ಶಿಕ್ಷಣ ವ್ಯಕ್ತಿತ್ವ ವಿಕಸನಕ್ಕೆ ದಾರಿದೀಪ ಶಾಸಕ ಕೆ.ಎನ್.ರಾಜಣ್ಣ

KannadaprabhaNewsNetwork |  
Published : Sep 03, 2026, 01:15 AM IST
ಮಧುಗಿರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಕೆ.ಎನ್‌.ಆರ್.ಚಾರಿಟಬಲ್ ಟ್ರಸ್ಟ್ ವತಿಯಿಂದ ಅಕ್ಷರ ಅಮೃತ ಯೋಜನೆಯ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮಕ್ಕೆ ಶಾಸಕ ಕೆ.ಎನ್.ರಾಜಣ್ಣ,ಅಧ್ಯಕ್ಷೆ ಶಾಂತಲಾ ರಾಜಣ್ಣ,ಎಂಎಲ್‌ಸಿ ಆರ್‌.ರಾಜೇಂದ್ರ,,ರಶ್ಮಿರಾಜಣ್ಣ ,ರವೀಂದ್ರ ರಾಜಣ್ಣ ಮತ್ತು ಪಾವಗಡದ ಜಪಾನಂದ ಮಹರಾಜ್,ಸಿದ್ದರಬೆಟ್ಟ ಕ್ಷೇತ್ರಸ ಶ್ರೀಗಳು ಚಾಲನೆ ನೀಡಿದರು.  | Kannada Prabha

ಸಾರಾಂಶ

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ನನ್ನ ಕನಸಿನ ಕೂಸು ಅತ್ಯಂತ ಮಹತ್ವಕಾಂಕ್ಷಿಯ ಮಧ್ಯಾಹ್ನದ ಬಿಸಿಯೂಟ ಯೋಜನೆ ಅತ್ಯಂತ ಪ್ರಿಯವಾದುದು ಎಂದು ಶಾಸಕ ಕೆ.ಎನ್.ರಾಜಣ್ಣ ಅಭಿಪ್ರಾಯಪಟ್ಟರು.

ಕನ್ನಡಪ್ರಭ ವಾರ್ತೆ ಮಧುಗಿರಿ

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ನನ್ನ ಕನಸಿನ ಕೂಸು ಅತ್ಯಂತ ಮಹತ್ವಕಾಂಕ್ಷಿಯ ಮಧ್ಯಾಹ್ನದ ಬಿಸಿಯೂಟ ಯೋಜನೆ ಅತ್ಯಂತ ಪ್ರಿಯವಾದುದು ಎಂದು ಶಾಸಕ ಕೆ.ಎನ್.ರಾಜಣ್ಣ ಅಭಿಪ್ರಾಯಪಟ್ಟರು.

ಬುಧವಾರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೆ.ಎನ್.ಆರ್.ಚಾರಿಟೆಬಲ್ ಟ್ರಸ್ಟ್ ವತಿಯಿಂದ ಅಕ್ಷರ ಅಮೃತ ಯೋಜನೆ ಮತ್ತು 2026-27ನೇ ಸಾಲಿನ ಕಾಲೇಜಿನ ವಾರ್ಷಿಕ ಚಟುವಟಿಕೆಗಳ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಅನ್ನದಾಸೋಹ ಗ್ರಾಮೀಣ ಪ್ರದೇಶದ ಮಕ್ಕಳ ಶಿಕ್ಷಣ ಕುಂಠಿತವಾಗದಂತೆ ನೋಡಿಕೊಳ್ಳುತ್ತದೆ. ಮುಂದೆ ನೀವು ಹುನ್ನತ ಹುದ್ದೆ ಗಳಿಸಿದಾಗ ಸಮಾಜದ ಋಣವೆಂಬಂತೆ ತೀರಿಸುವ ಮಹತ್ತರ ಜವಾಬ್ದಾರಿ ನಿಮ್ಮದು. ಈ ಅಕ್ಷರ ಅಮೃತ ಯೋಜನೆ ನಿರಂತರವಾಗಿ ನಡೆಯಲಿದೆ ಎಂದರು.

