ಮೆಡಿಕಲ್ ಕಾಲೇಜು ಮಂಜೂರಾತಿಗೆ ಪ್ರಯತ್ನ

KannadaprabhaNewsNetwork |  
Published : Feb 09, 2025, 01:15 AM IST
(ವಿ.ಸೋಮಣ್ಣ) | Kannada Prabha

ಸಾರಾಂಶ

ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಆವರಣದಲ್ಲಿ ಮೆಡಿಕಲ್ ಕಾಲೇಜು ಆರಂಭಕ್ಕೆ ಅರ್ಜಿ ಸಲ್ಲಿಸಿದಲ್ಲಿ, ಪ್ರಧಾನಿ ಮೋದಿ ಅವರಿಂದ ಮಂಜೂರು ಮಾಡಿಸಿ ಕೊಡುವುದಾಗಿ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣ ಹರಿಹರದಲ್ಲಿ ಭರವಸೆ ನೀಡಿದ್ದಾರೆ.

ಹರಿಹರ: ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಆವರಣದಲ್ಲಿ ಮೆಡಿಕಲ್ ಕಾಲೇಜು ಆರಂಭಕ್ಕೆ ಅರ್ಜಿ ಸಲ್ಲಿಸಿದಲ್ಲಿ, ಪ್ರಧಾನಿ ಮೋದಿ ಅವರಿಂದ ಮಂಜೂರು ಮಾಡಿಸಿ ಕೊಡುವುದಾಗಿ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣ ಭರವಸೆ ನೀಡಿದರು.

ವಾಲ್ಮೀಕಿ ಜಾತ್ರೆಯಲ್ಲಿ ಮಾತನಾಡಿದ ಅವರು, ಪೀಠದ 20 ಎಕರೆ ಪ್ರದೇಶದಲ್ಲಿ 10 ಎಕರೆಯನ್ನು ಮೆಡಿಕಲ್ ಕಾಲೇಜಿನ ಉದ್ದೇಶಕ್ಕೆ ಬಳಸಿಕೊಳ್ಳಬಹುದು. ಭಾನುವಾರ ಜಾತ್ರಾ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹ ಆಗಮಿಸಲಿದ್ದಾರೆ. ಶ್ರೀಗಳು ಅವರ ಬಳಿ ಅರ್ಜಿ ನೀಡಿದರೆ, ಪ್ರಧಾನಿ ಮೋದಿಯವರ ಕೈ-ಕಾಲು ಹಿಡಿದು ಮೆಡಿಕಲ್ ಕಾಲೇಜ್ ಮಂಜೂರು ಮಾಡಿಸುವುದು ನನ್ನ ಜವಾಬ್ದಾರಿ ಎಂದರು.

ಈ ಹಿಂದೆ ಮೆಡಿಕಲ್ ಕಾಲೇಜು ಸ್ಥಾಪನೆಗೆ 20 ಎಕರೆ ಜಮೀನು ಕಡ್ಡಾಯವಾಗಿತ್ತು. ಆದರೆ, ಈಗ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ನಗರ ಪ್ರದೇಶದಲ್ಲಿ 5 ಎಕರೆ, ಗ್ರಾಮೀಣ ಪ್ರದೇಶದಲ್ಲಿ 10 ಎಕರೆ ಜಾಗವಿದ್ದರೆ ಸಾಕು, ಕಾಲೇಜು ಮಂಜೂರು ಮಾಡುತ್ತಿದೆ. ದೇಶಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಮೆಡಿಕಲ್ ಕಾಲೇಜು ಆರಂಭಿಸಲಾಗುತ್ತಿದೆ. ಹೆಚ್ಚಿನ ಸಂಖ್ಯೆಯ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳು ಮೀಸಲಾತಿ ಅಡಿ ವೈದ್ಯಕೀಯ ವೃತ್ತಿಗೆ ಬರುತ್ತಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ರವಿ ಡಿ.ಚನ್ನಣ್ಣವರ್‌ ಅವರ ಮಾತಿಗೂ ಪ್ರತಿಕ್ರಿಯೆ ನೀಡಿದ ಸೋಮಣ್ಣ ಅವರು, ನಮ್ಮ ಸರ್ಕಾರ ಇದ್ದಾಗ ರವಿ ಡಿ. ಚೆನ್ನಣ್ಣನವರ್‌ ಅವರನ್ನು ಚೆನ್ನಾಗಿಯೇ ನೋಡಿಕೊಳ್ಳಲಾಗಿತ್ತು. ಈಗಿನ ಸರ್ಕಾರ ಅವರ ಸೇವೆ ಬಳಸಿಕೊಳ್ಳುತ್ತಿಲ್ಲ. ಅರ್ಹತೆ ಇದ್ದವರಿಗೆ ಆದ್ಯತೆ ನೀಡಬೇಕು. ಒಂದುವೇಳೆ ರವಿ ಡಿ. ಚೆನ್ನಣ್ಣನವರ್‌ ಭಾರತ ಸರ್ಕಾರದ ಸೇವೆಗೆ ಬರುವುದಾದರೆ ಅವರಿಗೆ ಕೈ ತುಂಬಾ ಕೆಲಸ ಕೊಡ್ತೀನಿ ಎಂದರು. ಈ ಸಂದರ್ಭ ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ ಮತ್ತಿತರಿದ್ದರು.

- - - (ವಿ.ಸೋಮಣ್ಣ)

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲಕ್ಷ್ಮೇಶ್ವರದಲ್ಲಿ ಪ್ರಾರಂಭವಾದ ಮೆಕ್ಕೆಜೋಳ ಖರೀದಿ, ಮುಗಿಯದ ಗೊಂದಲ!
ವಿಶ್ವಕರ್ಮ ಮಹಾ ಒಕ್ಕೂಟ ಜಿಲ್ಲಾ ಘಟಕ ಉದ್ಘಾಟನೆ