ಕುವೆಂಪು ಕ್ರೀಡಾಂಗಣ ಸುಸಜ್ಜಿತಗೊಳಿಸಲು ಪ್ರಯತ್ನ: ಡಾ.ಕೆ.ಪಿ.ಅಂಶುಮಂತ್‌ ಭರವಸೆ

KannadaprabhaNewsNetwork |  
Published : Aug 27, 2024, 01:33 AM IST
ನರಸಿಂಹರಾಜಪುರ ಕುವೆಂಪು ಕ್ರೀಡಾಂಗಣದಲ್ಲಿ ನಡೆದ ತಾಲೂಕು ಒಕ್ಕಲಿಗರ ಸಂಘದ ಎಂ.ಕೆ.ಸಿ.ಪಿ.ಎಂ. ಪದವಿಪೂರ್ವ ಕಾಲೇಜಿನ ನೇತ್ರತ್ವದಲ್ಲಿ  ನಡೆದ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಕಟಗಳಲೆ ಲೋಕೇಶ್‌ ಕ್ರೀಡಾ ಜ್ಯೋತಿ ಸ್ವೀಕಾರ ಮಾಡಿದರು.ಈ ಸಂದರ್ಭದಲ್ಲಿ ಶಿವಮೊಗ್ಗದ ಭದ್ರಾ ಕಾಡಾ ಪ್ರಾಧೀಕಾರದ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್‌,ತಾಲೂಕು ಒಕ್ಕಲಿಗರ ಸಂಘದ ಕಾರ್ದರ್ಶಿ ಎಸ್‌.ಎಸ್‌.ಶಾಂತಕುಮಾರ್‌, ನಿಕಟಪೂರ್ವ ಅಧ್ಯಕ್ಷ  ಡಿ.ಸಿ.ದಿವಾಕರ ಮತ್ತಿತರರು ಇದ್ದರು. | Kannada Prabha

ಸಾರಾಂಶ

ನರಸಿಂಹರಾಜಪುರ, ಕುವೆಂಪು ಕ್ರೀಡಾಂಗಣವನ್ನು ಇನ್ನಷ್ಟು ಸುಸಜ್ಜಿತವಾಗಿ ಮಾಡಲು ಸರ್ಕಾರದ ಮಟ್ಟದಲ್ಲಿ ಎಲ್ಲಾ ಪ್ರಯತ್ನ ನಡೆಸುತ್ತೇನೆ ಎಂದು ಶಿವಮೊಗ್ಗದ ಭದ್ರಾ ಕಾಡಾ ಪ್ರಾಧೀಕಾರದ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್‌ ಭರವಸೆ

ಕುವೆಂಪು ಕ್ರೀಡಾಂಗಣದಲ್ಲಿ ಎಂಕೆಸಿಪಿಎಂ ಪದವಿಪೂರ್ವ ಕಾಲೇಜು ನೇತೃತ್ವದಲ್ಲಿ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟ

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ಕುವೆಂಪು ಕ್ರೀಡಾಂಗಣವನ್ನು ಇನ್ನಷ್ಟು ಸುಸಜ್ಜಿತವಾಗಿ ಮಾಡಲು ಸರ್ಕಾರದ ಮಟ್ಟದಲ್ಲಿ ಎಲ್ಲಾ ಪ್ರಯತ್ನ ನಡೆಸುತ್ತೇನೆ ಎಂದು ಶಿವಮೊಗ್ಗದ ಭದ್ರಾ ಕಾಡಾ ಪ್ರಾಧೀಕಾರದ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್‌ ಭರವಸೆ

