ದೊಡ್ಡಬಳ್ಳಾಪುರ: ವಿದ್ಯಾವಂತ ಸಮಾಜ ದೇಶದ ಪ್ರಗತಿಗೆ ಪೂರಕವಾಗಿದ್ದು, ಶೈಕ್ಷಣಿಕ ಪ್ರಗತಿ ಎಲ್ಲ ಸಂಘಟನೆಗಳ ಆದ್ಯತೆಯಾಗಬೇಕು. ಸ್ವಾತಂತ್ರ್ಯವನ್ನು ಸ್ವಹಿತಕ್ಕೆ ಬಳಸಿಕೊಳ್ಳುವುದು ತಪ್ಪು. ನಮ್ಮ ಮಕ್ಕಳನ್ನು ವಿದ್ಯಾವಂತರಾಗಿ ಮಾಡುವ ಮೂಲಕ ದೇಶದ ಏಳಿಗೆಗೆ ನಮ್ಮ ಕೊಡುಗೆ ನೀಡಬೇಕು ಎಂದು ಮುಖ್ಯ ಶಿಕ್ಷಕಿ ಲಕ್ಷ್ಮಮ್ಮ ತಿಳಿಸಿದರು.
ಬೆಂಗ್ರಾ ಜಿಲ್ಲಾ ಕಸಾಪ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ಮಕ್ಕಳು ಅಕ್ಷರದ ನಂಟನ್ನು ಗಟ್ಟಿಗೊಳಿಸಿಕೊಳ್ಳುವುದು ಅಗತ್ಯ. ಶೈಕ್ಷಣಿಕ ಸಾಧನೆ ಸಾಮಾಜಿಕ ಪ್ರಗತಿಯ ದ್ಯೋತಕವೂ ಆಗಿರುತ್ತದೆ. ದೇಶದ ಸ್ವಾತಂತ್ರ್ಯ ಚಳವಳಿಯ ಗಾಥೆಯನ್ನು ಅರಿತುಕೊಳ್ಳುವ ಸಂದರ್ಭದಲ್ಲಿ ಆ ಮಹಾ ಹೋರಾಟದಲ್ಲಿ ದೊಡ್ಡಬಳ್ಳಾಪುರದ ಕೊಡುಗೆಯನ್ನು ಸ್ಮರಿಸುವುದು ಅಗತ್ಯ ಎಂದರು.
78ನೇ ಸ್ವಾತಂತ್ರ್ಯ ದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ರಾಮಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷರಾದ ರಾಮಣ್ಣ, ಸೋಮಶೇಖರ್, ಪ್ರಧಾನ ಕಾರ್ಯದರ್ಶಿ ರಾಮಚಂದ್ರ, ಖಜಾಂಚಿ ಮುನಿನಾರಾಯಣಸ್ವಾಮಿ, ಸಹ ಕಾರ್ಯದರ್ಶಿ ವಿಜಯಕುಮಾರ್, ನಿರ್ದೇಶಕರಾದ ಲಕ್ಷ್ಮೀಕಾಂತ, ಬಾಬು, ಅನಿಲ್ಕುಮಾರ್, ಮಧುಚಂದ್ರ, ಜಯರಾಮ್, ನಾರಾಯಣಸ್ವಾಮಿ, ಅಶೋಕ್, ಶೋಭಾ, ಆರ್.ಶೋಭಾ ಹಾಜರಿದ್ದರು.17ಕೆಡಿಬಿಪಿ1-
ದೊಡ್ಡಬಳ್ಳಾಪುರದ ದೇವರ ದಾಸಿಮಯ್ಯ ಮಿತ್ರ ಮಂಡಲಿ ನೇಕಾರರ ಸಂಘದಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.