ಕನ್ನಡಪ್ರಭ ವಾರ್ತೆ ಹೊಸಕೋಟೆ
ತಾಲೂಕಿನ ಮಗ್ಗದವರ ಸಮುದಾಯದ ವಿದ್ಯಾರ್ಥಿಗಳಿಗೆ ಎಚ್.ಕ್ರಾಸ್ ಸಮೀಪದ ಖಾಸಗಿ ಸಭಾಭವನದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶಿಕ್ಷಣವೇ ಸಮಾಜವನ್ನು ಉತ್ತಮ ದಿಕ್ಕಿನಲ್ಲಿ ಬೆಳೆಸುವ ಶಕ್ತಿ. ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನಮ್ಮ ಮಗ್ಗದ ಸಂಘಟನೆ ಕುಟುಂಬ ಸದಾ ಬೆಂಬಲ ನೀಡಲಿದೆ. ಸಂಘದ ಸದಸ್ಯರಷ್ಟೇ ಅಲ್ಲದೆ ಸಮಾಜದ ಎಲ್ಲ ವರ್ಗಗಳ ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಈ ಸೇವೆಯನ್ನು ಮುಂದುವರಿಸುತ್ತಿದ್ದೇವೆ, ಕಳೆದ ಒಂಬತ್ತು ವರ್ಷಗಳಿಂದ ನಿರಂತರವಾಗಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ನೆರವು ನೀಡುತ್ತಿದ್ದು ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರತಿಭಾ ಪುರಸ್ಕಾರ ಪ್ರಾರಂಭ ಮಾಡಿ ಈಗ ಬೆಂಗಳೂರು ಗ್ರಾಮಾಂತರ ಜಿಲ್ಲೆಗೂ ವಿಸ್ತರಣೆ ಮಾಡಿದ್ದೇವೆ. ಇದುವರೆಗೆ ಸುಮಾರು ೩೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯಧನ, ಪ್ರತಿಭಾ ಪುರಸ್ಕಾರ ಹಾಗೂ ಅಗತ್ಯ ನೆರವು ನೀಡಲಾಗಿದೆ ಎಂದರು.ಮಗ್ಗದವರ ಸಂಘದ ಜಿಲ್ಲಾಧ್ಯಕ್ಷ ದೊಡ್ಡಹರಳಗೆರೆ ನಾಗೇಶ ಮಾತನಾಡಿ, ಈ ವರ್ಷ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗಿದೆ. ಜೊತೆಗೆ ವಿದ್ಯಾರ್ಥಿಗಳ ಮುಂದಿನ ಶಿಕ್ಷಣಕ್ಕೆ ಆರ್ಥಿಕ ಸಹಾಯ ನೀಡಲಾಗಿದೆ. ಮಗ್ಗದ ಸಮುದಾಯ ಅಲ್ಪಸಂಖ್ಯಾತರ ರೀತಿ ಇದ್ದು ಸಮಾಜದ ಮುಖ್ಯವಾಹಿನಿಗೆ ಬರಬೇಕಾಗಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಸಂಘಟನೆ ಮತ್ತಷ್ಟು ಪರಿಣಾಮಕಾರಿಯಾಗಿ ಕಾರ್ಯಚಟುವಟಿಕೆ ರೂಪಿಸಲಿದೆ ಎಂದರು.