ಟ್ರಸ್ಟ್ ಅಧ್ಯಕ್ಷೆ ಶಾಂತಲಾ ಲಾಜಣ್ಣ ಮಾತನಾಡಿ, ಒಂದು ಯೋಜನೆ ರೂಪಿಸುವುದು ಮಾತ್ರವಲ್ಲ. ಅದನ್ನು ಯಶಸ್ವಿಯಾಗಿ ಕಾರ್ಯ ರೂಪಕ್ಕೆ ತರುವಲ್ಲಿ ಎಲ್ಲರ ಸಹಕಾರ ಅಗತ್ಯ. ಅಕ್ಷರ ಅಮೃತ ಯೋಜನೆ ಸಕಾರಗೊಳ್ಳಲು ಮಧುಗಿರಿಯ ಮುಖಂಡರು ತಮ್ಮದೇ ಆದ ಸಾಮರ್ಥ್ಯ ಸಹಕಾರ ಕೊಡುಗೆ ನೀಡಿದ್ದಾರೆ. ಯೋಜನೆ ರೂಪಿಸುವಲ್ಲಿ ಶ್ರಮಿಸಿದ ಎಲ್ಲರಿಗೂ ಶುಭ ಕೋರಿದರು.

ಪಾವಗಡ ಶ್ರೀರಾಮಕೃಷ್ಣ ಮಠದ ಜಪಾನಂದ ಮಹರಾಜ್ ಮಾತನಾಡಿ, ಶಾಸಕ ಕೆ.ಎನ್.ರಾಜಣ್ಣ ಅವರ ಕುಟುಂಬದ ಹೃದಯ ಶ್ರೀಮಂತಿಕೆಯ ಸೇವಾ ಕಾರ್ಯಕ್ಕೆ ಮುಂದಾಗಿದ್ದು ಸಾವಿರಾರು ವಿದ್ಯಾರ್ಥಿಗಳಿಗೆ ನಿತ್ಯ ನಿರಂತರವಾಗಿ ಊಟ ಕೊಡುವುದು ಸಾಮಾನ್ಯ ಕೆಲಸವಲ್ಲ. ಇದು ಅವರಲ್ಲಿರುವ ಮಾನವೀಯ ಕಾಳಾಜಿ ಎಂದರು.

ಸಿದ್ದರಬೆಟ್ಟದ ಕ್ಷೇತ್ರದ ಶ್ರೀವೀರಭದ್ರಶಿವಾಚಾರ್ಯ ಸ್ವಾಮಿಜಿ ಮಾತನಾಡಿ, ಬಡ ಮಕ್ಕಳ ಶೈಕ್ಷಣಿಕ ಪ್ರಗತಿ ಸುಧಾರಿಸುವ ನಿಟ್ಟಿನಲ್ಲಿ ಶಾಸಕ ಕೆ.ಎನ್.ರಾಜಣ್ಣರವರು ಮಧುಗಿರಿ ತಾಲೂಕಿನಲ್ಲಿ ಪ್ರಾರಂಭಿಸಿರುವ ಅಕ್ಷರ ಅಮೃತ ಯೋಜನೆ ಇಡೀ ಜಿಲ್ಲೆಗೆ ಹೆಮ್ಮೆಯ ಸಗಂತಿ,ಈ ಯೋಜನೆ ರಾಜ್ಯಕ್ಕೆ ಅನ್ವಯವಾಗಲಿ ಎಂದರು.ಕಾರ್ಯಕ್ರಮದಲ್ಲಿ ಎಂಎಲ್ಸಿ ರಾಜೇಂದ್ರ, ರವೀಂದ್ರ ರಾಜಣ್ಣ, ರಶ್ಮಿರಾಜಣ್ಣ, ಎಸಿ ಗೋಟೂರು ಶಿವಪ್ಪ ಡಿವೈಎಸ್‌ಪಿ ಮಂಜುನಾಥ್, ತಹಸೀಲ್ದಾರ್ ನಂದಿನಿ, ಇಒ ಉತ್ತಮ್, ನೌಕರರ ಸಂಘದ ಅಧ್ಯಕ್ಷ ರಂಗಪ್ಪ, ಕಾಲೇಜು ಪ್ರಾಂಶುಪಾಲ ಪ್ರೊ.ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಾಲಯ್ಯ, ಪ್ರೊ. ಮ.ಲ.ನ.ಮೂರ್ತಿ ಮುಖಂಡರಾದ ಎಂ.ಕೆ.ನಂಜುಂಡರಾಜು, ತುಂಗೋಟಿ ರಾಮಣ್ಣ, ಲಾಲಪೇಟೆ ಮಂಜುನಾಥ್ ಸೇರಿ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಲಬುರಗಿ ಬರಪೀಡಿತ ಘೋಷಣೆಗೆ ಆಗ್ರಹಿಸಿ ಪ್ರತಿಭಟನೆ
ಡಾ. ಅಪ್ಪಾಜಿ ಪುಣ್ಯಸ್ಮರಣೆ: ಭಾವಪೂರ್ಣ ನುಡಿನಮನ