ಆರೋಗ್ಯವಂತ ಸಿಬ್ಬಂದಿಯಿಂದ ದಕ್ಷ ಆಡಳಿತ ಸೇವೆ ಸಾಧ್ಯ: ಜಿಲ್ಲಾಧಿಕಾರಿ

KannadaprabhaNewsNetwork |  
Published : May 22, 2026, 02:45 AM IST
ಫೋಟೋವಿವರ- (20ಎಚ್‌ಪಿಟಿ4)ಹೊಸಪೇಟೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್‌ನ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಹಮ್ಮಿಕೊಳ್ಳಲಾಗಿದ್ದ ’ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣಾ ಶಿಬಿರದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಅವರು ಆರೋಗ್ಯ ತಪಾಸಣೆಯಲ್ಲಿ ಭಾಗಿಯಾಗಿರುವುದು | Kannada Prabha

ಸಾರಾಂಶ

ದೈಹಿಕ, ಮಾನಸಿಕ ಆರೋಗ್ಯವನ್ನು ಕಾಪಾಡಿಕೊಂಡಾಗ ಮಾತ್ರ ಸಾರ್ವಜನಿಕರಿಗೆ ದಕ್ಷತೆಯಿಂದ ಸೇವೆ ನೀಡಲು ಸಾಧ್ಯ

ಹೊಸಪೇಟೆ: ಸಾರ್ವಜನಿಕ ಸೇವೆಯಲ್ಲಿ ನಿರಂತರ ತೊಡಗಿಸಿಕೊಳ್ಳುವ ಅಧಿಕಾರಿಗಳು, ಸಿಬ್ಬಂದಿ ಇಂದಿನ ಒತ್ತಡದ ಬದುಕಿನಲ್ಲಿ ದೈಹಿಕ, ಮಾನಸಿಕ ಆರೋಗ್ಯವನ್ನು ಕಾಪಾಡಿಕೊಂಡಾಗ ಮಾತ್ರ ಸಾರ್ವಜನಿಕರಿಗೆ ದಕ್ಷತೆಯಿಂದ ಸೇವೆ ನೀಡಲು ಸಾಧ್ಯ ಎಂದು ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ತಿಳಿಸಿದರು.

ನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿಯಂತ್ರಣ ಸಂಘ ಹಾಗೂ ರೋಟರಿ ಕ್ಲಬ್ ಆಫ್ ಹಂಪಿ ಪರ್ಲ್ಸ್ ಸಹಯೋಗದಲ್ಲಿ ಬುಧವಾರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್‌ನ ಅಧಿಕಾರಿಗಳು, ಸಿಬ್ಬಂದಿಗೆ ಹಮ್ಮಿಕೊಳ್ಳಲಾಗಿದ್ದ ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಬೆಳಗ್ಗೆಯಿಂದ ಸಂಜೆವರೆಗೆ ಸಾರ್ವಜನಿಕರ ಅಹವಾಲು ಆಲಿಸುವುದು, ಕಡತಗಳ ವಿಲೇವಾರಿ ಹಾಗೂ ಸರ್ಕಾರದ ಯೋಜನೆಗಳ ಅನುಷ್ಠಾನದಂತಹ ದೈನಂದಿನ ಒತ್ತಡದ ಕೆಲಸದ ನಡುವೆ ನೌಕರರು ತಮ್ಮ ಆರೋಗ್ಯದ ಕಡೆಗೆ ಗಮನ ಹರಿಸುವುದನ್ನೇ ಮರೆತು ಬಿಡುತ್ತಾರೆ. ಆರೋಗ್ಯ ಕೈಕೊಟ್ಟಾಗ ಆಸ್ಪತ್ರೆಗೆ ಓಡುವುದಕ್ಕಿಂತ, ಮುಂಜಾಗ್ರತೆಯಾಗಿ ವರ್ಷಕ್ಕೊಮ್ಮೆಯಾದರೂ ಸಂಪೂರ್ಣ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಉತ್ತಮ. ಇಂತಹ ಉಚಿತ ಶಿಬಿರಗಳನ್ನು ಕೇವಲ ಔಪಚಾರಿಕ ಎನ್ನದೆ, ಪ್ರತಿ ಮುಂಚೂಣಿ ಸಿಬ್ಬಂದಿಯೂ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ರೋಟರಿ ಕಣ್ಣಿನ ಆಸ್ಪತ್ರೆಯ ನುರಿತ ತಜ್ಞ ವೈದ್ಯರ ತಂಡವು ಅತ್ಯಾಧುನಿಕ ಡಿಜಿಟಲ್ ಉಪಕರಣಗಳ ಮೂಲಕ ಸಿಬ್ಬಂದಿ ಉಚಿತ ಕಣ್ಣಿನ ತಪಾಸಣೆ ಜೊತೆಗೆ ರಕ್ತದೊತ್ತಡ, ಮಧುಮೇಹ, ಸಾಮಾನ್ಯ ದೈಹಿಕ ತಪಾಸಣೆ ನಡೆಸಲಾಯಿತು. ತಪಾಸಣೆ ನಂತರ ಅಗತ್ಯವಿದ್ದ ಸಿಬ್ಬಂದಿಗೆ ಸ್ಥಳದಲ್ಲೇ ಉಚಿತ ಔಷಧಿ ವಿತರಿಸಲಾಯಿತು.

ಸ್ವತಃ ಡಿಸಿ, ಸಿಇಒ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.

ಆರೋಗ್ಯ ತಪಾಸಣಾ ಶಿಬಿರದಲ್ಲಿ ರೋಟರಿ ಕ್ಲಬ್ ಆಫ್ ಹಂಪಿ ಪರ್ಲ್ಸ್ ನ ಅಧ್ಯಕ್ಷೆ ಅನ್ನಪೂರ್ಣ ಸದಾಶಿವ, ಕಾರ್ಯದರ್ಶಿ ದೀಪಾ ಅಗರ್ವಾಲ್ ಇದ್ದರು.

ಹೊಸಪೇಟೆ ನಗರದ ಜಿಪಂ ಸಭಾಂಗಣದಲ್ಲಿ ನಡೆದ ಉಚಿತ ಆರೋಗ್ಯ, ಕಣ್ಣಿನ ತಪಾಸಣಾ ಶಿಬಿರದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಆರೋಗ್ಯ ತಪಾಸಣೆಯಲ್ಲಿ ಭಾಗಿಯಾಗಿರುವುದು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದಿನಿಂದ ಮಾವು, ಹಲಸು ಮೇಳ
ಉದ್ಯೋಗ ಆಧರಿತ ಶಿಕ್ಷಣ ಕಾರ್ಯಾಗಾರ