ಅಕ್ಷರ ಅವಿಷ್ಕಾರದಡಿ ಶೈಕ್ಷಣಿಕ ಅಭಿವೃದ್ಧಿ: ಶಾಸಕಿ ಎಂ.ಪಿ. ಲತಾ

KannadaprabhaNewsNetwork |  
Published : Sep 18, 2024, 01:58 AM IST
ಹರಪನಹಳ್ಳಿಯ ಪುರಸಭೆಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ  ಶಾಸಕಿ ಎಂ.ಪಿಯ.ಲತಾ ಅವರು ವಿಕಲ ಚೇತನರಿಗೆ ತ್ರಿಚಕ್ರವಾಹನ ಗಳನ್ನು ವಿತರಿಸಿದರು. ಎಂ.ವಿ.ಅಂಜಿನಪ್ಪ,  ಎಸಿ ಚಿದಾನಂದ ಗುರುಸ್ವಾಮಿ, ಎರಗುಡಿ ಶಿವಕುಮಾರ ಇದ್ದರು. | Kannada Prabha

ಸಾರಾಂಶ

ಅಕ್ಷರ ಅವಿಷ್ಕಾರ ಎಂಬ ಯೋಜನೆಯಡಿ ಸಾಕಷ್ಟು ಅನುದಾನ ಬರುತ್ತಲಿದ್ದು, ಅದರಲ್ಲಿ ಕಳೆದ ಬಾರಿ 50 ಶಾಲೆಗಳು, ಈ ಬಾರಿ 50 ಶಾಲೆಗಳ ಅಭಿವೃದ್ಧಿಗೆ ಕ್ರಮ ಕೈಗೊಂಡಿದ್ದೇವೆ ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಹೇಳಿದರು.

ಹರಪನಹಳ್ಳಿ: ತಾಲೂಕಿನಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ರೂಪಿಸಿರುವ ಅಕ್ಷರ ಅವಿಷ್ಕಾರದಡಿ ಸಾಕಷ್ಟು ಶೈಕ್ಷಣಿಕ ಅಭಿವೃದ್ಧಿ ಆಗುತ್ತಲಿದೆ ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಹೇಳಿದರು.ಪಟ್ಟಣದ ಪುರಸಭಾ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಕ್ಷರ ಅವಿಷ್ಕಾರ ಎಂಬ ಯೋಜನೆಯಡಿ ಸಾಕಷ್ಟು ಅನುದಾನ ಬರುತ್ತಲಿದ್ದು, ಅದರಲ್ಲಿ ಕಳೆದ ಬಾರಿ 50 ಶಾಲೆಗಳು, ಈ ಬಾರಿ 50 ಶಾಲೆಗಳ ಅಭಿವೃದ್ಧಿಗೆ ಕ್ರಮ ಕೈಗೊಂಡಿದ್ದೇವೆ. ಇವುಗಳಲ್ಲದೆ ನರೇಗಾದಡಿ ಸಹ ಶಾಲೆಗಳಿಗೆ ಮೂಲ ಸೌಕರ್ಯ ಒದಗಿಸಿದ್ದೇವೆ ಎಂದು ಹೇಳಿದರು.

ಪುರಸಭಾ ಹಿರಿಯ ಸದಸ್ಯ ಎಂ.ವಿ. ಅಂಜಿನಪ್ಪ ಮಾತನಾಡಿ, 1997ರಲ್ಲಿ ಹರಪನಹಳ್ಳಿ ತಾಲೂಕು ಬಳ್ಳಾರಿ ಜಿಲ್ಲೆಯಿಂದ ದಾವಣಗೆರೆ ಜಿಲ್ಲೆಗೆ ಸೇರಿದಾಗ ಕಲ್ಯಾಣ ಕರ್ನಾಟಕದಿಂದ ಕೈ ಬಿಟ್ಟು ಹೋಗಿತ್ತು. ನಂತರ ಈಚೆಗೆ ದಿ. ಎಂ.ಪಿ.ರವೀಂದ್ರ ಶಾಸಕರಾಗಿ ಶ್ರಮ ವಹಿಸಿ ಹರಪನಹಳ್ಳಿ ತಾಲೂಕನ್ನು ಪುನಃ ಬಳ್ಳಾರಿ ಜಿಲ್ಲೆಗೆ ಸೇರಿಸುವುದರ ಮೂಲಕ ಹರಪನಹಳ್ಳಿಗೆ 371 ಜೆ ಸೌಲಭ್ಯ ಸಿಗುವಂತಾಯಿತು ಎಂದು ಸ್ಮರಿಸಿದರು. ಇಂದು ಕೆಕೆಆರ್‌ ಡಿ ಬಿ ಯಿಂದ ನೂರಾರು ಕೋಟಿ ಅನುದಾನ ಬರುತ್ತಲಿದೆ. ಇದರಿಂದ ಹಿಂದುಳಿದ ಹರಪನಹಳ್ಳಿ ತಾಲೂಕು ಅಭಿವೃದ್ಧಿ ಪಥದಲ್ಲಿ ಸಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿಕಲಚೇತನರಿಗೆ ತ್ರಿಚಕ್ರವಾಹನ, ವಿವಿಧ ಕ್ಷೇತ್ರದಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸಹಾಯಧನದ ಚೆಕ್‌ಗಳನ್ನು ಶಾಸಕರು ವಿತರಿಸಿದರು.

ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ, ಪುರಸಭಾ ಮುಖ್ಯಾಧಿಕಾರಿ ಎರಗುಡಿ ಶಿವಕುಮಾರ, ಪುರಸಭಾ ಸದಸ್ಯರಾದ ಅಬ್ದುಲ್‌ ರಹಿಮಾನ್, ಮಂಜುನಾಥ ಇಜಂತಕರ, ಭರತೇಶ, ವೆಂಕಟೇಶ, ಭೀಮವ್ವ, ಹನುಮವ್ವ ಮುಖಂಡರಾದ ವಾಗೀಶ, ಚಿಕ್ಕೇರಿ ಬಸಪ್ಪ, ಗುಂಡಗತ್ತಿ ಕೊಟ್ರಪ್ಪ, ಉಪಸ್ಥಿತರಿದ್ದರು.ವಿವಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ

ಬಳ್ಳಾರಿ: ಇಲ್ಲಿನ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ “ಕಲ್ಯಾಣ ಕರ್ನಾಟಕ ಉತ್ಸವ 2024 " ಹಮ್ಮಿಕೊಳ್ಳಲಾಗಿತ್ತು.ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ವಿಶ್ವವಿದ್ಯಾಲಯದ ಕುಲಸಚಿವ ಎಸ್.ಎನ್. ರುದ್ರೇಶ್, ವಿಶಿಷ್ಟವಾದ ಸಾಂಸ್ಕೃತಿಕ ನೆಲೆಗಟ್ಟುಗಳನ್ನು ನೀಡಿದ ಮಹಾನ್ ವ್ಯಕ್ತಿಗಳ ನಾಡು ನಮ್ಮದು. ಕಲಬರುಗಿ ಸೇರಿದಂತೆ ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲಾಗುತ್ತಿದ್ದು, ಎಲ್ಲರೂ ಜಾತಿ, ಧರ್ಮ ಮೀರಿ ಒಗ್ಗಟ್ಟಾಗಿ ಶ್ರಮಿಸಿದಾಗ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.ಅತಿಥಿಯಾಗಿ ಭಾಗವಹಿಸಿದ್ದ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಸದಸ್ಯ ಡಾ. ರಾಜೇಂದ್ರ ಪ್ರಸಾದ್ ಮಾತನಾಡಿದರು. ರಾಷ್ಟ್ರಧ್ವಜಾರೋಹಣ ನೆರವೇರಿಸಿ ಪ್ರೊ. ಶಾಂತನಾಯ್ಕ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ವಿವಿಯ ಕುಲಪತಿ ಪ್ರೊ. ಎಂ. ಮುನಿರಾಜು ಅವರು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಅಷ್ಟೇಅಲ್ಲ; ಪ್ರತಿಯೊಬ್ಬರೂ ಭಾಗಿಯಾಗಬೇಕು ಎಂದರು.

ಕಾರ್ಯಕ್ರಮದ ಸಂಯೋಜಕ ಡಾ. ಎಚ್. ತಿಪ್ಪೇಸ್ವಾಮಿ ಪ್ರಾಸ್ತಾವಿಕ ಮಾತನಾಡಿದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಮೋಹನದಾಸ್, ಡಾ. ಶಶಿಧರ್ ಕೆಲ್ಲೂರ್ ಹಾಗೂ ಡಾ. ಸಂತೋಷ ಕಾರ್ಯಕ್ರಮ ನಿರ್ವಹಿಸಿದರು. ವಿವಿಧ ನಿಕಾಯದ ಡೀನರು, ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

PREV

Recommended Stories

ಹಿಂದೂ ಮಹಾಗಣಪತಿ ಮೂರ್ತಿಯ ವಿಸರ್ಜನೆ
ಪ್ಲಾನಿಂಗ್‌ ಆ್ಯಂಡ್ ಆರ್ಕಿಟೆಕ್ಚರ್‌ ಸ್ಕೂಲ್‌ ಆರಂಭಕ್ಕೆ ಸಿದ್ಧತೆ: ಡಿಕೆಶಿ