ಕನ್ನಡಪ್ರಭ ವಾರ್ತೆ ಸೋಮವಾರಪೇಟೆ
ಶುಕ್ರವಾರ ಇಲ್ಲಿನ ಕೊಡವ ಸಮಾಜದ ಸಭಾಂಗಣದಲ್ಲಿ ನಡೆದ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಈಗಾಗಲೇ ಸಾಕಷ್ಟು ಅಭಿವೃದ್ಧಿ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಸರ್ಕಾರದಲ್ಲಿ ಹಣ ಇಲ್ಲ, ಯಾವುದೇ ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ ಎಂಬ ವಿರೋಧ ಪಕ್ಷದವರ ಹೇಳಿಕೆಗೆ ಕೆಲಸ ಮಾಡುವ ಮೂಲಕ ಸರ್ಕಾರ ಕ್ಷೇತ್ರಕ್ಕೆ ಹಣ ಬರುತ್ತಿರುವುದನ್ನು ತೋರಿಸಬೇಕಿದೆ. ಯಾರೂ ಧೃತಿಗೆಡುವುದು ಬೇಡ ಎಂದು ಪದಾಧಿಕಾರಿಗಳಿಗೆ ತಿಳಿಸಿದರು.
ಕ್ಷೇತ್ರದಲ್ಲಿ ಎಂಎಲ್ಎ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರು ಸಾಕಷ್ಟು ಕೆಲಸ ಮಾಡುವ ಮೂಲಕ ನನ್ನ ಗೆಲವಿಗೆ ಕಾರಣಕರ್ತರಾಗಿದ್ದೀರಿ. ಅದೇ ರೀತಿಯಲ್ಲಿ ಮುಂದಿನ ಒಂದೆರಡು ತಿಂಗಳಿನಲ್ಲಿ ನಡೆಯುವ ಜಿ.ಪಂ ಮತ್ತು ತಾ.ಪಂ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕಿದೆ. ಇಂದಿನಿಂದಲೇ ಬೂತ್ ಮಟ್ಟದಲ್ಲಿ ಸಭೆಗಳನ್ನು ನಡೆಸಿ, ಪಕ್ಷ ಸಂಘಟಿಸುವ ಕೆಲಸವಾಗಬೇಕು. ಜಿಲ್ಲೆಯಲ್ಲಿ 25 ಕ್ಷೇತ್ರಗಳಿಗೆ ಸೀಮಿತ ಮಾಡಿದ್ದ ಕ್ಷೇತ್ರಗಳನ್ನು ಮತ್ತೊಮೆ 29 ಕ್ಷೇತ್ರಗಳನ್ನಾಗಿ ಮಾಡುವ ಮೂಲಕ ಹಿಂದಿನಂತೆಯೇ ಅವಕಾಶವನ್ನು ಸರ್ಕಾರ ಮಾಡಿಕೊಟ್ಟಿದೆ ಎಂದರು.ಕ್ಷೇತ್ರದ ಅಭಿವೃದ್ಧಿಯಲ್ಲಿ ರಾಜಕೀಯ ಬಿಟ್ಟು, ಮತದಾರರ ವಿಶ್ವಾಸವನ್ನು ಗಳಿಸುವ ಮೂಲಕ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು. ಕ್ಷೇತ್ರದಲ್ಲಿ ಆಗುತ್ತಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಮತದಾರರಿಗೆ ತಿಳಿ ಹೇಳಬೇಕೆಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್. ಕೆಪಿಸಿಸಿ ಸದಸ್ಯ ಕೆ.ಎ. ಯಾಕೂಬ್, ಜಿಲ್ಲಾ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಬಿ.ಈ. ಜಯೇಂದ್ರ, ಡಿಸಿಸಿ ಸದಸ್ಯ ಜನಾರ್ದನ್, ಆರೋಗ್ಯ ಸಮಿತಿ ಸದಸ್ಯ ಡಾ. ಉದಯಕುಮಾರ್, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಕಾಂತರಾಜ್, ಕೆಡಿಪಿ ಸದಸ್ಯ ಎಚ್.ಆರ್. ಸುರೇಶ್, ನಗರ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಇದ್ದರು.