ಕನ್ನಡಪ್ರಭ ವಾರ್ತೆ ಶಿಡ್ಲಘಟ್ಟ
ಶಿಕ್ಷಣದಿಂದ ವ್ಯಕ್ತಿತ್ವ ವಿಕಾಸ
ವ್ಯಕ್ತಿಯನ್ನು ಸುಶಿಕ್ಷಿತರನ್ನಾಗಿ ಮಾಡುವ ಬೌದ್ಧಿಕ ಶಕ್ತಿಯನ್ನು ವಿಕಸನಗೊಳಿಸುವ ಶಿಕ್ಷಣವನ್ನು ಪ್ರತಿಯೊಬ್ಬರು ಪಡೆಯಬೇಕು. ಶಿಕ್ಷಣದಿಂದ ಮಾತ್ರ ಮನುಷ್ಯನ ವಿಕಾಸ ಸಾಧ್ಯ, ಶಿಕ್ಷಣ ಇಲ್ಲದೇ ಯಾವುದೇ ವ್ಯಕ್ತಿಯ ವ್ಯಕ್ತಿತ್ವ ರೂಪುಗೊಳ್ಳಲು ಅಸಾಧ್ಯ. ಓದಿನಲ್ಲಿ ಯಶಸ್ಸು ಕಾಣಬೇಕಾದರೆ ಆತ್ಮವಿಶ್ವಾಸ ಬಹಳ ಮುಖ್ಯ. ಜೊತೆಗೆ ಕಠಿಣ ಪರಿಶ್ರಮ ಅಗತ್ಯ ಎಂದು ಹೇಳಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಶುಭ ಕೋರಿದರು.ನಗರ ಠಾಣೆ ಆರಕ್ಷಕ ಉಪನಿರೀಕ್ಷಕರಾದ ವೇಣುಗೋಪಾಲ್ ಮಾತನಾಡಿ, ಶಾಲೆಗಳಿಗೆ ಬರುವ ಮಕ್ಕಳ ಸುರಕ್ಷತೆ ಬಗ್ಗೆ ಶಿಕ್ಷಕರು, ಪೋಷಕರು ಗಮನ ಹರಿಸಬೇಕೆಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಜಿಪಂನ ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಆಂಜನೇಯ, ಕಾರ್ಯದರ್ಶಿ ಆರ್. ನಾಗಲಕ್ಷ್ಮಿ, ಪ್ರೌಢಶಾಲಾ ಮುಖ್ಯ ಶಿಕ್ಷಕ ಎಸ್. ವಿ. ರಘು, ಕನ್ನಡ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಎಂ. ವೆಂಕಟರೆಡ್ಡಿ, ಆಂಗ್ಲ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ವಿ. ರುಕ್ಮಿಣಿ, ನರ್ಸರಿ ಶಾಲಾ ಮುಖ್ಯ ಶಿಕ್ಷಕಿ ಬಿ. ಮಂಜುಳಾ, ಮತ್ತಿತರರು ಹಾಜರಿದ್ದರು.