- ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಸಂಸ್ಕಾರದ ಮೂಲಕ ಶಿಕ್ಷಣ ಕೊಟ್ಟಾಗ ಮಾತ್ರ ಪರಿಪೂರ್ಣ ಶಿಕ್ಷಣವಾಗುತ್ತದೆ. ಜೊತೆಗೆ ಮಾನವೀಯ ಮೌಲ್ಯಗಳು ಬೆಳೆಯಲು ಸಹಕಾರಿಯಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು.ನಗರದ ಟಿಎಂಎಸ್ ಶಾಲೆಯಲ್ಲಿ ಜಿಲ್ಲಾ ಪಂಚಾಯ್ತಿ, ತಾಪಂ, ಶಾಲಾ ಶಿಕ್ಷಣ ಇಲಾಖೆ, ಶಿಕ್ಷಕರ ಸೇವಾ ಬಳಗದ ಸಹಯೋಗದಲ್ಲಿ ಬೆಂಗಳೂರಿನ ಮಾರುತಿ ಮೆಡಿಕಲ್ಸ್ ವತಿಯಿಂದ ಶನಿವಾರ ನಡೆದ ಸಮಾರಂಭದಲ್ಲಿ ನೋಟ್ ಪುಸ್ತಕ ವಿತರಿಸಿ ಅವರು ಮಾತನಾಡಿದರು. ಧರ್ಮ, ಸಂಸ್ಕೃತಿ ಸಂರಕ್ಷಣೆಗೆ ಇನ್ನೊಬ್ಬರಿಗೆ ಹಾನಿ ಮಾಡದಂತೆ ಜಾಗೃತಿ ಮೂಡಿಸುವ ಸಮಾಜಮುಖಿ ಕೆಲಸವನ್ನು ತನ್ನದೇಯಾದ ರೀತಿಯಲ್ಲಿ ಮಾರುತಿ ಮೆಡಿಕಲ್ಸ್ನ ಮಹೇಂದ್ರ ಮಾಡುತ್ತಿ ದ್ದಾರೆಂದು ಶ್ಲಾಘಿಸಿದರು.
ಕತ್ತಲು ಕತ್ತಲು ಎಂದು ಕೂಗಾಡುವುದರಿಂದ ಬೆಳಕು ಬರುವುದಿಲ್ಲ. ಪುಟ್ಟ ಹಣತೆ ಹಚ್ಚಿದಾಗ ಬೆಳಕು ಕೊಡುತ್ತದೆ. ಹಣತೆ ಯಿಂದ ಹಣತೆಗಳನ್ನು ಹಚ್ಚಿದರೆ ಮತ್ತಷ್ಟು ಬೆಳಕಾಗುತ್ತದೆ ಎಂಬುದಕ್ಕೆ ಉಳ್ಳವರು ಬಡವರಿಗೆ ದಾನ ನೀಡುವ ಮೂಲಕ ನೆರವಾದರೆ ಬದುಕು ಸಾರ್ಥಕವಾಗುತ್ತದೆ ಎಂದು ಹೇಳಿದರು.ಮಾನವೀಯ ಮೌಲ್ಯಗಳ ಬಗ್ಗೆ ಕಾಳಜಿ ಇರುವ ಹಾಗೆ ಮತ್ತು ಸಂವಿಧಾನದ ಕುರಿತು ಜಾಗೃತಿ ಮೂಡಿಸುವ, ಪರಿಸರದ ಬಗ್ಗೆ ಅರಿವು ಮೂಡಿಸುವ ಭೂ ರಕ್ಷಣೆ ಮಾಡುವ ಮೂಲಕ ಸಂದೇಶ ಕೊಡುವುದನ್ನು ಮಹೇಂದ್ರ ಸದ್ದಿಲ್ಲದೆ ಮಾಡುತ್ತಿ ದ್ದಾರೆಂದು ತಿಳಿಸಿದರು.