ಕನ್ನಡಪ್ರಭ ವಾರ್ತೆ ಸಿದ್ದಾಪುರ
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ, ಪ್ರತಿಭಾ ಪುರಸ್ಕಾರ ಹಾಗೂ ನೂತನವಾಗಿ ನಿರ್ಮಾಣಗೊಂಡ ಸಭಾಭವನ ಉದ್ಘಾಟನಾ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು.
ಸಿದ್ದಗಂಗಾ ಮಠದಂತಹ ಧಾರ್ಮಿಕ ಕೇಂದ್ರಗಳು ಪ್ರತಿದಿನ ಹತ್ತಾರು ಸಾವಿರ ಮಕ್ಕಳಿಗೆ ಅನ್ನ ಹಾಗೂ ಜ್ಞಾನದಾಸೋಹ ನೀಡುತ್ತಿವೆ. ಸಂವಿಧಾನದ ಆಶಯಗಳಂತೆ ವ್ಯಕ್ತಿಗೆ ಏನನ್ನು ನೀಡದಿದ್ದರೂ ಶಿಕ್ಷಣ ನೀಡಬೇಕು. ಏಕೆಂದರೆ ಶಿಕ್ಷಣವೇ ನಾಗರಿಕತೆಯ ಮೂಲಬುನಾದಿಯಾಗಿದೆ. ಇವತ್ತಿನ ದಿನಗಳಲ್ಲಿ ಸೌಲಭ್ಯಗಳು ಹೆಚ್ಚಾಗುತ್ತಿದ್ದರೂ, ಶಿಕ್ಷಣ ಹಾಗೂ ಜ್ಞಾನದ ಮಟ್ಟ ಕಡಿಮೆಯಾಗುತ್ತಿರುವುದು ವಿಷಾದನೀಯ ಎಂದರು.ನೂತನ ಸಭಾಭವನ ಉದ್ಘಾಟಿಸಿ ಮಾತನಾಡಿದ ಶಾಸಕ ಭೀಮಣ್ಣ ನಾಯ್ಕ, ಸನಾತನ ಧರ್ಮದ ರಕ್ಷಣೆ ಹಾಗೂ ಪ್ರತಿಯೊಂದು ಸಮಾಜದ ಶೈಕ್ಷಣಿಕ ಮತ್ತು ಸಾಮಾಜಿಕ ಏಳಿಗೆಯೇ ನಮ್ಮ ಮುಖ್ಯ ಧ್ಯೇಯವಾಗಿದೆ. ಕೇವಲ ಶಾಸಕರಷ್ಟೇ ಅಲ್ಲದೆ ಪಂಚಾಯಿತಿಯಿಂದ ಪಾರ್ಲಿಮೆಂಟ್ವರೆಗಿನ ಪ್ರತಿಯೊಬ್ಬ ಚುನಾಯಿತ ಸದಸ್ಯನೂ ಸರ್ಕಾರದ ಹಣವನ್ನು ತಂದು ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಿದಾಗ ಮಾತ್ರ ಪ್ರಜಾಪ್ರಭುತ್ವ ವ್ಯವಸ್ಥೆ ಸಾರ್ಥಕಗೊಳ್ಳುತ್ತದೆ. ಪ್ರತಿಭಾವಂತ ಮಕ್ಕಳನ್ನು ಗೌರವಿಸುವುದು ಮತ್ತು ಮಕ್ಕಳಿಗೆ ಉತ್ತಮ ಶಿಕ್ಷಣ ಹಾಗೂ ಸಂಸ್ಕಾರ ನೀಡುವುದು ತಾಯಂದಿರ ಮತ್ತು ಸಮಾಜದ ಜವಾಬ್ದಾರಿಯಾಗಿದೆ. ದೇಶದ ಅಭಿವೃದ್ಧಿ, ಭದ್ರತೆ, ಸಮಾನತೆ ಮತ್ತು ನೆಮ್ಮದಿಯ ಬದುಕಿಗೆ ಶಿಕ್ಷಣವೇ ಏಕೈಕ ಮಾರ್ಗವಾಗಿದೆ ಎಂದರು.
ತಾಲೂಕು ಘಟಕದ ಅಧ್ಯಕ್ಷ ಸಿ.ಎಸ್. ಗೌಡರ್ ಹೆಗ್ಗೋಡಮನೆ ಅಧ್ಯಕ್ಷತೆ ವಹಿಸಿದ್ದರು.
ನೂತನ ಸಭಾಭವನದ ಗುತ್ತಿಗೆದಾರರಾದ ಸತೀಶ ಗೌಡರ್, ವಸಂತ ನಾಯ್ಕ ಹಾಗೂ ಭರಮಣ್ಣ ಅವರನ್ನು ಸನ್ಮಾನಿಸಲಾಯಿತು. ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.