ಪಠ್ಯ ವಿಚಾರ ವಿನಿಮಯದಿಂದ ಶೈಕ್ಷಣಿಕ ಉನ್ನತಿ: ಪೂರ್ವಿಕ

KannadaprabhaNewsNetwork |  
Published : Mar 04, 2026, 03:00 AM IST
ಜಿಲ್ಲೆಯಲ್ಲಿನಡೆದ 2024-25 ನೇ ಸಾಲಿನ ಪರೀಕ್ಷೆಯಲ್ಲಿಕನ್ನಡ ಮಾಧ್ಯಮದಲ್ಲಿ ಅತಿ ಹೆಚ್ಚು ಅಂಕಪಡೆದ ಸೋಮವಾರಪೇಟೆ ತಾಲೂಕಿನ ನಿಡ್ತ ಗ್ರಾಮದಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಕು. ಜೆ ಎಸ್ಪೂರ್ವಿಕ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ವಿದ್ಯಾರ್ಥಿಗಳು ತರಗತಿಗಳಲ್ಲಿ ಪಠ್ಯವಿಚಾರ ವಿನಿಮಯ ಮಾಡಿಕೊಳ್ಳುವುದರಿಂದ ಉತ್ತಮ ಅಂಕಗಳಿಕೆ ಸಾಧ್ಯ. ಈ ರೀತಿಯಲ್ಲಿ ತಾನು ಅಭ್ಯಾಸ ಮಾಡಿದ್ದರಿಂದ ಜಿಲ್ಲೆಗೆ ಮೊದಲ ಸ್ಥಾನ ಪಡೆಯುವಂತಾಯಿತು ಎಂದು 2024 25 ನೇ ಸಾಲಿನ ಹತ್ತನೇ ತರಗತಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಅತಿ ಹೆಚ್ಚು ಅಂಕ ಪಡೆದ ಸೋಮವಾರಪೇಟೆ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಜೆ ಎಸ್ ಪೂರ್ವಿಕ ನುಡಿದರು.

ಕನ್ನಡಪ್ರಭವಾರ್ತೆ ನಾಪೋಕ್ಲು

ವಿದ್ಯಾರ್ಥಿಗಳು ತರಗತಿಗಳಲ್ಲಿ ಪಠ್ಯವಿಚಾರ ವಿನಿಮಯ ಮಾಡಿಕೊಳ್ಳುವುದರಿಂದ ಉತ್ತಮ ಅಂಕಗಳಿಕೆ ಸಾಧ್ಯ. ಈ ರೀತಿಯಲ್ಲಿ ತಾನು ಅಭ್ಯಾಸ ಮಾಡಿದ್ದರಿಂದ ಜಿಲ್ಲೆಗೆ ಮೊದಲ ಸ್ಥಾನ ಪಡೆಯುವಂತಾಯಿತು ಎಂದು 2024 25 ನೇ ಸಾಲಿನ ಹತ್ತನೇ ತರಗತಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಅತಿ ಹೆಚ್ಚು ಅಂಕ ಪಡೆದ ಸೋಮವಾರಪೇಟೆ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಜೆ ಎಸ್ ಪೂರ್ವಿಕ ನುಡಿದರು.

ಅವರು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ನಾಪೋಕ್ಲು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕೆ.ಪಿ.ಎಸ್ ಪ್ರೌಢಶಾಲೆ ನಾಪೋಕ್ಲು ಇವರ ಸಂಯುಕ್ತ ಆಶ್ರಯದಲ್ಲಿ ಕೆ.ಪಿ.ಎಸ್ ಪ್ರೌಢಶಾಲೆಯಲ್ಲಿ ನಡೆದ ದಿ. ಸೂದನ ರಾಘವಯ್ಯ ಮತ್ತು ಬಿ.ಆರ್ ಸಾಯಿನಾಥ್ ಅವರ ದತ್ತಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ ಕೇಶವ ಕಾಮತ್, ತಾಲೂಕು ಅಧ್ಯಕ್ಷ ಕಡ್ಲೇರ ತುಳಸಿ ಮೋಹನ್, ಜಿಲ್ಲಾ ಗೌರವ ಕಾರ್ಯದರ್ಶಿ ಎಸ್.ಐ ಮುನೀರ್ ಅಹ್ಮದ್, ಕೂಡ ಕಂಡಿ ಸೋನಿ ಸುದೀಪ್ ನಾಪೋಕ್ಲು ಕೆ.ಪಿ.ಎಸ್. ಶಾಲೆಯ ಉಪ ಪ್ರಾಂಶುಪಾಲ ಎಂ ಎಸ್ ಶಿವಣ್ಣ ನಾಪೋಕ್ಲು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನೆರವಂಡ ಉಮೇಶ್, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧಿಕಾರಿ ಎಸ್ ಎಸ್ ಸಂಪತ್ ಕುಮಾರ್, ನಾಪೋಕ್ಲು ಕೆ.ಪಿ.ಎಇ ಶಾಲೆಯ ಮಕ್ಕಳ ರಕ್ಷಣಾ ಸಮಿತಿ ಅಧ್ಯಕ್ಷ ಕೇಟೋಳಿರ ರಾಜ ಗಣಪತಿ, ಸಾಹಿತ್ಯ ಪರಿಷತ್ತಿನ ಸದಸ್ಯ ಶಾಂತಿ ಅರ್ಜುನ್, ಸನ್ಮಾನಿತ ವಿದ್ಯಾರ್ಥಿಯ ಪೋಷಕರಾದ ಸುರೇಶ್, ಲೀಲಾ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಮಾಜದ ಸ್ವಾಸ್ಥ್ಯ ಕಾಪಾಡಿದ ಮಠಗಳು
ಸರ್ಕಾರ, ಅಧಿಕಾರಿಗಳ ಧೋರಣೆಯಿಂದ ಕನ್ನಡ ಶಾಲೆ ಅವನತಿ: ಉಮಾನಾಥ ಕೋಟ್ಯಾನ್‌