ಶ್ರಮಿಕ ವರ್ಗ ಮಕ್ಕಳ ವಿದ್ಯಾಭ್ಯಾಸದ ಕಡೆ ಗಮನ ಹರಿಸಬೇಕು: ಶಾಸಕ ಗೋಪಾಲಕೃಷ್ಣ ಬೇಳೂರು

KannadaprabhaNewsNetwork |  
Published : Sep 29, 2024, 01:32 AM IST
ಕ್ಷೇಮಾಭಿವೃದ್ದಿ ಟ್ರಸ್ಟ್ ಉದ್ಘಾಟಿಸಿದರು | Kannada Prabha

ಸಾರಾಂಶ

ಸಾಗರ ತಾಲ್ಲೂಕು ಪೈಂಟ್ ಗುತ್ತಿಗೆದಾರರು ಹಾಗೂ ಕೆಲಸಗಾರರ ಕ್ಷೇಮಾಭಿವೃದ್ಧಿ ಟ್ರಸ್ಟ್‌ಗೆ ಶಾಸಕ ಬೇಳೂರು ಗೋಪಾಲಕೃಷ್ಣ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಸಾಗರ

ಶ್ರಮಿಕವರ್ಗದವರ ಮಕ್ಕಳು ಶ್ರಮಿಕರಾಗಬೇಕು ಎಂಬ ನಿಯಮವಿಲ್ಲ. ಅವರು ಕೂಡ ವೈದ್ಯರು, ಇಂಜಿನಿಯರ್ ಆಗಬಹುದು. ಹಾಗಾಗಿ ಶ್ರಮಿಕವರ್ಗದವರು ಮಕ್ಕಳ ವಿದ್ಯಾಭ್ಯಾಸಕ್ಕೆ ಆದ್ಯತೆ ನೀಡಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು ಹೇಳಿದರು.

ಇಲ್ಲಿನ ನಗರಸಭೆ ರಂಗಮಂದಿರದಲ್ಲಿ ಶುಕ್ರವಾರ ತಾಲ್ಲೂಕು ಪೈಂಟ್ ಗುತ್ತಿಗೆದಾರರು ಹಾಗೂ ಕೆಲಸಗಾರರ ಕ್ಷೇಮಾಭಿವೃದ್ಧಿ ಟ್ರಸ್ಟ್ ಉದ್ಘಾಟಿಸಿ, ಕಾರ್ಮಿಕರಿಗೆ ವಿಮಾ ಪಾಲಿಸಿ ವಿತರಿಸಿ ಮಾತನಾಡಿದ ಅವರು, ಗುಡಿಸಲಿನಲ್ಲಿ ವಾಸಿಸುವ ಕುಟುಂಬ ವೊಂದರ ಮಗುವೊಂದು ಐ.ಎ.ಎಸ್. ಅಧಿಕಾರಿಯಾಗಿರುವ ಉದಾಹರಣೆ ನಮ್ಮ ಎದುರಿಗೆ ಇದೆ. ನಿಮ್ಮ ಮಕ್ಕಳು ಮನಸ್ಸು ಮಾಡಿದರೆ ಅದು ಸಾಧ್ಯವಾಗುತ್ತದೆ. ವರಿಗೆ ನಿಮ್ಮ ಪ್ರೋತ್ಸಾಹ ಮುಖ್ಯ ಎಂದರಲ್ಲದೆ ಕಾರ್ಮಿಕರು ವಿಮೆ ಮಾಡಿಸುವ ಮೂಲಕ ಆಪತ್ಕಾಲದಲ್ಲಿ ಕುಟುಂಬಕ್ಕೆ ನೆರವಾಗಬೇಕು. ಸಂಘಟಿತರಾಗಿ ಸರ್ಕಾರಿ ಸೌಲಭ್ಯ ಪಡೆಯಬೇಕು ಎಂದು ಸಲಹೆ ನೀಡಿದರು.

ತಾಲ್ಲೂಕು ಅಸಂಘಟಿತ ಕಾರ್ಮಿಕರ ಘಟಕದ ಅಧ್ಯಕ್ಷ ಕೆ.ಸಿದ್ದಪ್ಪ ಮಾತನಾಡಿ, ಮನೆಯೊಂದು ಸುಂದರವಾಗಿ ಕಾಣಬೇಕಾದರೆ ಪೈಂಟರ್ಗಳ ಪಾತ್ರ ಪ್ರಮುಖವಾಗಿರುತ್ತದೆ. ಅತ್ಯಂತ ಕಷ್ಟಪಟ್ಟು ನೀವು ಕೆಲಸ ಮಾಡುತ್ತೀರಿ. ನೀವು ಸಂಘಟಿತರಾಗುವುದು ಹೆಚ್ಚು ಅಗತ್ಯವಾಗಿದೆ. ಅಸಂಘಟಿತ ಕಾರ್ಮಿಕ ವಲಯದಲ್ಲಿ ಗುರುತಿಸಿಕೊಂಡಿರುವ ನಿಮ್ಮ ಪರವಾಗಿ ನಮ್ಮ ಸಂಘಟನೆ ನಿಲ್ಲುತ್ತದೆ ಎಂದು ಹೇಳಿದರು.

ಸಂಘದ ಅಧ್ಯಕ್ಷ ರಾಜು ಬಿ. ಮಡಿವಾಳ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಮಾಜಿ ಅಧ್ಯಕ್ಷ ಎಸ್.ವಿ.ಕೃಷ್ಣಮೂರ್ತಿ, ಕಾರ್ಮಿಕ ನಿರೀಕ್ಷಕಿ ಶಿಲ್ಪ, ಶ್ರೀನಿವಾಸ್ ಮೇಸ್ತ್ರಿ, ರಾಬರ್ಟ್ ಗೋಮ್ಸ್, ಗೌತಮ್ ಕೆ.ಎಸ್. ಹಾಜರಿದ್ದರು. ಜೆ.ಕೆ. ಶ್ರೀನಿವಾಸ್ ಸ್ವಾಗತಿಸಿದರು. ಮಂಜುಭಟ್ಟ ವಂದಿಸಿದರು. ಹರೀಶ್ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