ಕನ್ನಡಪ್ರಭ ವಾರ್ತೆ ಚಾಮರಾಜನಗರ
ಆಶೀರ್ವಚನ ನೀಡಿದ ಚನ್ನಬಸವೇಶ್ವರ ಪ್ರತಿಷ್ಠಾನದ ಅಧ್ಯಕ್ಷ ಸರ್ಪಭೂಷಸ್ವಾಮೀಜಿ, ಪ್ರತಿಯೊಬ್ಬರು ಸ್ವಾವಲಂಬಿ ಬದುಕು ಸಾಗಿಸಲು ಶಿಕ್ಷಣ ಪಡೆಯಬೇಕಾದ ಅಗತ್ಯವಿದೆ. ಯಾವುದೇ ಕ್ಷೇತ್ರದಲ್ಲಿ ಸೇವೆ ಸಲ್ಲಿಸಬೇಕಾದರೂ, ಸಂಸ್ಕಾರಯುತ ಶಿಕ್ಷಣ ಅಗತ್ಯ ಎಂದರು. ಶಾಲಾಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಚಂದ್ರರಾಜೇ ಅರಸ್ ಮಾತನಾಡಿ, ಭಾರತದ ಸಂಸ್ಕೃತಿಯನ್ನು ಪ್ರಪಂಚದ ಇತರೇ ದೇಶಗಳು ಅನುಕರಣೆ ಮಾಡುತ್ತಿವೆ. ಇಂದು ಹೆಣ್ಣುಮಕ್ಕಳಿಗೆ ಭದ್ರತೆ ಒದಗಿಸುವ ಶಿಕ್ಷಣ ಸಂಸ್ಥೆಗಳು ಅಗತ್ಯವಿದ್ದು, ಅಂತಹ ಸಂಸ್ಥೆಯ ಶಾಲೆಗಳನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದರು.
ಹರವೆ ಚನ್ನಬಸವೇಶ್ವರ ವಿದ್ಯಾಸಂಸ್ಥೆ ಎಸ್ಎಸ್ಎಲ್ಸಿಯಲ್ಲಿ ಪ್ರತಿವರ್ಷ 100ವಿದ್ಯಾರ್ಥಿಗಳಿಗೆ 96 ವಿದ್ಯಾರ್ಥಿಗಳು ಉತ್ತೀರ್ಣರಾಗುತ್ತಿರುವುದು ಶಾಲೆಯಲ್ಲಿ ಕೊಡುವ ಗುಣಮಟ್ಟದ ಶಿಕ್ಷಣಕ್ಕೆ ಪೂರಕವಾಗಿದೆ ಎಂದರು.ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮದ ಮಾಜಿ ನಿರ್ದೇಶಕ ಎಂ.ಶಿವಮೂರ್ತಿ ಮಾತನಾಡಿ, ಮಕ್ಕಳು ಶೈಕ್ಷಣಿಕವಾಗಿ ಪ್ರಗತಿ ಹೊಂದಬೇಕಾದರೆ ಅವರಿಗೆ ಮೌಲ್ಯಯುತ ಶಿಕ್ಷಣ ಸಿಗಬೇಕು, ಆ ನಿಟ್ಟಿನಲ್ಲಿ ಮಠಮಾನ್ಯಗಳು ಶಿಕ್ಷಣ ಕ್ಷೇತ್ರಕ್ಕೆ ಅಮೂಲ್ಯ ಕೊಡುಗೆ ನೀಡುತ್ತಿವೆ, ಪೋಷಕರು ತಮ್ಮ ಮಕ್ಕಳಿಗೆ ಮೊಬೈಲ್ ಕೊಡುವ ಅಭ್ಯಾಸ ಮಾಡಬಾರದು, ಟೀವಿ ವೀಕ್ಷಣೆಯಿಂದ ದೂರವಿರಿಸಬೇಕು ಎಂದು ಮನವಿ ಮಾಡಿದರು. ಉದ್ಘಾಟನಾ ಸಮಾರಂಭದ ನಂತರ ಶಾಲಾ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಕೆಎಂಎಫ್ ಹಾಗೂ ಚಾಮುಲ್ ನಿರ್ದೇಶಕ ಎಂ.ನಂಜುಂಡಸ್ವಾಮಿ, ಎಚ್.ಎಸ್.ಬಸವರಾಜು, ಸದಾಶಿವಮೂರ್ತಿ, ವಕೀಲರಾದ ಎಚ್.ಪಿ.ಮಹದೇವಪ್ಪ, ಬಿ.ಪ್ರಭುಸ್ವಾಮಿ, ಮಾತನಾಡಿದರು.ತಾಪಂ ಮಾಜಿ ಸದಸ್ಯ ಬಿ.ಉದಯಕುಮಾರ್, ಬಿಇಒ ಹನುಮಶೆಟ್ಟಿ, ಚನ್ನಬಸವೇಶ್ವರ ಪ್ರತಿಷ್ಠಾನದ ಕಾರ್ಯದರ್ಶಿ ಎಚ್.ಎಸ್.ಗಿರೀಶ್, ಚನ್ನಬಸವೇಶ್ವರ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರೌಡಶಾಲಾ ಮುಖ್ಯಶಿಕ್ಷಕರು, ಹಿರಿಯ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕರು,ಸಹಶಿಕ್ಷಕರು, ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಪೋಷಕರು ಇತರರು ಇದ್ದರು.