ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಪ್ರಯತ್ನ

KannadaprabhaNewsNetwork | Published : Dec 2, 2023 12:45 AM

ಅತಿಥಿ ಉಪನ್ಯಾಸಕರ ಕಾಯಂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವ ದಿಸೆಯಲ್ಲಿ ಸರ್ಕಾರದಿಂದ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ‌ ತಂಗಡಗಿ ಹೇಳಿದ್ದಾರೆ. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಅನಿರ್ದಿಷ್ಟಾವಧಿ ಧರಣಿನಿರತ ಸ್ಥಳಕ್ಕೆ ಭೇಟಿ ನೀಡಿ, ಮನವಿ ಸ್ವೀಕರಿಸಿ ಮಾತನಾಡಿದ ಅವರು, ಸರ್ಕಾರಕ್ಕೆ ಅತಿಥಿ ಉಪನ್ಯಾಸಕರ ಕುರಿತು ಅಪಾರ ಗೌರವವಿದೆ ಎಂದರು. ಹಿಂದಿನ ಸರ್ಕಾರದಲ್ಲೂ ಅತಿಥಿ ಉಪನ್ಯಾಸಕರು ಹೋರಾಟ ನಡೆಸಿದ್ದು, ಗೌರವಧನ ಹೆಚ್ಚಳವಾಗಿರುವುದು ಗೊತ್ತಿದೆ. ಈಗ ಸೇವಾ ಕಾಯಂ ಬೇಡಿಕೆಯ ಆಗ್ರಹವನ್ನು ಸರ್ಕಾರ ಗಮನಿಸುತ್ತಿದೆ. ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ತೊಂದರೆ ಉಂಟಾಗುತ್ತಿದೆ. ಸರ್ಕಾರ ನಿಮ್ಮ ಪರವಾಗಿದ್ದು ಧರಣಿ ಹಿಂಪಡೆಯುವಂತೆ ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ಕೊಪ್ಪಳ

