ಕನ್ನಡಪ್ರಭ ವಾರ್ತೆ ರಾಯಚೂರುಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಗುಣಮಟ್ಟದ ಸುಧಾರಣೆಗೆ ಕಳೆದ ಎರಡು ವರ್ಷಗಳಿಂದ ಶಿಕ್ಷಣ ಭಾಗೀದಾರರ ಸಮಾವೇಶ ನಡೆಸುತ್ತಿದ್ದು, ಇದರಿಂದ ಮಕ್ಕಳ ಕಲಿಕೆಗೆ ಬೇಕಾಗಿರುವ ಪೂರ್ವ ತಯಾರಿಗೆ ಕ್ರಿಯಾ ಯೋಜನೆ ರೂಪಿಸಲಾಗುತ್ತಿದೆ ಎಂದು ಕಲಬುರಗಿ ವಿಭಾಗದ ಶಿಕ್ಷಣ ಇಲಾಖೆಯ ಆಯುಕ್ತರಾದ ಡಾ. ಆಕಾಶ್ .ಎಸ್ ತಿಳಿಸಿದರು.ಸ್ಥಳೀಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಜಗಜ್ಯೋತಿ ಬಸವೇಶ್ವರ ಪ್ರೇಕ್ಷಾಗೃಹದಲ್ಲಿ ಶಾಲಾ ಶಿಕ್ಷಣ ಇಲಾಖೆ, ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ ಇವರ ಸಹಯೋಗ ದಲ್ಲಿ ಶಿಕ್ಷಣ ಭಾಗೀದಾರರ ಸಮಾವೇಶ -2025ರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಕ್ರವಾರ ಮಾತನಾಡಿದರು.
ರಾಮಕೃಷ್ಣ ದಾಸರಿ
ಕನ್ನಡಪ್ರಭ ವಾರ್ತೆ ರಾಯಚೂರುಶಿಕ್ಷಣ ತಜ್ಞರು,ಸ್ವಯಂ ಸೇವಾ ಸಂಸ್ಥೆ (ಎನ್ಜಿಒ) ಭಾಗೀದಾರರು ದೂರವಿಟ್ಟು, ನಡೆಸುತ್ತಿರುವ ಶಿಕ್ಷಣ ಭಾಗೀದಾರರ ಸಮಾವೇಶ-2025ರ ಕಾರ್ಯಕ್ರಮ ಸಂಪೂರ್ಣವಾಗಿ ಹಳಿತಪ್ಪಿದೆ.
ಶಾಲಾ ಶಿಕ್ಷಣ ಇಲಾಖೆ, ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ಸಹಯೋಗದಲ್ಲಿ ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಜಗಜ್ಯೋತಿ ಬಸವೇಶ್ವರ ಪ್ರೇಕ್ಷಾಗೃಹದಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಂಡಿರುವ ಸಮಾವೇಶದ ಉದ್ದೇಶವೇ ಕಣ್ಮರೆಯಾಗಿರುವುದಕ್ಕೆ ಎಲ್ಲೆಡೆ ತೀವ್ರ ಆಕ್ಷೇಪಣೆಗಳು ವ್ಯಕ್ತವಾಗುತ್ತಿವೆ.ಉದ್ದೇಶ ಬುಡಮೇಲು:
ಕಲ್ಯಾಣ ಕರ್ನಾಟಕ ವಿಭಾಗದ ಶಿಕ್ಷಣ ಕ್ಷೇತ್ರದಲ್ಲಿ ಅಗಾಧ ಪ್ರಮಾಣದಲ್ಲಿ ಸುಧಾರಣೆ ಕಾಣುವ ಉದ್ದೇಶದಡಿ ಗುಣಾತ್ಮಕ ಶಿಕ್ಷಣಕ್ಕಾಗಿ ಮತ್ತು ಶಿಕ್ಷಣ ಕ್ಷೇತ್ರದಲ್ಲಿನ ನವೀನ ವಿಧಾನಗಳ ಮೂಲಕ ಪರಿವರ್ತನೆಯನ್ನು ತರಲು ಶಿಕ್ಷಣ ತಜ್ಞರು,ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಶಿಕ್ಷಣ ಭಾಗೀದಾರರನ್ನು ಒಗ್ಗೂಡಿಸಿ ಸಾಧಕ-ಬಾಧಕಗಳ ಕುರಿತು ಸಮಾಲೋಚನೆ ನಡೆಸಲು ಆಯೋಜಿಸಿರುವ ಸಮಾವೇಶದ ಉದ್ದೇಶ ಬುಡಮೇಲಾಗಿದೆ.