ಕನ್ನಡಪ್ರಭ ವಾರ್ತೆ ವಿಜಯಪುರ
ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಂಡ ವೃಕ್ಷೊತ್ಥಾನ ಹೆರಿಟೇಜ್ ರನ್ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕಳೆದ 2016 ರಿಂದ ಕೋಟಿ ವೃಕ್ಷ ಅಭಿಯಾನ ಆರಂಭಿಸಲಾಗಿದ್ದು, ವೃಕ್ಷೊತ್ಥಾನ ಆರಂಭದಿಂದ ಇಲ್ಲಿಯವರೆಗೆ ಕೋಟಿ ವೃಕ್ಷ ಅಭಿಯಾನದಡಿ ಜಿಲ್ಲೆಯಲ್ಲಿ 1.50 ಕೋಟಿ ಸಸಿಗಳನ್ನು ನೆಟ್ಟು ಪೋಷಿಸಲಾಗುತ್ತಿದೆ. ಆ ಮೂಲಕ ಅತ್ಯಂತ ಕಡಿಮೆ ಇದ್ದ ಜಿಲ್ಲೆಯ ಅರಣ್ಯ ಪ್ರದೇಶವನ್ನು ರಾಜ್ಯದ ತರುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುತ್ತಿದೆ ಎಂದರು.
ಕಳೆದ 2023ರಲ್ಲಿ ನಡೆದ ವೃಕ್ಷೊತ್ಥಾನ ಹೆರಿಟೇಜ್ ರನ್ನಲ್ಲಿ 8 ಸಾವಿರ ಓಟಗಾರರು, 2024ರಲ್ಲಿ 9400 ಓಟಗಾರರು ಭಾಗವಹಿಸಿದ್ದರು. ಈ ಬಾರಿ ನಡೆಯುವ ವೃಕ್ಷೊತ್ಥಾನ ಹೆರಿಟೇಜ್ ರನ್ನಲ್ಲಿ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ 15 ಸಾವಿರ ಓಟಗಾರರು ಭಾಗವಹಿಸುವ ನಿರೀಕ್ಷೆ ಇದೆ. ಈ ಅಭಿಯಾನಕ್ಕೆ ಎಲ್ಲರೂ ಕೈ ಜೋಡಿಸುವ ಮೂಲಕ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.ನಿಸರ್ಗದ ಬಗ್ಗೆ ಅಪಾರ ಕಾಳಜಿ, ಪ್ರೀತಿ ಹೊಂದಿದ ನಡೆದಾಡುವ ದೇವರು ಸಿದ್ದೇಶ್ವರ ಸ್ವಾಮೀಗಳ ಆಶಯದಂತೆ ಹೆರಿಟೇಜ್ ರನ್ ಮೂಲಕ ಹಸರಿಕರಣದ ಜಾಗೃತಿ ಮೂಡುತ್ತಿದೆ. ಮಮದಾಪುರದ 1600 ಎಕರೆ ಅರಣ್ಯ ಪ್ರದೇಶಕ್ಕೆ ಸಿದ್ದೇಶ್ವರ ಶ್ರೀಗಳ ಹೆಸರಿಟ್ಟು ಗೌರವ ಅರ್ಪಿಸಲಾಗಿದೆ ಎಂದು ಹೇಳಿದರು.ಮಹಾನಗರ ಪಾಲಿಕೆ ಮಹಾಪೌರ ಮಡಿವಾಳಪ್ಪ ಕರಡಿ, ಜಿಪಂ ಸಿಇಒ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಎಎಸ್ಐ ಇಲಾಖೆ ಧಾರವಾಡ ವೃತ್ತದ ರಮೇಶ ಮೂಲಿಮನಿ, ಕರ್ನಲ್ ವಂಶಿ, ಮುರುಗೇಶ ಪಟ್ಟಣಶೆಟ್ಟಿ, ಮಹಾಂತೇಶ ಬಿರಾದಾರ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.ಬಾಕ್