ಅತಿಥಿ ಉಪನ್ಯಾಸಕರ ಕಾಯಂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವ ದಿಸೆಯಲ್ಲಿ ಸರ್ಕಾರದಿಂದ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ‌ ತಂಗಡಗಿ ಹೇಳಿದ್ದಾರೆ.ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಅನಿರ್ದಿಷ್ಟಾವಧಿ ಧರಣಿನಿರತ ಸ್ಥಳಕ್ಕೆ ಭೇಟಿ ನೀಡಿ, ಮನವಿ ಸ್ವೀಕರಿಸಿ ಮಾತನಾಡಿದ ಅವರು, ಸರ್ಕಾರಕ್ಕೆ ಅತಿಥಿ ಉಪನ್ಯಾಸಕರ ಕುರಿತು ಅಪಾರ ಗೌರವವಿದೆ ಎಂದರು.ಹಿಂದಿನ ಸರ್ಕಾರದಲ್ಲೂ ಅತಿಥಿ ಉಪನ್ಯಾಸಕರು ಹೋರಾಟ ನಡೆಸಿದ್ದು, ಗೌರವಧನ ಹೆಚ್ಚಳವಾಗಿರುವುದು ಗೊತ್ತಿದೆ. ಈಗ ಸೇವಾ ಕಾಯಂ ಬೇಡಿಕೆಯ ಆಗ್ರಹವನ್ನು ಸರ್ಕಾರ ಗಮನಿಸುತ್ತಿದೆ. ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ತೊಂದರೆ ಉಂಟಾಗುತ್ತಿದೆ. ಸರ್ಕಾರ ನಿಮ್ಮ ಪರವಾಗಿದ್ದು ಧರಣಿ ಹಿಂಪಡೆಯುವಂತೆ ಮನವಿ ಮಾಡಿದರು.ಬೆಳಗಾವಿ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆಯಾದರೆ ಬಹುಶಃ ಬೇಡಿಕೆ ಈಡೇರಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತದೆ. ಆದರೆ ನಾನು ಬೇರೆ ಇಲಾಖೆಯ ಸಚಿವನಾಗಿ ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಯ ಈ ಧರಣಿ ಕುರಿತು ಪ್ರಸ್ತಾಪಿಸುವುದು ಸಮಂಜಸವಲ್ಲ. ವಿವಿಧ ಶಾಸಕರು ಈ ಬಗ್ಗೆ ಧ್ವನಿ ಎತ್ತಿದರೆ ಅಧಿವೇಶನದಲ್ಲಿ ಖಂಡಿತವಾಗಿ ಅತಿಥಿ ಉಪನ್ಯಾಸಕರ ಪರ ಮಾತನಾಡುವುದಾಗಿ ಆಶ್ವಾಸನೆ ನೀಡಿದರು.ಅತಿಥಿ ಉಪನ್ಯಾಸಕರಾದ ಪ್ರಕಾಶ್ ಬಳ್ಳಾರಿ, ಸಣ್ಣದೇವೇಂದ್ರಸ್ವಾಮಿ, ಬಸವರಾಜ ಕರುಗಲ್ ಡಾ.ವೀರಣ್ಣ ಸಜ್ಜನರ್, ಜ್ಞಾನೇಶ್ವರ ಪತ್ತಾರ, ಗೀತಾ ಬನ್ನಿಕೊಪ್ಪ, ಶಿವಬಸಪ್ಪ ಮಸ್ಕಿ, ವಿಜಯಕುಮಾರ್ ಕುಲಕರ್ಣಿ, ಡಾ.ಗಿರಿಜಾ ತುರುಮುರಿ ಸಚಿವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಹಾಂತೇಶ ನೆಲಾಗಣಿ, ಕಲ್ಲಯ್ಯ ಅಬ್ಬಿಗೇರಿ, ವಿಜಯ ತೋಟದ, ಪ್ರಕಾಶ್ ಜಡಿಯವರ, ಡಾ.ತುಕಾರಾಂ ನಾಯಕ, ಸಂತೋಷಿ ಬೆಲ್ಲದ್, ಪ್ರದೀಪ್ ಪಲ್ಲೇದ್, ಮಹೇಶ, ಮಹಾಂತೇಶ, ತಾಯಪ್ಪ, ರಾಘವೇಂದ್ರ, ಮಂಜುನಾಥ, ಮಲ್ಲಿಕಾರ್ಜುನ, ಬಸವರಾಜ, ಶಿವರಾಜ, ಕಲ್ಲಯ್ಯಸ್ವಾಮಿ, ಡಾ.ಗೀತಾ, ಸರಸ್ವತಿ, ಉಷಾ, ಆಶಾ, ಗೋಣಿಬಸಪ್ಪ, ಶಿವಪ್ರಸಾದ್ ಇದ್ದರು.ಪ್ರತಿಭಟನಾ ಮೆರವಣಿಗೆ: ಸರ್ಕಾರ ಅತಿಥಿ ಉಪನ್ಯಾಸಕ ಮುಖಂಡರ ಸಭೆ ಕರೆದು ಮೂಗಿಗೆ ತುಪ್ಪ ಸವರುವ ಕೆಲಸ ಮಾಡುವುದು ಬೇಡ. ಸರ್ಕಾರದ ಇಂದಿನ ಸಭೆಗೆ ಧರಣಿ ಬೇಡ ಎಂದವರನ್ನು ಆಹ್ವಾನಿಸಿ, ನಮ್ಮಲ್ಲೇ ಒಡಕುಂಟು ಮಾಡುವ ಕೆಲಸಕ್ಕೆ ಕೈ ಹಾಕಿದೆ ಎಂದು ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ಡಾ.ಹನುಮಂತಗೌಡ ಕಲ್ಮನಿ ಆಕ್ರೋಶ ವ್ಯಕ್ತಪಡಿಸಿದರು.

ಶುಕ್ರವಾರ ಅತಿಥಿ ಉಪನ್ಯಾಸಕರ ಪ್ರತಿಭಟನಾ ಮೆರವಣಿಗೆಗೆ ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ನಮ್ಮನ್ನು ಒಡೆಯುವ ಸರ್ಕಾರದ ಹುನ್ನಾರ ಫಲಿಸದು. ಸೇವಾ ಕಾಯಮಾತಿಯ ಲಿಖಿತ ಉತ್ತರ ಬರುವವರೆಗೆ ಹೋರಾಟ ನಿಲ್ಲದು ಎಂದು ಎಚ್ಚರಿಕೆ ನೀಡಿದರು.ಶಿಕ್ಷಣ ಉಳಿಸಿ ಹೋರಾಟ ಸಮಿತಿಯ ಅಧ್ಯಕ್ಷ ಅಲ್ಲಮಪ್ರಭು ಬೆಟ್ಟದೂರು ಹೋರಾಟಕ್ಕೆ ಬೆಂಬಲ ನೀಡಿದರು.