ಕನ್ನಡಪ್ರಭ ವಾರ್ತೆ ಮದ್ದೂರು
ತಾಲೂಕಿನ ಕೊಪ್ಪದಲ್ಲಿ ಶನಿವಾರ ಗ್ರಾಮಾಂತರ ಶಿಕ್ಷಣ ಟ್ರಸ್ಟ್ನ ಸರ್.ಎಂ.ವಿ.ಹಿರಿಯ ಪ್ರಾಥಮಿಕ ಶಾಲೆ ಕೊಪ್ಪ, ಚನ್ನೇಗೌಡ ಪ್ರೌಢಶಾಲೆ ಹುರಗಲವಾಡಿ ಗೇಟ್ ವತಿಯಿಂದ ಆಯೋಜಿಸಿದ್ದ ಪಾಲಕರ ದಿನಾಚರಣೆ ಮತ್ತು ಶಾಲಾ ವಾರ್ಷಿಕೋತ್ಸವ ಹಾಗೂ ಸಿ.ತಮ್ಮಯ್ಯ ಅವರ 75ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಕ್ಕಳು ಕಠಿಣ ಪರಿಶ್ರಮದಿಂದ ವ್ಯಾಸಂಗ ಮಾಡಿ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದುವ ಜತೆಗೆ ಗುರು ಹಿರಿಯರನ್ನು ಗೌರವಿಸುವುದು, ಮಾನವೀಯ ಮೌಲ್ಯ ಹಾಗೂ ಸೇವಾ ಮನೋವವನ್ನು ಜೀವನದಲ್ಲಿ ರೂಡಿಸಿಕೊಂಡು ಸಮಾಜಕ್ಕೆ ಒಳ್ಳೆಯದನ್ನು ಮಾಡಬೇಕು ಎಂದರು.ಸಚಿವ ಎನ್.ಚಲುವರಾಯಸ್ವಾಮಿ ಮಾತನಾಡಿ, ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ಅಗಾಧ ಶಕ್ತಿ ಇದೆ. ಗುಣಾತ್ಮಕ ಶಿಕ್ಷಣ ನೀಡಿದರೆ ಜೀವನದಲ್ಲಿ ಅತ್ಯುತ್ತಮ ಸಾಧನೆ ಮಾಡುತ್ತಾರೆ ಎಂಬುದಕ್ಕೆ ಸಾಕಷ್ಟು ನಿದರ್ಶನಗಳಿವೆ ಎಂದರು.
ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು, ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ಮನ ಸೆಳೆಯಿತು.
ಗ್ರಾಮಾಂತರ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಸಿ.ತಮ್ಮಯ್ಯ, ಕಾರ್ಯದರ್ಶಿ ರಾಮಕೃಷ್ಣ, ಖಜಾಂಚಿ ಕೆ.ಬಿ.ನಾರಾಯಣ, ನಿರ್ದೇಶಕರಾದ ಪುಟ್ಟಸ್ವಾಮಿ, ಮರೀಗೌಡ, ಮಲ್ಲಿಕಾರ್ಜುನ, ಚನ್ನಮ್ಮ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಸಿ.ಜೋಗಿಗೌಡ, ಗ್ರಾಪಂ ಅಧ್ಯಕ್ಷ ರುದ್ರೇಶ್, ತಾಪಂ ಮಾಜಿ ಅಧ್ಯಕ್ಷೆ ಜಯಲಕ್ಷ್ಮಿ, ಮಾಜಿ ಉಪಾಧ್ಯಕ್ಷರಾದ ಬೆಕ್ಕಳಲೆ ರಘು, ರಾಮಚಂದ್ರು, ಪುರಸಭಾ ಮಾಜಿ ಅಧ್ಯಕ್ಷ ಎಂ.ಸಿ.ಬಸವರಾಜು, ನಾಗಮಂಗಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ದಿವಾಕರ, ಗುತ್ತಿಗೆದಾರ ಸುರೇಶ್ ಗೌಡ ಇತರರು ಇದ್ದರು.