ರಾಷ್ಟ್ರಮಟ್ಟದ ಕ್ರೀಡಾಂಗಣ ಸ್ಥಾಪನೆಗೆ ಶ್ರಮಿಸುವೆ: ಸಂಸದ ಬಿ.ವೈ ರಾಘವೇಂದ್ರ ಭರವಸೆ

KannadaprabhaNewsNetwork |  
Published : Jun 18, 2024, 12:46 AM IST
ಭಾನುವಾರ ರಾತ್ರಿ ನಡೆದ ರಾಜ್ಯ ಮಟ್ಟದ ಕುರಿ ಕಾಳಗ ಸ್ಪರ್ದೆಯಲ್ಲಿ ಸಂಸದ ರಾಘವೇಂದ್ರರನ್ನು ಸನ್ಮಾನಿಸಲಾಯಿತು | Kannada Prabha

ಸಾರಾಂಶ

ಮಾರಿಕಾಂಬಾ ಬಯಲು ರಂಗಮಂದಿರದಲ್ಲಿ ಇದೇ ಪ್ರಥಮ ಬಾರಿಗೆ ಅಘೋರ ಅಭಿಮಾನಿ ಬಳಗದ ವತಿಯಿಂದ ಭಾನುವಾರ ಸಂಜೆ ನಡೆದ ರಾಜ್ಯ ಮಟ್ಟದ ಕುರಿ ಕಾಳಗ ಸ್ಪರ್ಧೆಗೆ ಚಾಲನೆ

ಕನ್ನಡಪ್ರಭ ವಾರ್ತೆ ಶಿಕಾರಿಪುರ

ಜಾನಪದ ಕ್ರೀಡೆಗಳು ನಾಡಿನ ಭವ್ಯ ಇತಿಹಾಸ ಪರಂಪರೆಯನ್ನು ಪ್ರತಿಬಿಂಬಿಸುತ್ತಿದ್ದು, ಉಲ್ಲಾಸ ಉತ್ಸಾಹ ಮನೋಸ್ಥೈರ್ಯ ಜತೆಗೆ ಆತ್ಮವಿಶ್ವಾಸ ಹೆಚ್ಚಿಸುವ ಜಾನಪದ ಕ್ರೀಡೆ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಆಯೋಜಿಸುವಂತಹ ಕ್ರೀಡಾಂಗಣವನ್ನು ತಾಲೂಕು ಕೇಂದ್ರದಲ್ಲಿ ನಿರ್ಮಿಸಲು ಎಲ್ಲ ರೀತಿಯಲ್ಲಿ ