ಕನ್ನಡಪ್ರಭ ವಾರ್ತೆ ಹುಮನಾಬಾದ್
ತಾಲೂಕಿನ ಹುಣಸನಾಳ ಗ್ರಾಮದ ದತ್ತಗಿರಿ ಪರ್ವತದಲ್ಲಿರುವ ದತ್ತ ಟ್ರಸ್ಟ್ ಸೇವಾ ಸಮಿತಿಯಿಂದ ಆಯೋಜಿಸಿದ ಮೂರ್ತಿ ಪ್ರತಿಷ್ಠಾಪನೆ ದ್ವಿತೀಯ ವರ್ಷಾಚರಣೆ ಜಾತ್ರಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿದ್ಯುತ್ ಸಂಪರ್ಕ ಹಾಗೂ ದರ್ಶನಕ್ಕೆ ಬರುವ ಭಕ್ತರಿಗೆ ಕುಡಿವ ನೀರಿನ ವ್ಯವಸ್ಥೆಗೆ ನೂತನ ಬೋರ್ವೆಲ್ ಕಲ್ಪಿಸುವುದಾಗಿ ಜತೆಗೆ ದೇವಸ್ಥಾನಕ್ಕೆ ಸರಳವಾಗಿ ಹೋಗಿ ಬರಲು ಸಿಸಿ ರಸ್ತೆ ನಿರ್ಮಾಣದ ಭರವಸೆ ನೀಡಿದರು.
ಮಕ್ಕಳಿಗೆ ನಮ್ಮ ಪೂರ್ವಜರು ನೀಡಿದ ಸಂಸ್ಕಾರ ಸಂಸ್ಕೃತಿ ನೀಡುವ ಮೂಲಕ ಮಕ್ಕಳ ಉಜ್ವಲ ಭವಿಷ್ಯ ನಿರ್ಮಿಸುವ ಜವಾಬ್ದಾರಿ ತಾಯಂದಿರದ್ದಾಗಿದೆ ಎಂದು ಇದೇ ವೇಳೆ ನುಡಿದರು.ಅಪಾರ ಭಕ್ತ ಸಾಗರ ಮಧ್ಯೆ ನಸೂಕಿನ ಜಾವದಲ್ಲಿ ಸುಪ್ರಭಾತ, ಸಕಲ ದೇವತಾ ಆಗ್ರಹ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆದವು. ಬೆಳಗ್ಗೆ ಶ್ರೀ ರಾಮ ಮಂದಿರದಿಂದ ಗ್ರಾಮದ ಪ್ರಮುಖ ಮಾರ್ಗಗಳ ಮೂಲಕ ಸುಮಂಗಲಿಯರಿಂದ ಸಕಲ ವಾದ್ಯಗಳೊಂದಿಗೆ ಕುಂಭ, ಗಂಗಾ ಪೂಜೆ ಜರುಗಿತು.
ಅಧ್ಯಕ್ಷ ನೀಲಕಂಠರಾವ ಪಾಟೀಲ್, ಉಪಾಧ್ಯಕ್ಷ ಬಾಬುರಾವ ಬಿರಾದಾರ, ಕಾರ್ಯದರ್ಶಿ ನರಸಿಂಗರಾವ ಬೆಂಬಳಗೆ, ಬಾಲಾಜಿ ಕೊಂಗಳೆ, ಅನೀಲ್ ಪಾಟೀಲ್, ವೈಜನಾಥ ಪಾಟೀಲ್, ನರಸಿಂಗ್ ಪಾಟೀಲ್, ಶಿವಾಜಿರಾವ ಪಾಟೀಲ್, ಸುರೇಶ ಕಾಟೆಕರ್, ಮಲ್ಲಿಕಾರ್ಜುನ ಮೋರೆ, ರಮೇಶ ಬಿರಾದಾರ, ಕಾಶಪ್ಪಾ ಗೋದೆ ಸೇರಿದಂತೆ ಅನೇಕರಿದ್ದರು.