ಕನ್ನಡಪ್ರಭ ವಾರ್ತೆ ಮೂಡುಬಿದಿರೆ
ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ವತಿಯಿಂದ ಜೆಎಂಸಿ ಹಾಲ್ನಲ್ಲಿ ನಡೆದ ‘ಡಿಜಿಟಲ್ ಯುಗದಲ್ಲಿ ರೇಡಿಯೋ ಅವಕಾಶಗಳು ಹಾಗೂ ಸವಾಲುಗಳು’ ಎಂಬ ವಿಷಯದ ಕುರಿತು ಅವರು ಮಾತನಾಡಿದರು.
ಪ್ರಸ್ತುತ ಭಾರತದಲ್ಲಿ ೪೦೦ ಕ್ಕೂ ಹೆಚ್ಚು ಆಕಾಶವಾಣಿ ರೇಡಿಯೋ ಸ್ಟೇಷನ್ ಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ. ಸಾಮಾಜಿಕ ನೆಲೆಯಲ್ಲಿ ವಿಭಿನ್ನ ಮತ್ತು ವಿನೂತನ ಕಾರ್ಯಕ್ರಮಗಳಿಂದ ಆಕಾಶವಾಣಿ ಜನರಿಗೆ ಮಾಹಿತಿ ತಲುಪಿಸುವ ಪ್ರಬಲ ಮಾಧ್ಯಮವಾಗಿ ಮುಂದುವರಿಯುತ್ತಿದೆ ಎಂದರು. ವಿದ್ಯಾರ್ಥಿಗಳಿಗೆ ರೇಡಿಯೋ ಸಂದರ್ಶನಕ್ಕೆ ಪ್ರಶ್ನಾವಳಿ ರಚಿಸುವ ಚಟುವಟಿಕೆ ನೀಡಿ, ಪರಿಣಾಮಕಾರಿ ಪ್ರಶ್ನಾವಳಿ ತಯಾರಿಸುವ ಕುರಿತು ತಿಳಿಸಿದರು. ರೇಡಿಯೋದಲ್ಲಿ ಪ್ರಸಾರವಾಗುವ ಡ್ರಾಮಾ , ಡಾಕ್ಯೂಮೆಂಟರಿಯ ತುಣುಕನ್ನು ವಿದ್ಯಾರ್ಥಿಗಳಿಗೆ ಆಲಿಸಿದರು. ಕಾರ್ಯಕ್ರಮದಲ್ಲಿ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ, ಕಾರ್ಯಕ್ರಮ ಸಂಯೋಜಕಿ ಸುಶ್ಮಿತಾ ಜೆ. ಇದ್ದರು. ವಿದ್ಯಾರ್ಥಿ ಸಂಯೋಜಕಿ ವೀಕ್ಷಿತಾ ವಿ. ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.