ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಅರಕೇಶ್ವರ ಬಡಾವಣೆಯಲ್ಲಿರುವ ಅರಳಿಮರ ಸರ್ಕಾರಿ ಶಾಲೆಯಲ್ಲಿ ಶ್ರೀರಂಗನಾಯಕಿ ಸ್ತ್ರೀ ಸಮಾಜ, ಕಾಮದೇನು ಶ್ರೀಶಕ್ತಿ ಸ್ವ-ಸಹಾಯ ಸಂಘ ಮತ್ತು ವಿವಿದ್ದೋಶ ಸಹಕಾರ ಸಂಘ ಆಯೋಜಿಸಿದ್ದ ದಿವಂಗತ ಸುಂದರಮ್ಮ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಾಮಗ್ರಿ ವಿತರಣೆ ಮತ್ತು ಕೌಶಲ್ಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಸರ್ಕಾರಿ ಶಾಲೆಗಳಲ್ಲಿ ಓದಿದವರು ಉನ್ನತಮಟ್ಟದ ಸಾಧನೆ ಮಾಡಿರುವುದಕ್ಕೆ ಸಾಕಷ್ಟು ಉದಾಹರಣೆಗಳಿಗೆ. ವಿದ್ಯೆ ಯಾರೊಬ್ಬರ ಆಸ್ತಿಯಲ್ಲ. ಕೀಳರಿಮೆ ಬಿಟ್ಟು ಗುರುಗಳು ಕಲಿಸಿ ಪಾಠ ಮತ್ತು ಸಂಸ್ಕಾರವನ್ನು ಶ್ರದ್ಧೆ ಮತ್ತು ಆಸಕ್ತಿಯಿಂದ ಕಲಿತರೆ ಉತ್ತಮ ಭವಿಷ್ಯ ನಿಮ್ಮದಾಗುತ್ತದೆ ಎಂದರು.ಶ್ರೀರಂಗನಾಯಕಿ ಸ್ತ್ರೀ ಸಮಾಜ ಸಂಘಟನೆಯಿಂದ ಸಾಕಷ್ಟು ಅಭಿವೃದ್ಧಿ ಸೇವಾ ಕಾರ್ಯಗಳನ್ನು ನಡೆಸಿಕೊಂಡು ಬಂದಿದ್ದೇವೆ. ಶಾಲೆ ಆರಂಭಿಸಿದ್ದೇವೆ. ಮಹಿಳೆಯರಿಗೆ ಕೌಶಲ ತರಬೇತಿ ನೀಡುತ್ತಿದ್ದೇವೆ. ನಮ್ಮ ಸೇವಾ ಕಾರ್ಯ ಗುರುತಿಸಿ ರಾಜ್ಯಸರ್ಕಾರ ಕಿತ್ತೂರು ರಾಣಿ ಚನ್ನಮ್ಮ ಪುರಸ್ಕಾರ ಮತ್ತು ಜಿಲ್ಲಾ ಕನ್ನಡ ರಾಜ್ಯೋತ್ಸವ ಪುರಸ್ಕಾರ ನೀಡಿ ಗೌರವಿಸಿದೆ ಎಂದರು.
ಕಾರ್ಯಕ್ರಮದಲ್ಲಿ ಶ್ರೀರಂಗನಾಯಕಿ ಸ್ತ್ರೀ ಸಮಾಜದ ಅಧ್ಯಕ್ಷೆ ವಿಶಾಲಾಕ್ಷಿ, ಕಮಲಮ್ಮ, ಸುವರ್ಣಾದೇವಿ, ರಾಷ್ಟ ಯುವ ಪ್ರಶಸ್ತಿ ಪುರಸ್ಕೃತೆ ಅನುಪಮಾ, ಮುಖ್ಯಶಿಕ್ಷಕಿ ಕಲ್ಪನಾ, ಮಂಜುನಾಥ್, ರಾಘವೇಂದ್ರ, ಕಾವ್ಯ, ವಿಜಯಲಕ್ಷ್ಮೀ, ಸುರೇಖಾ, ಅಪ್ಪಾಜಯ್ಯ ಮತ್ತಿತರರಿದ್ದರು.
ಮಂಡ್ಯ: ಕೃಷಿ ಇಲಾಖೆಯ ಜಿಲ್ಲಾ ಕೃಷಿ ತರಬೇತಿ ಕೇಂದ್ರ, ವಿ.ಸಿ.ಫಾರಂ ವತಿಯಿಂದ ಜಿಲ್ಲಾ ವ್ಯಾಪ್ತಿಯ ರೈತರಿಗೆ ಮಾವು, ತೆಂಗು, ಬಾಳೆ ಮತ್ತು ಅಡಿಕೆ ಬೆಳೆ ವೈಜ್ಞಾನಿಕ ಬೇಸಾಯ ಕ್ರಮಗಳ ಕುರಿತು ಮೂರು ದಿನಗಳ ತರಬೇತಿಯನ್ನು ಆಯೋಜಿಸಲಾಗಿದೆ. ಆಸಕ್ತ ರೈತರು ನವೆಂಬರ್ 11 ರೊಳಗೆ ನೋಂದಣಿ ಮಾಡಬಹುದಾಗಿದೆ. ತರಬೇತಿಯಲ್ಲಿ ಭಾಗವಹಿಸುವವರಿಗೆ ಉಚಿತ ಊಟ ಮತ್ತು ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಸದರಿ ತರಬೇತಿಯು 45 ರೈತರು, ರೈತ ಮಹಿಳೆಯರಿಗೆ ಆಯೋಜಿಸಲಾಗಿದ್ದು, ಮೊದಲ ಬಂದವರಿಗೆ ಆದ್ಯತೆ ನೀಡಲಾಗುವುದು.