ಕನ್ನಡಪ್ರಭ ವಾರ್ತೆ ಮಳವಳ್ಳಿ
ತಾಲೂಕಿನ ಕಂದೇಗಾಲ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಮತ್ತು ಲಿಂಗ ಸಂವೇದನೆ ಕುರಿತ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.
ಭ್ರೂಣ ಹತ್ಯೆ ಮತ್ತು ಹೆಣ್ಣು ಮಕ್ಕಳ ಮೇಲಿನ ತಾರತಮ್ಯದಿಂದಾಗಿ ದೇಶದಲ್ಲಿ ಲಿಂಗಾನುಪಾತದಲ್ಲಿ ಅಸಮತೋಲನ ಉಂಟಾಗಿದೆ. ಇದರಿಂದ ಮುಂದೆ ಅನೇಕ ಸಾಮಾಜಿಕ ಸಮಸ್ಯೆಗಳು ಎದುರಾಗಲಿವೆ. ಹೀಗಾಗಿ ಹೆಣ್ಣು ಮಗುವನ್ನು ಉಳಿಸಿ, ಬೆಳೆಸಿ, ಶಿಕ್ಷಣ ನೀಡುವುದು ಇಂದಿನ ಅಗತ್ಯವಾಗಿದೆ ಎಂದರು.ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯ ಮುಖ್ಯ ಉದ್ದೇಶವೆಂದರೆ ಲಿಂಗ ತಾರತಮ್ಯವನ್ನು ತೊಡೆದು ಹಾಕುವುದು, ಹೆಣ್ಣು ಮಕ್ಕಳ ಜನನ ಮತ್ತು ಶಿಕ್ಷಣವನ್ನು ಉತ್ತೇಜಿಸುವುದು ಮತ್ತು ಅವರಿಗೆ ಸುರಕ್ಷಿತ ವಾತಾವರಣ ಒದಗಿಸುವುದು. ಈ ಯೋಜನೆ ಯಶಸ್ವಿಯಾಗಲು ಸಮಾಜದ ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದರು.
ಪುರುಷ, ಮಹಿಳೆ ಮತ್ತು ಇತರೆ ಲಿಂಗಗಳ ಬಗ್ಗೆ ಇರುವ ರೂಢಿಗತ ನಂಬಿಕೆ ಬದಲಾಯಿಸಬೇಕು. ಮಕ್ಕಳಿಗೆ ಬಾಲ್ಯದಿಂದಲೇ ಲಿಂಗ ಸಮಾನತೆಯ ಬಗ್ಗೆ ಪಾಠ ಮಾಡಬೇಕು. ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟುವುದು ಮತ್ತು ಅವರ ಹಕ್ಕುಗಳ ಬಗ್ಗೆ ಅರಿವು ಮೂಡಿಸುವುದು ಶಿಕ್ಷಕರು ಹಾಗೂ ಪೋಷಕರ ಕರ್ತವ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ಎಚ್.ಬಿ.ರಾಜು, ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕೊನೆಯಲ್ಲಿ ‘ಬೇಟಿ ಬಚಾವೋ’ ಪ್ರತಿಜ್ಞಾ ವಿಧಿಯನ್ನು ಎಲ್ಲರೂ ಬೋಧಿಸಿದರು.