ಜಯಕಾರ ಹಾಕಿಸಿಕೊಳ್ಳದೆ ಧಿಕ್ಕಾರ ಕೂಗದೆ ತನ್ನ ಪಾಡಿಗೆ ಈ ರೀತಿ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿ ದ್ದಾರೆ. ಚಿಕ್ಕಮಗಳೂರು ತಾಲೂಕಿನ ಎಲ್ಲಾ ಸರ್ಕಾರಿ ಶಾಲೆಗಳ ಒಂದರಿಂದ ಏಳನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿ ರುವ ಸುಮಾರು 10 ಸಾವಿರ ವಿದ್ಯಾರ್ಥಿಗಳಿಗೆ ₹6.5 ಲಕ್ಷ ರು. ವೆಚ್ಚದಲ್ಲಿ ನೋಟ್ ಪುಸ್ತಕಗಳನ್ನು ಮಹೇಂದ್ರ ಮುನ್ನೋತ್ ನೀಡುತ್ತಿದ್ದಾರೆ ಎಂದು ಹೇಳಿದರು.ಕೆಲಸ ಮಾಡಿ ಓಟ್ ಕೇಳುತ್ತೇವೆ. ಓಟ್ಗಾಗಿ ಇವರು ಕೆಲಸ ಮಾಡಿಲ್ಲ. ನೋಟ್ ಪುಸ್ತಕ ಕೊಟ್ಟು ಬಡ ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಪ್ರಗತಿ ನಿರೀಕ್ಷಿಸಿದ್ದಾರೆ ಎಂದ ಅವರು, ನೋಟ್ ಪುಸ್ತಕಗಳ ಕೊಡುಗೆ ವಿದ್ಯಾರ್ಥಿಗಳ ಜೀವನಕ್ಕೆ ಮತ್ತು ಶಿಕ್ಷಣಕ್ಕೆ ಆಧಾರವಾಗುತ್ತದೆ ಎಂದು ಹೇಳಿದರು.ಪ್ರಾಸ್ತಾವಿಕವಾಗಿ ಮಾತನಾಡಿದ ಶಿಕ್ಷಕಿ ಗೀತಾ , ಬದಲಾದ ಶೈಕ್ಷಣಿಕ ಪದ್ಧತಿಯಲ್ಲಿ ಸರ್ಕಾರದ ಆದೇಶದಂತೆ ಎಲ್ಲಾ ಕೆಲಸಗಳನ್ನು ಶಿಕ್ಷಕರು ಮಾಡುತ್ತಾರೆ. ಸರ್ಕಾರಿ ಶಾಲೆ ಮಕ್ಕಳಿಗೆ ನಮ್ಮ ಮಕ್ಕಳೆಂಬ ಭಾವನೆಯಿಂದ ಸೇವೆ ಸಲ್ಲಿಸುತ್ತಿ ದ್ದಾರೆ ಎಂದು ತಿಳಿಸಿದರು.ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಾಧ್ಯಕ್ಷ ಬಿ.ಎನ್ ಸುಂದರೇಶ್ ಅಧ್ಯಕ್ಷತೆ ವಹಿಸಿದ್ದರು. ದಾನಿ ಮಹೇಂದ್ರ ಮನ್ನೋತ್, ನೌಕರರ ಸಂಘದ ಜಿಲ್ಲಾಧ್ಯಕ್ಷ ದೇವೇಂದ್ರ, ವಿವಿಧ ಶಿಕ್ಷಕರ ಸಂಘದ ಮುಖಂಡರಾದ ಸುಮಿತ್ರ, ಚಂದ್ರೇ ಗೌಡ, ವಸಂತಕುಮಾರ್, ಪುಷ್ಪ, ಚಂದ್ರಯ್ಯ, ದಿನೇಶ್, ರಾಮದಾಸ್, ಅನ್ನಪೂರ್ಣ ಉಪಸ್ಥಿತರಿದ್ದರು. ಜೋಗಪ್ಪ ಸ್ವಾಗತಿಸಿದರು. 9 ಕೆಸಿಕೆಎಂ 1ಚಿಕ್ಕಮಗಳೂರಿನ ಟಿಎಂಎಸ್ ಶಾಲೆಯಲ್ಲಿ ಶನಿವಾರ ನಡೆದ ದಾನಿಗಳು ನೀಡಿರುವ ನೋಟ್ ಪುಸ್ತಕಗಳ ವಿತರಣಾ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಉದ್ಘಾಟಿಸಿದರು.