ಕೆಂಡಕಾರುತ್ತಿದ್ದಾರೆ: ಈ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಯ ಉದ್ದೇಶದಿಂದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧೀನದಲ್ಲಿ ಕಲ್ಯಾಣ ಕರ್ನಾಟಕ ಶೈಕ್ಷಣಿಕ ಸಮಿತಿ ರಚಿಸಿದ್ದು, ಇದರಲ್ಲಿ ರಾಯಚೂರು, ಯಾದಗಿರಿ ಹಾಗೂ ಕೊಪ್ಪಳ ಜಿಲ್ಲೆಗಳಿಗೆ ಅನ್ಯಾಯ ಮಾಡಿರುವ ಸಮಯದಲ್ಲಿಯೇ ಶುಕ್ರವಾರ ಸಮಾವೇಶದ ಚಾಲನೆ ಕಾರ್ಯ ಕ್ರಮದಲ್ಲಿ ಡಿಸಿ, ಇಲಾಖೆ ಆಯುಕ್ತರು, ಅಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಮಾತ್ರ ಭಾಗವಹಿಸಿದ್ದು, ಶಿಕ್ಷಣ ತಜ್ಞರು, ಎನ್ಜಿಒಗಳು, ಅನುದಾನಿತ, ಅನುದಾನ ರಹಿತ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು ಸೇರಿ ಶಿಕ್ಷಣಕ್ಕೆ ಸಂಬಂಧಪಟ್ಟ ವಿವಿಧ ಸಂಘಟನೆಗಳ ಪ್ರಮುಖರು, ಪದಾಧಿಕಾರಿಗಳು,ಸದಸ್ಯರಿಗೆ ಆಹ್ವಾನ ನೀಡದೇ ಸಮಾವೇಶ ಹಮ್ಮಿ ಕೊಂಡಿರುವ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ವಿರುದ್ಧ ಶಿಕ್ಷಣ ಪ್ರೇಮಿಗಳು ಕೆಂಡಕಾರುತ್ತಿದ್ದಾರೆ.ಸಂಖ್ಯೆ ತೋರಿಸಲು ಬುಲಾವ್ಸಮಾವೇಶದ ಮೊದಲ ದಿನ ಬರೀ ಶಿಕ್ಷಕರು, ವಿದ್ಯಾರ್ಥಿಗಳನ್ನು ಕರೆಯಿಸಿ ಮ್ಯಾನೇಜ್ ಮಾಡಿರುವ ಶಿಕ್ಷಣ ಇಲಾಖೆ ಎರಡನೇ ದಿನ ಮರ್ಯಾದ ಉಳಿಸಿಕೊಳ್ಳುಲು ಪ್ಲಾನ್ ಮಾಡಿದ್ದು, ಅದಕ್ಕಾಗಿ ಜಿಲ್ಲೆ ವಿವಿಧ ತಾಲೂಕುಗಳ ಆಯ್ದ ಶಾಲೆಗಳ ಶಿಕ್ಷಕರಿಗೆ ಬುಲವ್ ನೀಡಿದೆ. ನಗರ,ಪಟ್ಟಣ ಹಾಗೂ ಗ್ರಾಮೀಣ ಭಾಗದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಶೇ.50 ಕ್ಕು ಹೆಚ್ಚು ಕಾಯಂ ಶಿಕ್ಷರ ಕೊರತೆಯಿದ್ದು, ಎಲ್ಲೆಡೆ ಬರೀ ಅತಿಥಿ ಶಿಕ್ಷಕರೇ ತುಂಬು ತುಳುಕುತ್ತಿದ್ದಾರೆ ಬಹುತೇಕ ಶಾಲೆಗಳಲ್ಲಿ ಅನರ್ಹ ಅತಿಥಿ ಶಿಕ್ಷಕರೇ ಮಕ್ಕಳಿಗೆ ಕಲಿಸುತ್ತಿದ್ದು, ಶಿಕ್ಷಣ ತಜ್ಞರು, ಎನ್ಜಿಒ, ಭಾಗೀದಾರರನ್ನು ಬಿಟ್ಟು, ಇಂತವರನ್ನು ಸಮಾವೇಶದಲ್ಲಿ ಭಾಗಿಯಾಗಿಸಿ ಶಿಕ್ಷಣ ಕ್ಷೇತ್ರದ ಯಾವ ಸುಧಾರಣೆ ತರುತ್ತಾರೆ, ಕೆಕೆಆರ್ಡಿಬಿಯಿಂದ ಇತ್ತೀಚೆಗೆ ರಚಿಸಿದ ಕಲ್ಯಾಣ ಕರ್ನಾಟಕ ಶೈಕ್ಷಣೀಕ ಸಮಿತಿಯಲ್ಲಿ ರಾಯಚೂರು, ಯಾದಗಿರಿ, ಕೊಪ್ಪಳದವರಿಗೆ ಆದ್ಯತೆ ನೀಡದೇ ವಂಚಿಸಿರುವ ಈ ತರುಣದಲ್ಲಿ ಆಗಿರುವ ಅನ್ಯಾಯವನ್ನು ಸರಿಪಡಿಸುವುದನ್ನು ಬಿಟ್ಟು ಕೆಕೆಆರ್ಡಿಬಿ ಅಧ್ಯಕ್ಷರು, ಶಿಕ್ಷಣ ಇಲಾಖೆಯ ಆಯುಕ್ತರು ತರಾತುರಿಯಲ್ಲಿ ಬೇಕಾಬಿಟ್ಟಿಯಾಗಿ ಎರಡು ದಿನಗಳ ಶಿಕ್ಷಣ ಭಾಗೀದಾರರ ಸಮಾವೇಶವನ್ನು ಯಾವ ಪುರುಷಾರ್ಥಕ್ಕಾಗಿ ಆಯೋಜಿಸಿದ್ದಾರೆ ಎನ್ನುವುದನ್ನು ಬಹಿರಂಗ ಪಡಿಸಬೇಕು ಎಂದು ಜಿಲ್ಲೆ ಶಿಕ್ಷಣ ತಜ್ಞರು ಆಕ್ರೋಶಭರಿತದಿಂದ ಕೂಡಿದ ಒತ್ತಾಯವನ್ನು ಮಾಡಿದ್ದಾರೆ.