ಮಳೆ ಕೊಯ್ಲು ಪದ್ಧತಿ ಪರಿಣಾಮಕಾರಿ ಅನುಷ್ಠಾನಕ್ಕೆ ಆದ್ಯತೆ

KannadaprabhaNewsNetwork |  
Published : Dec 24, 2023, 01:45 AM IST
ದೊಡ್ಡಬಳ್ಳಾಪುರದ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣೆ ವೇದಿಕೆಯಿಂದ ಸಚಿವ ಕೆ.ಎಚ್.ಮುನಿಯಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಜನರ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಜಾನುವಾರುಗಳಿಗಾಗಿ ಕುಡಿಯುವ ನೀರಿಗಾಗಿ ಮಳೆ ನೀರು ಕೊಯ್ಲು ಪದ್ಧತಿ ಅಳವಡಿಸಿಕೊಡಿಸಿ ಕೊಡುವಂತೆ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರಿಗೆ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣೆ ವೇದಿಕೆಯ ಮುಖಂಡರು ಮನವಿ ಸಲ್ಲಿಸಿದರು.

ದೊಡ್ಡಬಳ್ಳಾಪುರ: ಜನರ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಜಾನುವಾರುಗಳಿಗಾಗಿ ಕುಡಿಯುವ ನೀರಿಗಾಗಿ ಮಳೆ ನೀರು ಕೊಯ್ಲು ಪದ್ಧತಿ ಅಳವಡಿಸಿಕೊಡಿಸಿ ಕೊಡುವಂತೆ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರಿಗೆ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣೆ ವೇದಿಕೆಯ ಮುಖಂಡರು ಮನವಿ ಸಲ್ಲಿಸಿದರು.

ತಾಲೂಕಿನ ದೊಡ್ಡತುಮಕೂರು ಮತ್ತು ಮಜರಾ ಹೊಸಹಳ್ಳಿ ಗ್ರಾಮ ಪಂಚಾಯಿತಿಗಳ ಕೊಳವೆ ಬಾವಿ, ಕೆರೆ ಸೇರಿದಂತೆ ಶುದ್ಧ ಕುಡಿಯುವ ಘಟಕದ ನೀರು ಸಹ ಕಲುಷಿತಗೊಂಡಿದ್ದು ಪರ್ಯಾಯ ನೀರಿನ ವ್ಯವಸ್ಥೆಗಾಗಿ ಮಳೆ ನೀರು ಕೊಯ್ಲು ಪದ್ಧತಿ ಅಳವಡಿಸಿಕೊಡಿಸಿ ಕೊಡಿ ಎಂದು ಮನವಿ ಮಾಡಿದರು.

ಈ ವೇಳೆ ಮಾತನಾಡಿದ ವೇದಿಕೆಯ ಮುಖಂಡ ವಸಂತ್ ಕುಮಾರ್,2021ರ ಕೊಳವೆ ಬಾವಿಗಳ ನೀರಿನ ಪರೀಕ್ಷಾ ವರದಿಯಲ್ಲಿ 18 ಕೊಳವೆ ಬಾವಿಗಳಲ್ಲಿ 07 ಕೊಳವೆ ಬಾವಿಗಳು ಹಾಗೂ 2023ನೇ ಇಸವಿಯಲ್ಲಿ 18 ಕೊಳವೆ ಬಾವಿಗಳಲ್ಲಿ 17 ಕೊಳವೆ ಬಾವಿಗಳಲ್ಲಿನ ನೀರು ಕುಡಿಯಲು ಯೋಗ್ಯವಾಗಿಲ್ಲ ಎಂಬ ವರದಿ ಬಂದಿದೆ. ಇಂದು ಕುಡಿಯಲು ಜಕ್ಕಲಮಡಗು ನೀರನ್ನು ಕೊಡುತ್ತಿದ್ದಾರೆ ಎಂದು ವಿವರಿಸಿದರು.

ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ ಯೋಜನೆಯಡಿ ಕಲುಷಿತಗೊಂಡಿರುವ ನೀರನ್ನು ನಮಗೆ ಮತ್ತು ದನಕರುಗಳಿಗೆ ಉಪಯೋಗಿಸಲು ಕೊಡುತ್ತಿದೆ, ಜಲ ಜೀವನ್ ಯೋಜನೆಯು ಶುದ್ಧ ಕುಡಿಯುವ ನೀರು ಕೊಡಬೇಕೆಂದು ಹೇಳುತ್ತದೆ. ಆದರೆ ಪ್ರತಿ ಮನೆಗೆ ಜೀವಜಲ ಎಂಬ ಯೋಜನೆ ನಮ್ಮ ಗ್ರಾಮಗಳ ಪಾಲಿಗೆ ಜೀವ ಹಿಂಡುವಂತೆ ಮಾಡುತ್ತಿದೆ. ಈ ಹಿಂದೆ ಅಧಿಕಾರಿಗಳ ತಂಡ ಪಕ್ಕದ ಪಂಚಾಯಿತಿಯ ನರಸಯ್ಯನ ಅಗ್ರಹಾರದಿಂದ ನೀರು ತಂದು ಕೊಡುತ್ತೇವೆ ಎಂದು ಕೆರೆ ಹೋರಾಟಗಾರರಿಗೆ ಭರವಸೆ ನೀಡಿದ್ದರು. ಆದರೆ ನರಸಯ್ಯನ ಅಗ್ರಹಾರದಿಂದ ನೀರು ತರಲು ಯಾವುದೇ ಕ್ರಮ ತೆಗೆದುಕೊಳ್ಳದೇ ಕಲುಷಿತಗೊಂಡಿರುವ ನೀರನ್ನು ಕೊಡುತ್ತಿದ್ದಾರೆ ಎಂದು ಆರೋಪಿಸಿದರು.

ನಮ್ಮ ಪಂಚಾಯಿತಿಗಳ ಅಂತರ್ಜಲವು ಅಧಿಕ ಲೋಹಗಳಾದ ಸೀಸ, ಲೇಟ್, ಕ್ರೋಮಿಯಂ ಸೇರಿದಂತೆ ಅನೇಕ ವಿಷಯುಕ್ತ ರಾಸಾಯನಿಕಗಳು ಇರುವುದು ಕಂಡು ಬಂದಿದೆ. ಜನಗಳ ಆರೋಗ್ಯ ದೃಷ್ಟಿಯಿಂದ ಜಾನುವಾರು, ಪ್ರಾಣಿ, ಪಕ್ಷಿ, ಜೀವ ಸಂಕುಲಗಳ ಉಳಿವಿಗಾಗಿ ಎರಡೂ ಗ್ರಾಮ ಪಂಚಾಯತಿಯ ಪ್ರತಿಯೊಂದು ಮನೆಗೂ ಕುಡಿಯುವ ನೀರಿನ "ಮಳೆ ನೀರು ಕೊಯ್ಲು ಪದ್ಧತಿ ಅಳವಡಿಸಿಕೊಡುವ ಮೂಲಕ ಶುದ್ಧ ಕುಡಿಯುವ ನೀರನ್ನು ಕೊಡಬೇಕೆಂದು ಮನವಿ ಮಾಡಿದರು.

ಮನವಿ ಸ್ವೀಕರಿಸಿದ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಅಧಿಕಾರಿಗಳ ಜೊತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ದೊಡ್ಡತುಮಕೂರು ಮುಖಂಡ ರಾಮಕೃಷ್ಣ ಸೇರಿದಂತೆ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣೆ ವೇದಿಕೆಯ ಮುಖಂಡರು ಉಪಸ್ಥಿತರಿದ್ದರು.23ಕೆಡಿಬಿಪಿ1- ದೊಡ್ಡಬಳ್ಳಾಪುರದ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣೆ ವೇದಿಕೆಯಿಂದ ಸಚಿವ ಕೆ.ಎಚ್.ಮುನಿಯಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು : ನಗರದ ವಿವಿಧೆಡೆ ನಾಳೆ ವಿದ್ಯುತ್ ವ್ಯತ್ಯಯ-ಎಲ್ಲೆಲ್ಲಿ ?
ಸಾಮಾಜಿಕ ಜಾಲತಾಣ ಮೇಲೆ ಕಣ್ಣಿಡಲು ಸರ್ಕಾರಿ ಸಾಫ್ಟ್‌ವೇರ್‌