ಶಿಕ್ಷಣವೇ ಸಮಾಜದ ಅಭಿವೃದ್ಧಿಗೆ ಬಲಿಷ್ಠ ಅಡಿಪಾಯ

KannadaprabhaNewsNetwork |  
Published : Jan 30, 2026, 01:30 AM IST
ಫೋಟೋ: 29 ಹೆಚ್‌ಎಸ್‌ಕೆ 2ಹೊಸಕೋಟೆ ತಾಲೂಕಿನ ಅತ್ತಿವಟ್ಟ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ “ನಮ್ಮ ಪುಣ್ಯ ಭೂಮಿ ಸೇವಾ ಸಮಿತಿ” ವತಿಯಿಂದ ಸಂಸ್ಥಾಪಕ ಹಾಗೂ ರಾಜ್ಯಾಧ್ಯಕ್ಷ ಸಂತೋಷ್ ಕಲಿಕಾ ಸಾಮಾಗ್ರಿಗಳನ್ನು ವಿತರಿಸಿದರು. | Kannada Prabha

ಸಾರಾಂಶ

ಹೊಸಕೋಟೆ: ಶಿಕ್ಷಣವೇ ಸಮಾಜದ ಬಲಿಷ್ಠ ಅಡಿಪಾಯವಾಗಿದ್ದು, ಸರ್ಕಾರಿ ಶಾಲೆಗಳಲ್ಲಿನ ಮಕ್ಕಳಿಗೆ ಸಮಾನ ಅವಕಾಶಗಳು ದೊರಕಬೇಕು ಎಂಬುದು ನಮ್ಮ ಪುಣ್ಯ ಭೂಮಿ ಸೇವಾ ಸಮಿತಿಯ ದೃಢ ನಿಲುವಾಗಿದೆ ಎಂದು ಸಂಸ್ಥಾಪಕ ರಾಜ್ಯಾಧ್ಯಕ್ಷ ಸಂತೋಷ್ ತಿಳಿಸಿದರು

ಹೊಸಕೋಟೆ: ಶಿಕ್ಷಣವೇ ಸಮಾಜದ ಬಲಿಷ್ಠ ಅಡಿಪಾಯವಾಗಿದ್ದು, ಸರ್ಕಾರಿ ಶಾಲೆಗಳಲ್ಲಿನ ಮಕ್ಕಳಿಗೆ ಸಮಾನ ಅವಕಾಶಗಳು ದೊರಕಬೇಕು ಎಂಬುದು ನಮ್ಮ ಪುಣ್ಯ ಭೂಮಿ ಸೇವಾ ಸಮಿತಿಯ ದೃಢ ನಿಲುವಾಗಿದೆ ಎಂದು ಸಂಸ್ಥಾಪಕ ರಾಜ್ಯಾಧ್ಯಕ್ಷ ಸಂತೋಷ್ ತಿಳಿಸಿದರು.

ತಾಲೂಕಿನ ಅತ್ತಿವಟ್ಟ ಗ್ರಾಮದಲ್ಲಿ ನಮ್ಮ ಪುಣ್ಯ ಭೂಮಿ ಸೇವಾ ಸಮಿತಿಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಸಾಮಗ್ರಿ, ಶಾಲಾ ಬ್ಯಾಗ್ ಮತ್ತು ಶಾಲೆಗೆ ಪಿಠೋಪಕರಣಗಳು ವಿತರಿಸಿ ಮಾತನಾಡಿ, ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರಕಬೇಕು ಎಂಬ ಉದ್ದೇಶದಿಂದಲೇ ಇಂತಹ ಸೇವಾ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದರು.

ಸಮಾಜ ಸೇವಕರಾದ ಸರ್ಜಾಪುರ ಎಸ್ಎಲ್‌ವಿ ಮಂಜುನಾಥ್ ಮಾತನಾಡಿ, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಕ್ಕಳಿಗೆ ಶಿಕ್ಷಣವೇ ಜೀವನದ ದಿಕ್ಕು ತೋರಿಸುವ ದೀಪವಾಗಿದ್ದು, ಇಂತಹ ಸಮಯದಲ್ಲಿ ನಮ್ಮ ಪುಣ್ಯ ಭೂಮಿ ಸೇವಾ ಸಮಿತಿಯ ಸೇವಾ ಕಾರ್ಯ ಶ್ಲಾಘನೀಯ. ಸಮಾಜದ ಪ್ರತಿಯೊಬ್ಬರೂ ಶಿಕ್ಷಣದ ಅಭಿವೃದ್ಧಿಗೆ ಕೈಜೋಡಿಸಬೇಕು. ಸರ್ಕಾರದ ಜೊತೆಗೆ ಸ್ವಯಂಸೇವಾ ಸಂಸ್ಥೆಗಳು ಹಾಗೂ ಸಮಾಜಮುಖಿ ವ್ಯಕ್ತಿಗಳು ಮುಂದೆ ಬಂದಾಗ ಮಾತ್ರ ಸರ್ಕಾರಿ ಶಾಲೆಗಳು ಇನ್ನಷ್ಟು ಬಲಿಷ್ಠವಾಗುತ್ತವೆ ಎಂದರು.

ಕಾರ್ಯಕ್ರಮದಲ್ಲಿ ಬ್ಯಾಗಡದೇನಹಳ್ಳಿ ಗ್ರಾಪಂ ಸದಸ್ಯ ಸೊಪ್ಪಹಳ್ಳಿ ಸತೀಶ್, ಚಲನಚಿತ್ರ ನಟ ಸತ್ಯ, ಹಾರಗದ್ದೆ ಮನು, ಅಶೋಕ್, ಹಾಗೂ ನಮ್ಮ ಪುಣ್ಯ ಭೂಮಿ ಸೇವಾ ಸಮಿತಿ ಪದಾಧಿಕಾರಿಗಳು ಹಾಜರಿದ್ದರು.

ಫೋಟೋ: 29 ಹೆಚ್‌ಎಸ್‌ಕೆ 2

ಹೊಸಕೋಟೆ ತಾಲೂಕಿನ ಅತ್ತಿವಟ್ಟ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ನಮ್ಮ ಪುಣ್ಯ ಭೂಮಿ ಸೇವಾ ಸಮಿತಿ ಸಂಸ್ಥಾಪಕ ರಾಜ್ಯಾಧ್ಯಕ್ಷ ಸಂತೋಷ್ ಕಲಿಕಾ ಸಾಮಗ್ರಿಗಳನ್ನು ವಿತರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದಿನೇದಿನೇ ಏರುತ್ತಿರುವ ಚಿನ್ನದ ದರ ಇಳಿಯಲಿ ಎಂದು ಭಕ್ತನ ಹರಕೆ !
₹70 ಲಕ್ಷ ವಿದ್ಯುತ್‌ ಬಿಲ್‌ ಬಾಕಿ: ಸಿದ್ಧಗಂಗಾ ಮಠಕ್ಕೆ ನೀರು ಬಂದ್‌!