ಮೂಡುಬಿದಿರೆ ಸಮಾಜ ಮಂದಿರ ದಸರಾ ಸಮಾರೋಪ
ಶಾಲಾ ಶಿಕ್ಷಣದಲ್ಲಿ ಕ್ರಾಂತಿಕಾರಿ ಪರಿವರ್ತನೆ, ಸಂಶೋಧನೆಗೆ ಆದ್ಯತೆ, ರಾಷ್ಟ್ರೀಯತೆಯ ಮನೋಭಾವ ಇಂದಿನ ಅಗತ್ಯವಾಗಿದೆ. ಕೌಶಲ ಮಾತ್ರವಲ್ಲ ಸಾಮಾಜಿಕ ಕೌಶಲಗಳಿಲ್ಲದ ಶಿಕ್ಷಣ ಅರ್ಥಹೀನ. ಅದರಿಂದ ಯಾವುದೇ ಲಾಭವಿಲ್ಲ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು.
ಅವರು ಶುಕ್ರವಾರ ಸಂಜೆ ಸಮಾಜ ಮಂದಿರ ಸಭಾ ವತಿಯಿಂದ ಸಮಾಜ ಮಂದಿರದಲ್ಲಿ ಜರುಗಿದ ಐದು ದಿನಗಳ 78ನೇ ದಸರಾ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವವದ ಸಮಾರೋಪ ಸಮಾರಂಭದಲ್ಲಿ ಉನ್ನತ ಶಿಕ್ಷಣದ ಸವಾಲುಗಳ ಕುರಿತು ಮಾತನಾಡಿದರು.ಹಿರಿಯ ಲೆಕ್ಕ ಪರಿಶೋಧಕ ರಘುಪತಿ ಎಸ್. ಭಟ್ ಅಧ್ಯಕ್ಷತೆ ವಹಿಸಿದ್ದರು. ಸಮಾಜ ಮಂದಿರ ಸಭಾದ ಅಧ್ಯಕ್ಷ ಕೆ. ಅಭಯಚಂದ್ರ ಜೈನ್ ಉಪಸ್ಥಿತರಿದ್ದರು.ಸಮಾಜ ಮಂದಿರ ಪುರಸ್ಕಾರ:
ಸಿ.ಎಚ್. ಅಬ್ದುಲ್ ಗಫೂರ್ ಸ್ವಾಗತಿಸಿದರು. ಜತೆಕಾರ್ಯದರ್ಶಿ, ದಸರಾ ಉತ್ಸವ ಸಂಚಾಲಕ ಗಣೇಶ್ ಕಾಮತ್, ಕಾರ್ಯಕ್ರಮ ನಿರೂಪಿಸಿ, ಸನ್ಮಾನಿತರ ವಿವರ ನೀಡಿ ವಂದಿಸಿದರು. ಆಡಳಿತ ಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.