ಸೋಮವಾರ ಪಟ್ಟಣದ ಕುವೆಂಪು ಕ್ರೀಡಾಂಗಣದಲ್ಲಿ ತಾಲೂಕು ಒಕ್ಕಲಿಗರ ಸಂಘದ ಎಂಕೆಸಿಪಿಎಂ ಪದವಿಪೂರ್ವ ಕಾಲೇಜು ಹಾಗೂ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಡೆದ 2024-25 ನೇ ಸಾಲಿನ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾ ಕೂಟದಲ್ಲಿ ಜ್ಯೋತಿ ಬೆಳಗಿಸಿ, ಪಾರಿವಾಳ ಹಾರಿ ಬಿಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ತಾಲೂಕು ಮಟ್ಟದಿಂದ ರಾಜ್ಯ ಮಟ್ಟದವರೆಗೆ ಹಂತ, ಹಂತವಾಗಿ ಕ್ರೀಡಾಕೂಟಗಳು ನಡೆಯುತ್ತದೆ. ಕ್ರೀಡಾಕೂಟದಲ್ಲಿ ಸೋಲು, ಗೆಲುವಿಗಿಂತ ಭಾಗವಹಿಸುವುದು ಬಹಳ ಮುಖ್ಯವಾಗಿದೆ. ಪರಿಶ್ರಮ ಪಟ್ಟರೆ ವಿದ್ಯಾರ್ಥಿಗಳು ಗುರಿ ಮುಟ್ಟಬಹುದು. ಪ್ರತಿಯೊಬ್ಬರಲ್ಲೂ ಒಂದೊಂದು ಸುಪ್ತ ಪ್ರತಿಭೆ ಅಡಗಿರುತ್ತದೆ. ಶಿಕ್ಷಕರು, ಪೋಷಕರು ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ನೀಡಬೇಕು ಎಂದರು.

ತಾಲೂಕು ಒಕ್ಕಲಿಗರ ಸಂಘದ ಕಾರ್ಯದರ್ಶಿ ಎಸ್‌.ಎಸ್‌.ಶಾಂತಕುಮಾರ್‌ ಮಾತನಾಡಿ, 7 ವರ್ಷಗಳ ಹಿಂದೆ ಒಕ್ಕಲಿಗರ ಸಂಘದ ಎಂಕೆಸಿಪಿಎಂ ಕಾಲೇಜಿನ ನೇತೃತ್ವದಲ್ಲಿ ತಾಲೂಕು ಮಟ್ಟದ ಕ್ರೀಡಾ ಕೂಟ ನಡೆಸಲಾಗಿತ್ತು. ಈ ವರ್ಷ ಮತ್ತೆ ಅವಕಾಶ ಸಿಕ್ಕಿದೆ. ಮಕ್ಕಳು ಕ್ರೀಡಾ ಮನೋಭಾವದಿಂದ ಆಟವಾಡ ಬೇಕು. ಕ್ರೀಡೆಯಲ್ಲಿ ಆರೋಗ್ಯಕರ ಸ್ಪರ್ಧೆ ಅತಿ ಮುಖ್ಯ. ಭಾರತೀಯ ಒಲಂಪಿಕ್‌ ನಲ್ಲಿ 140 ಕೋಟಿ ಜನ ಸಂಖ್ಯೆ ಇರುವ ಅತಿ ದೊಡ್ಡ ದೇಶ ಭಾರತ ಕೇವಲ 6 ಪದಕ ಮಾತ್ರ ಗೆದ್ದಿದೆ. ಸರ್ಕಾರ ಕ್ರೀಡೆಗಳಿಗೆ ಇನ್ನಷ್ಟು ಪ್ರೋತ್ಸಾಹ ಅಗತ್ಯವಾಗಿದೆ ಎಂದರು.

ತಾಲೂಕು ಒಕ್ಕಲಿಗರ ಸಂಘದ ನಿಕಟಪೂರ್ವ ಅಧ್ಯಕ್ಷ ಡಿ.ಸಿ.ದಿವಾಕರ ದ್ವಜಾರೋಹಣ ನೆರವೇರಿಸಿ ಮಾತನಾಡಿ, ಕ್ರೀಡೆಗೆ ಎಲ್ಲರನ್ನೂ ಒಗ್ಗೂಡಿಸುವ ಶಕ್ತಿ ಇದೆ. ಪೋಷಕರು,ಶಿಕ್ಷಕರು ಮಕ್ಕಳ ಕ್ರೀಡೆಗೆ ಪ್ರೋತ್ಸಾಹ ನೀಡಬೇಕು. ಭಾರತ ದೇಶದಲ್ಲಿ ನಿರೀಕ್ಷೆಯಷ್ಟು ಕ್ರೀಡೆಗೆ ಪ್ರೋತ್ಸಾಹ ನೀಡುತ್ತಿಲ್ಲ. ಇದಕ್ಕೆ ಉದಾಹರಣೆ ಎಂಬಂತೆ ಒಲಂಪಿಕ್ ನಲ್ಲಿ ಭಾರತ ದೇಶಕ್ಕೆ ಕೇವಲ 6 ಪದಕ ಬಂದಿದೆ ಎಂದರು.

