ಕನ್ನಡಪ್ರಭ ವಾರ್ತೆ ಮೈಸೂರು
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನ ಕೇಂದ್ರವು ಸಮಾಜಬಕಲ್ಯಾಣ ಇಲಾಖೆಯ ಡಾ.ಬಿ.ಆರ್. ಅಂಬೇಡ್ಕರ್ ತರಬೇತಿ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರದ ಸಹಯೋಗದಲ್ಲಿ ಮುಕ್ತ ಗಂಗೋತ್ರಿಯ ಕಾವೇರಿ ಸಭಾಂಗಣದಲ್ಲಿ ಆಯೋಜಿಸಿರುವ ‘ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಸಮಕಾಲೀನ ಭಾರತ: ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ ಮತ್ತು ಒಳಗೊಳ್ಳುವ ಅಭಿವೃದ್ಧಿಯ ಮರುಚಿಂತನೆ ಕುರಿತ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.
ಬಾಬಾ ಸಾಹೇಬರು ಸಂವಿಧಾನದಲ್ಲಿ ನೀಡಿರುವ ಕಾನೂನುಗಳು ಮತ್ತು ಮಾನವ ಹಕ್ಕುಗಳೂ ಕೂಡ ಪ್ರಮುಖವಾಗಿದ್ದು, ಅವುಗಳನ್ನೂ ಪರಿಣಾಮಕಾರಿಯಾಗಿ ಜಾರಿಗೆ ಬರುವಂತೆ ನೀಡಿಕೊಳ್ಳಬೇಕು. ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಸ್ಪಷ್ಟ ದಾರಿ ತೋರಿಸಿದ್ದಾರೆ. ನಾವು ಮುನ್ನಡೆಯಬೇಕಷ್ಟೆ ಎಂದರು.ಸಂವಿಧಾನದಲ್ಲಿ ಮೂಲಭೂತ ಹಕ್ಕು, ಕರ್ತವ್ಯ ಮತ್ತು ಪ್ರಜಾಪ್ರಭುತ್ವ ಎಲ್ಲವೂ ಅಡಗಿದೆ. ಸಂವಿಧಾನವು ಹೃದಯ ಇದ್ದಂತೆ. ಅದರ ಪ್ರಸ್ತಾವನೆಯು ಮಾರ್ಗದರ್ಶಕವಾಗಿದೆ. ನಾವು ಈಗ ಕೇಳುತ್ತಿರುವ ಎಲ್ಲಾ ಸಮಸ್ಯೆಗಳಿಗೂ ಸಂವಿಧಾನದಲ್ಲಿಯೇ ಪರಿಹಾರವಿದೆ. ಜಾತಿ ಪದ್ಧತಿ, ಪ್ರಜಾಪ್ರಭುತ್ವ, ಚುನಾವಣಾ ವ್ಯವಸ್ಥೆ, ಜೀತ ಪದ್ಧತಿ, ಮೀಸಲಾತಿ ಎಲ್ಲವೂ ಅದರಲ್ಲಿ ಅಡಕವಾಗಿದೆ. ಅಂತಹ ಶ್ರೇಷ್ಠ ಸಂವಿಧಾನವನ್ನು ನಮಗೆ ನೀಡಿರುವುದಾಗಿ ಅವರು ಹೇಳಿದರು.
ಬ್ಯಾಂಕ್ ನಲ್ಲಿ ಖಾತೆ ಆರಂಭಿಸಿದಾಕ್ಷಣ ಬದಲಾವಣೆ ಆಗುವುದಿಲ್ಲ. ಏಕೆಂದರೆ ಫಲಾನುಭವಿಗಳು ಆರ್ಥಿಕವಾಗಿ ಸದೃಢರಾಗಬೇಕು. ಅಭಿವೃದ್ಧಿ ಎಂಬುದು ಹೇಗೆ ಆಗಬೇಕು ಎಂಬ ಕುರಿತು ಸರಿಯಾದ ಧಿಕ್ಕಿನಲ್ಲಿ ಚರ್ಚೆ ಆಗಬೇಕು ಎಂದರು.