ಮಂಡ್ಯ: ಮಹಿಳೆಯರ ಸಬಲೀಕರಣಕ್ಕೆ ಮತ್ತು ಆರ್ಥಿಕ, ಸಾಮಾಜಿಕ , ವೈಯಕ್ತಿಕ ಸ್ವಾತಂತ್ರ್ಯಕ್ಕೆ ಶಿಕ್ಷಣವೊಂದೇ ಮಾರ್ಗ ಎಂದು ಕ್ರಿಯಾ ಸಂಸ್ಥಾಪಕ ಪ್ರಸನ್ನಕುಮಾರ್ ಕೆರಗೋಡು ಅಭಿಪ್ರಾಯಪಟ್ಟರು.
ಜಿಲ್ಲೆಯಲ್ಲಿ ಹೆಚ್ಚು ಹೆಣ್ಣು ಮಕ್ಕಳು ಶಾಲಾ- ಕಾಲೇಜು ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸಿ ಬಾಲ್ಯವಿವಾಹಕ್ಕೆ ಒಳಗಾಗುವುದು ಹಾಗೂ ಇದರೊಂದಿಗೆ ಹೆಣ್ಣು ಭ್ರೂಣ ಹತ್ಯೆಯಂತಹ ಅನಿಷ್ಠ ಪದ್ಧತಿಯೂ ಸೇರಿಕೊಂಡಿದೆ ಎಂದು ಬೇಸರ ವ್ಯಕ್ತಪಡಿಸಿದರು.
ವಿದ್ಯಾರ್ಥಿನಿಯರಿಗೆ ಅತಿ ಹೆಚ್ಚು ಜವಾಬ್ದಾರಿ ಇದೆ. ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯವನ್ನು ಗಳಿಸಿಕೊಳ್ಳಬೇಕಾದರೆ ಉತ್ತಮ ಉದ್ಯೋಗ ಪಡೆದುಕೊಳ್ಳುವುದು ಅತ್ಯವಶ್ಯಕ, ಆ ಹಿನ್ನೆಲೆಯಲ್ಲಿ ಕಠಿಣ ಶ್ರಮ ವಹಿಸಿ ಉತ್ತಮ ಜೀವನ ಮಾರ್ಗ ಕಂಡುಕೊಳ್ಳುವಂತೆ ಕರೆ ನೀಡಿದರು.ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕೆ.ಮಂಜುಳಾ ಮಾತನಾಡಿ, ಇಲಾಖೆ ವತಿಯಿಂದ ಹೆಣ್ಣು ಮಕ್ಕಳ ಕಲ್ಯಾಣಕ್ಕೆ ವಸತಿ ಮತ್ತು ಊಟದ ಜೊತೆಗೆ ಅನೇಕ ಶೈಕ್ಷಣಿಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಆ ಎಲ್ಲಾ ಸವಲತ್ತುಗಳನ್ನು ಬಳಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.
-------------