾಡಿದರು.ಮಾನವನ್ನು ಮಹಾದೇವನನ್ನಾಗಿ ಪರಿವರ್ತಿಸುವ ಮಹಾಶಕ್ತಿ ಶಿಕ್ಷಣಕ್ಕೆ ಇದೆ. ಪ್ರತಿಯೊಬ್ಬರು ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಸಂಸ್ಕಾರ ನೀಡಿದ್ದಲ್ಲಿ ಭಾರತ ಜಗತ್ತಿಗೆ ದೊಡ್ಡ ಶಕ್ತಿಯಾಗಿ ಹೊರಹೊಮ್ಮಲಿದೆ ಎಂದ ಅವರು, ಲಿಂ.ಮರುಳಾಧ್ಯ ಶಿವಾಚಾರ್ಯರು ಸದಾ ಭಕ್ತರ ಕಲ್ಯಾಣವನ್ನು ಬಯಸಿ ಅವರ ಮುಖದಲ್ಲಿಯೇ ಪರಮಾತ್ಮನನ್ನು ಕಂಡಂತವರು. ಧಾರ್ಮಿಕ ಸಂಸ್ಕಾರ, ಸಾಮಾಜಿಕ ಪ್ರಜ್ಞೆಯನ್ನು ಭಕ್ತರಲ್ಲಿ ಮೂಡಿಸಿ ಜನಮಾನಸದಲ್ಲಿ ಚಿರಸ್ಥಾಯಿಯಾದವರು ಎಂದರು.
ಈ ವೇಳೆ ಭಂಥನಾಳದ ಪೂಜ್ಯ ಶ್ರೀ ವೃಷಬಲಿಂಗ ಮಹಾಸ್ವಾಮಿಗಳು ಮಾತನಾಡಿ, ಕನ್ನೋಳ್ಳಿಯ ಹಿರೇಮಠದ ಧಾರ್ಮಿಕ ಮತ್ತು ಶಿಕ್ಷಣದ ಕಾರ್ಯ ನಿರಂತರವಾಗಿದೆ. ಭಂಥನಾಳದ ಲಿಂ ಸಂಗನಬಸವೇಶ್ವರ ಮಹಾಸ್ವಾಮಿಗಳು ಜೋಳಿಗೆ ಹಿಡಿದು ಈ ಭಾಗದಲ್ಲಿ ಶಿಕ್ಷಣದ ಪ್ರಸಾರ ಮಾಡದೇ ಇದ್ದಲ್ಲಿ ಈ ಭಾಗ ಅತ್ಯಂತ ಹಿಂದುಳಿದ ಪ್ರದೇಶವಾಗುತ್ತಿತ್ತು. ಅವರ ಪರಿಶ್ರಮದಿಂದ ಈ ಭಾಗದ ಸಾವಿರಾರು ಮಕ್ಕಳು ಉತ್ತಮ ಶಿಕ್ಷಣ ಪಡಿಯುವಂತಾಗಿದೆ. ಆ ನಿಟ್ಟಿನಲ್ಲಿ ಕನ್ನೋಳ್ಳಿಯ ಹಿರೇಮಠವು ಕೂಡಾ ಶಿಕ್ಷಣದ ಕ್ರಾಂತಿಯನ್ನು ಈ ಭಾಗದಲ್ಲಿ ಮಾಡುವಂತಾಗಲಿ ಎಂದು ಶುಭಹಾರೈಸಿದರು.ಈ ಸಂಧರ್ಭದಲ್ಲಿ ಯಂಕಚಿ ಹಿರೇಮಠದ ಪೂಜ್ಯ ಶ್ರೀ ಅಭಿನವ ರುದ್ರಮನಿ ಶೀವಾಚಾರ್ಯರು, ಕೋಣ್ಣೂರಿನ ಹೊರಗಿನ ಕಲ್ಯಾಣ ಮಠದ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ಮಾತನಾಡಿ, ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆಯನ್ನು ಕಟ್ಟಿ ಬಡ ಅನಾಥ ಮಕ್ಕಳಿಗೆ ಮತ್ತು ಶಿಕ್ಷಣ ನೀಡುವ ಕಾರ್ಯ ಮಾಡುತ್ತಿರುವ ಕನ್ನೋಳ್ಳಿಯ ಹಿರೇಮಠದ ಕಾರ್ಯ ಶ್ಲಾಘಿಸಿದರು.