ಕೇಂದ್ರದಿಂದ ಯೋಜನೆಗಳ ಪರಿಣಾಮಕಾರಿ ಜಾರಿ: ಬಂಗಾರು ಹನುಮಂತು

KannadaprabhaNewsNetwork |  
Published : Mar 07, 2024, 01:47 AM IST
ಕೂಡ್ಲಿಗಿ ಪಟ್ಟಣದಲ್ಲಿ ಬಿಜೆಪಿ ಯುವಮೋರ್ಚಾವತಿಯಿಂದ  ಸೋಮವಾರ ಆಯೋಜಿಸಿದ್ದ  ನಾರಿಶಕ್ತಿ ವಂದನಾ ನಡಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ರಾಜ್ಯ ಎಸ್.ಟಿ.ಮೋರ್ಚಾ ಅಧ್ಯಕ್ಷ ಬಂಗಾರು ಹನುಮಂತು ಮಾತನಾಡಿದರು. ಈ ಸಂದರ್ಭದಲ್ಲಿ ಕೂಡ್ಲಿಗಿ ಮಂಡಲ ಬಿಜೆಪಿ ಅಧ್ಯಕ್ಷ ಬಣವಿಕಲ್ಲು ರಾಜು ಸೇರಿದಂತೆ ಹಲವು ಬಿಜೆಪಿ ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು. | Kannada Prabha

ಸಾರಾಂಶ

ಮೋದಿ ರೈತರ ಖಾತೆಗೆ ಎರಡು ಸಾವಿರ ಹಣ ಜಮಾ ಮಾಡುತ್ತಿರುವುದರಿಂದ ದೇಶದ ರೈತವರ್ಗ ನೆಮ್ಮದಿಯಾಗಿ ಜೀವನ ನಡೆಸಲು ಸಾಧ್ಯವಾಗಿದೆ.

ಕೂಡ್ಲಿಗಿ: ಮೋದಿಯವರ ದೂರದೃಷ್ಟಿಯಿಂದ ಮಹಿಳೆಯರು ಉಜ್ವಲ ಯೋಜನೆ ಸೇರಿದಂತೆ ಹಲವು ಯೋಜನೆಗಳನ್ನು ಮನೆ ಮನೆಗೆ ತಲುಪಿಸಿದ್ದು, ಈ ಯೋಜನೆಗಳನ್ನು ಕಾರ್ಯಕರ್ತರು ಮನೆ ಮನೆಗೆ ತಲುಪಿಸುವ ಕಾರ್ಯ ಮಾಡಲಿದ್ದಾರೆ ಎಂದು ರಾಜ್ಯ ಎಸ್‌ಟಿ ಮೋರ್ಚಾ ಅಧ್ಯಕ್ಷ ಬಂಗಾರು ಹನುಮಂತು ತಿಳಿಸಿದರು.

ಸೋಮವಾರ ಕೂಡ್ಲಿಗಿ ಮಂಡಲ ಬಿಜೆಪಿ ಯುವಮೋರ್ಚಾ ವತಿಯಿಂದ ಆಯೋಜಿಸಿದ್ದ ನಾರಿಶಕ್ತಿ ವಂದನಾ ನಡಿಗೆ ಕಾರ್ಯಕ್ರಮದಲ್ಲಿ ಮಾತನಾಡಿ, ಮೋದಿ ರೈತರ ಖಾತೆಗೆ ಎರಡು ಸಾವಿರ ಹಣ ಜಮಾ ಮಾಡುತ್ತಿರುವುದರಿಂದ ದೇಶದ ರೈತವರ್ಗ ನೆಮ್ಮದಿಯಾಗಿ ಜೀವನ ನಡೆಸಲು ಸಾಧ್ಯವಾಗಿದೆ. ಇಂತಹ ಹತ್ತಾರು ಮಹತ್ವಾಕಾಂಕ್ಷಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿ ತಂದಿದ್ದಾರೆ ಎಂದರು.ಇದೇ ಸಂದರ್ಭದಲ್ಲಿ ತ್ರಿವರ್ಣಧ್ವಜ ಬೈಕ್ ರ್‍ಯಾಲಿಯನ್ನು ಮಾಡಲಾಯಿತು. ಕೂಡ್ಲಿಗಿ ಮಂಡಲ ಬಿಜೆಪಿ ಅಧ್ಯಕ್ಷ ಬಣವಿಕಲ್ಲು ರಾಜು, ಜಿಪಂ ಮಾಜಿ ಅಧ್ಯಕ್ಷೆ ದೀನಾ ಮಂಜುನಾಥ, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಎಚ್.ಎಂ. ಸಚಿನ್ ಕುಮಾರ್, ಮಹಿಳಾ ಮೋರ್ಚಾ ಅಧ್ಯಕ್ಷ ಶಾರದಾ ಕುಂಬಾರ್, ಜಿಲ್ಲಾ ಉಪಾಧ್ಯಕ್ಷೆ ಲಕ್ಷ್ಮಿಕಾಂತರಾಜ್, ಮಂಡಲ ಕಾರ್ಯದರ್ಶಿ ಎಲ್. ಪವಿತ್ರಾ, ಯುವ ಮೋರ್ಚಾ ಅಧ್ಯಕ್ಷ ಅಜೇಯ್, ಎಸ್‌ಟಿ ಮೋರ್ಚಾ ಅಧ್ಯಕ್ಷ ಗುರಿಕಾರ್ ರಾಘು, ಎಸ್ಸಿ ಮೋರ್ಚಾ ಅಧ್ಯಕ್ಷ ರಾಮಚಂದ್ರ, ಮಂಗಾಪುರ ಸಿದ್ದೇಶ್, ಜಿಲ್ಲಾ ಎಸ್ಟಿ ಮೋರ್ಚಾ ಕಾರ್ಯದರ್ಶಿ ಸೂಲದಹಳ್ಳಿ ಮಾರೇಶ್ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೇವೇಗೌಡರು ನಮ್ಮ ಪಕ್ಷದಲ್ಲಿದ್ದರು - ಹುಷಾರು ಅಶೋಕ್, ನೀನೇ ಸತ್ತು ಹೋಗ್ತೀಯ : ಸಿಎಂ
ವಸುಂಧರಾ ಭೂಪತಿ ಸೇರಿ ಐವರಿಗೆ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