ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ನಗರದ ಎಸ್ಜೆಎಂ ಔಷಧ ಮಹಾವಿದ್ಯಾಲಯದಲ್ಲಿ ನಡೆದ ಐ-ಕ್ಲಾಪ್ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿ ಅವರು, ಹಿಂದಿನ ಕಾಲದಲ್ಲಿ ಹಿರಿಯರು ಅಡುಗೆ ಮನೆಯನ್ನೆ ಔಷಧಾಲಯವನ್ನಾಗಿ ಮಾಡಿಕೊಂಡಿದ್ದರು. ಯಾವುದೇ ತೊಂದರೆಗೆ ಮನೆ ಮದ್ದನ್ನೇ ಅವಲಂಬಿಸಿದ್ದರು. ಮುರುಘಾ ಪರಂಪರೆಯ ಸ್ವಾಮಿಗಳು ಮೈಸೂರು ರಾಣಿಗೆ ಅನಾರೋಗ್ಯದ ಸ್ಥಿತಿಯಲ್ಲಿ ಯಾರು ಗುಣಪಡಿಸದ ಕಾಯಿಲೆಯನ್ನು ಔಷಧೋಪಚಾರ ಮಾಡಿ ನಿವಾರಿಸಿದ್ದರೆಂದರು.
ಚಿತ್ರದುರ್ಗ ಮೆಡಿಕಲ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ.ಯುವರಾಜ್ ಮಾತನಾಡಿ, ಮುಂಬರುವ ದಿನಗಳಲ್ಲಿ ನ್ಯಾನೋ ಪ್ಲಾಸ್ಟಿಕ್ ಮತ್ತು ಮಾದಕ ದ್ರವ್ಯಗಳು ಜನರನ್ನು ಅನಾರೋಗ್ಯದ ಕಡೆಗೆ ಒಯ್ಯುತ್ತವೆ. ಯುವಕರು ಏಕಾಂತದಲ್ಲಿ ಮೊಬೈಲ್ನಲ್ಲಿ ಸಮಯ ಕಳೆಯುವುದನ್ನು ನಿಲ್ಲಿಸಿ ಕ್ರೀಡೆ ಹಾಗೂ ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕೆಂದು ಸಲಹೆ ಮಾಡಿದರು.ಎಸ್ಜೆಎಂ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಬಿ.ಗುಡಸಿ ಮಾತನಾಡಿ, ಹಿಂದಿನ ಕಾಲದಲ್ಲಿ ಔಷಧೀಯ ಸಂಶೋಧನೆಗೆ ವರ್ಷಗಳೇ ಕಳೆಯುತ್ತಿದ್ದವು. ಈಗ ಎಐ ತಂತ್ರಜ್ಞಾನ ಬಂದು ಕೆಲವೇ ದಿನಗಳಲ್ಲಿ ಔಷಧಿಯನ್ನು ಕಂಡುಹಿಡಿಯಲಾಗುತ್ತಿದೆ. ಇಂತಹ ಹೊಸ ವಿಚಾರಗಳ ವಿನಿಮಯ ಸಂಕಿರಣದಲ್ಲಿ ವಿದ್ಯಾರ್ಥಿಗಳಿಗೆ ಆಗಲಿದೆ. ಅದರ ಉಪಯೋಗ ಪಡೆದುಕೊಳ್ಳದಿದ್ದರೆ ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಕಷ್ಟ ಇದೆ. ಔಷಧಿ ಬಳಕೆ ವ್ಯಕ್ತಿಯಿಂದ ವ್ಯಕ್ತಿಗೆ ಪ್ರಮಾಣ ಹೆಚ್ಚು ಕಡಿಮೆ ಇರುತ್ತದೆ. ಈ ಬಗ್ಗೆ ಜಾಗೃತಿ ಮೂಡಿಸುವುದು ಮುಖ್ಯ ಎಂದರು.
ಎಸ್ಜೆಎಂ ವಿಶ್ವವಿದ್ಯಾಲಯದ ಕುಲಸಚಿವ ಡಾ.ಗಣಾಚಾರಿ ಮಾತನಾಡಿ, ವಿದ್ಯಾರ್ಥಿಗಳಿಗೆ ಶಿಕ್ಷಣ ಮುಗಿಸಿದ ನಂತರ ಮುಂದೆ ಏನು ಎಂಬ ಚಿಂತೆ ಬಹಳ ಕಾಡುತ್ತದೆ. ಅದಕ್ಕಾಗಿ ಅವರು ಕೌಶಲ್ಯತೆಯನ್ನು ತಂತ್ರಜ್ಞಾನದೊಂದಿಗೆ ಹೊಂದಿಸಿಕೊಂಡು ಮಾರುಕಟ್ಟೆಯ ಅನುಗುಣವಾಗಿ ತಮ್ಮ ಬಯೋಡೇಟಾವನ್ನು ವಿಭಿನ್ನ ರೀತಿಯಲ್ಲಿ ಗುರುತಿಸಿಕೊಳ್ಳಬೇಕೆಂದರು.