ಹೊಸಕೋಟೆ: ಸರ್ಕಾರ ಜಾರಿ ಮಾಡಿರುವ ಪಂಚ ಗ್ಯಾರಂಟಿಗಳ ಶೇ.100ರಷ್ಟು ಸಮರ್ಪಕ ಅನುಷ್ಠಾನಕ್ಕೆ ಅಧಿಕಾರಿಗಳು ಸೇರಿದಂತೆ ಅನುಷ್ಠಾನ ಸಮಿತಿ ಸದಸ್ಯರು ಅವಿರತ ಶ್ರಮಿಸುತ್ತಿದ್ದೇವೆ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ರಾಜಣ್ಣ ತಿಳಿಸಿದರು.
ಹೊಸಕೋಟೆ: ಸರ್ಕಾರ ಜಾರಿ ಮಾಡಿರುವ ಪಂಚ ಗ್ಯಾರಂಟಿಗಳ ಶೇ.100ರಷ್ಟು ಸಮರ್ಪಕ ಅನುಷ್ಠಾನಕ್ಕೆ ಅಧಿಕಾರಿಗಳು ಸೇರಿದಂತೆ ಅನುಷ್ಠಾನ ಸಮಿತಿ ಸದಸ್ಯರು ಅವಿರತ ಶ್ರಮಿಸುತ್ತಿದ್ದೇವೆ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ರಾಜಣ್ಣ ತಿಳಿಸಿದರು.
ತಾಲೂಕಿನ ಚೊಕ್ಕಹಳ್ಳಿ ಗ್ರಾಪಂ ಆವರಣದಲ್ಲಿ ಗ್ಯಾರಂಟಿ ಯೋಜನೆಗಳ ಕುಂದುಕೊರತೆ ಸಭೆಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆಯಲ್ಲಿ ಜಿಲ್ಲೆಗೆ 230 ಕೋಟಿ ರು. ಖರ್ಚು ಮಾಡಲಾಗಿದೆ. ಹಸಿವು ಮುಕ್ತ ರಾಜ್ಯ, ಮಹಿಳಾ ಸಬಲೀಕರಣ, ಆರ್ಥಿಕ ಅಭಿವೃದ್ಧಿಯ ಉದ್ದೇಶದಿಂದ ಪಂಚ ಗ್ಯಾರಂಟಿ ಯೋಜನೆ ಜಾರಿ ಮಾಡಲಾಗಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ.ಶಿವಕುಮಾರರಿಗೆ ಅಭಿನಂದನೆ ಸಲ್ಲಿಸಬೇಕು ಎಂದರು. ತಾಲೂಕು ಅಧ್ಯಕ್ಷ ಬಚ್ಚೇಗೌಡ ಮಾತನಾಡಿ, ಗ್ಯಾರಂಟಿ ಯೋಜನೆಗಳನ್ನು ಪಕ್ಷಾತೀತವಾಗಿ ರಾಜ್ಯದಲ್ಲಿ ಅನುಷ್ಠಾನ ಮಾಡುತ್ತಿದ್ದು, ಯೋಜನೆಗಳ ಸಾಧಕ- ಭಾದಕಗಳ ಕುರಿತು ಹಾದಿ- ಬೀದಿಯಲ್ಲಿ ಮಾತನಾಡುವ ಬದಲು ಸಭೆಗೆ ಬಂದು ಚರ್ಚೆ ಮಾಡಬೇಕು. ಗ್ಯಾರಂಟಿ ಯೋಜನೆ ತಲುಪುವಲ್ಲಿ ಏನಾದರೂ ಸಮಸ್ಯೆ ಇದ್ದರೆ ಸ್ಥಳೀಯ ಗ್ರಾಪಂಗೆ ದೂರು ನೀಡಿದರೆ ಸಮಿತಿ ಪರಿಹಾರ ನೀಡುತ್ತದೆ ಎಂದರು. ಅನುಷ್ಠಾನ ಸಮಿತಿ ಸದಸ್ಯರಾದ ಹೇಮಣ್ಣ, ಮಂಜುನಾಥ್, ಅಮ್ಜದ್ ಬೇಗ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಿ.ಸಿ.ಲಕ್ಷ್ಮೀ, ಗ್ರಾಪಂ ಅಧ್ಯಕ್ಷೆ ಮಧುಶ್ರೀ ಕೆಂಪಣ್ಣ, ಉಪಾಧ್ಯಕ್ಷ ಆಂಜಿನಪ್ಪ, ಸದಸ್ಯರಾದ ತಮ್ಮಯ್ಯ ಗೌಡ, ಸಂಪಣ್ಣ, ಲಲಿತ್ ಮಹೇಶ್, ರಾಮ ಮೂರ್ತಿ, ನಾಗೇಶ್, ಮಂಜುಳ ನಾಗರ್ಜುನ, ವೇದವತಿ ರಾಮು, ಪಿಡಿಒ ರವಿಕುಮಾರ್, ಆಹಾರ ಇಲಾಖೆ ಅಧಿಕಾರಿ ಶಿವಕುಮಾರ್ ಹಾಜರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.