ಕನ್ನಡಪ್ರಭ ವಾರ್ತೆ ಬೀಳಗಿ
ತಾಲೂಕಿನ ಬಾಡಗಂಡಿ ಎಸ್.ಆರ್.ಪಾಟೀಲ್ ವೈದ್ಯಕೀಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಆಯೋಜಿಸಿದ ಡಾ.ಬಿಧನ್ ಚಂದ್ರರಾಯ್ ಗೌರವ ದಿನವಾದ ರಾಷ್ಟ್ರೀಯ ವೈದ್ಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವೈದ್ಯರ ಅಮೂಲ್ಯವಾದ ಸೇವೆ ಸದಾ ಕಾಲ ಇರಬೇಕು. ನಮ್ಮ ರಾಷ್ಟ್ರದ ಅಭಿವೃದ್ಧಿ ಜನತೆಯ ಆರೋಗ್ಯದಲ್ಲಿ ಅವಲಂಬಿಸಿದೆ ಎಂದು ತಿಳಿಸಿದರು.
ಎಸ್.ಆರ್.ಪಾಟೀಲ ವೈದ್ಯಕೀಯ ಕಾಲೇಜು ಕಾರ್ಯದರ್ಶಿ ಎಂ.ಎನ್.ಪಾಟೀಲ ಮಾತನಾಡಿ, ಮನುಷ್ಯನಿಗೆ ಆರೋಗ್ಯವೇ ಭಾಗ್ಯ ಎಂಬುವುದು ಸರ್ವಕಾಲಿಕ ಮಾತು. ಇದು ಅಷ್ಟೇ ಸತ್ಯವೂ ಕೂಡ. ಆರೋಗ್ಯವನ್ನು ರಕ್ಷಿಸುವುದು, ಅನಾರೋಗ್ಯಕ್ಕೆ ಮದ್ದು ನೀಡಿ ಗುಣ ಪಡಿಸುವುದು ವೈದ್ಯರ ಕರ್ತವ್ಯವಾಗಿದೆ. ವೈದ್ಯೋ ನಾರಾಯಣ ಹರಿ ಎನ್ನುವುದು ಅದಕ್ಕೆ ಸಾಕ್ಷಿಯಾಗಿದೆ. ಅದಕ್ಕಾಗಿ ವೈದ್ಯರನ್ನ ದೇವರಿಗೆ ಹೊಲಿಸಲಾಗುತ್ತದೆ. ಈ ಪದ್ಧತಿಯೂ ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ ಎಂದು ವಿವರಿಸಿದರು.ಸಂಸ್ಥೆಯ ನಿರ್ದೇಶಕ ದಯಾನಂದ್ ಪಾಟೀಲ, ವೈದ್ಯಕೀಯ ಕಾಲೇಜು ಡೀನ್ ಧರ್ಮರಾಯ ಇಂಗಳೆ, ವೈದ್ಯಕೀಯ ಅಧೀಕ್ಷಕ ಡಾ.ವಿಜಯಾನಂದ್ ಹಳ್ಳಿ, ವೈದ್ಯಕೀಯ ನಿರ್ದೇಶಕ ಡಾ.ರಾಘವೇಂದ್ರ ಪಾಟೀಲ ಇತರರು ಇದ್ದರು.ಹಲವಾರು ಬಗೆಯ ರೋಗರುಜಿಗಳಿಂದ ಮನುಷ್ಯ ಜೀವನ ಕಷ್ಟಕರವಾದಾಗ ವೈದ್ಯರು ಬಗೆ ಬಗೆಯ ಚಿಕಿತ್ಸೆ ನೀಡಿ ರೋಗ ಹರಡದಂತೆ ರೋಗಿ ಕಾಪಾಡುವ ಶಕ್ತಿ ಹೊಂದಿದ್ದಾರೆ. ವೃತ್ತಿಗಳಲ್ಲಿ ಪವಿತ್ರವಾದ ವೃತ್ತಿ ವೈದ್ಯ ವೃತ್ತಿ.
-ಎಂ.ಎನ್.ಪಾಟೀಲ, ಎಸ್.ಆರ್.ಪಾಟೀಲ ವೈದ್ಯಕೀಯ ಕಾಲೇಜು ಕಾರ್ಯದರ್ಶಿ.