ಭದ್ರಾ ಸೌಹಾರ್ದ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬೆಮ್ಮನೆ ಮೋಹನ್‌ ಮಾತನಾಡಿ, ಇಂದಿನ ಮಕ್ಕಳು ಹೆಚ್ಚಾಗಿ ಕ್ರಿಕೆಟ್‌ ಆಟಕ್ಕೆ ಮಾರುಹೋಗುತ್ತಿದ್ದಾರೆ. ಕ್ರೀಡೆ ಎಂದರೆ ಕ್ರಿಕೆಟ್‌ ಆಟ ಮಾತ್ರವಲ್ಲ. ಅಥ್ಲೆಟಿಕ್ಸ್‌, ವಾಲೀಬಾಲ್‌, ಕಬಡ್ಡಿ ಸೇರಿದಂತೆ ಎಲ್ಲಾ ದೇಶೀಯ ಕ್ರೀಡೆಗಳಲ್ಲೂ ಭಾಗವಹಿಸಬೇಕು ಎಂದು ಸಲಹೆ ನೀಡಿದರು.

ಅತಿಥಿಗಳಾಗಿ ತಾಲೂಕು ಒಕ್ಕಲಿಗರ ಸಂಘದ ಸಹ ಕಾರ್ಯದರ್ಶಿ ಪಿ.ಕೆ.ಬಸವರಾಜ್‌, ಖಜಾಂಚಿ ಕಟಗಳಲೆ ಲೋಕೇಶ್‌, ನಿರ್ದೇಶಕರಾದ ಸದಾಶಿವ, ಎನ್‌.ಪಿ.ರವಿ, ಎಚ್‌.ಜಿ.ಶಿವಪ್ಪ, ಬಿ.ಟಿ.ರವಿ, ತೃಪ್ತಿ, ಬಿಳಾಲು ಮನೆ ಉಪೇಂದ್ರ, ಎಚ್‌.ಡಿ.ವಿನಯ, ಹಾತೂರು ಪ್ರಸನ್ನ, ಎಂಕೆಸಿಪಿಎಂ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಪದ್ಮರಮೇಶ್, ಕೆಪಿಎಸ್‌ ನ ಪ್ರಾಂಶುಪಾಲರಾದ ಪ್ರಮೀಳ, ವಿವಿಧ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ರಾಜ್ಯ ಮಟ್ಟದ ಕ್ರೀಡಾ ಪಟು ಕು.ಸ್ಪೂರ್ತಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಕಟಗಳಲೆ ಲೋಕೇಶ್ ಕ್ರೀಡಾ ಜ್ಯೋತಿ ಸ್ವೀಕಾರ ಮಾಡಿದರು. ನಂತರ 7 ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕಬಡ್ಡಿ, ವಾಲೀಬಾಲ್‌, ಖೋಖೋ, ಥ್ರೋಬಾಲ್‌ ಹಾಗೂ ಅಥ್ಲೆಟಿಕ್ಸ್‌ ನಲ್ಲಿ ಪಾಲ್ಗೊಂಡಿದ್ದರು. ಮಂಗಳವಾರವೂ ಕ್ರೀಡಾ ಕೂಟ ಮುಂದುವರಿಯಲಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿಎಂ ಸಿದ್ದುಗೆ ಇದು ಕೊನೆ ಅಧಿವೇಶನ: ವಿಜಯೇಂದ್ರ
ಬಿವೈವಿ ಕಲೆಕ್ಷನ್‌ ಕಿಂಗ್‌, ಕಲೆಕ್ಷನ್‌ ಬಿಚ್ಚಿಡ್ಲಾ? : ಡಿಕೆ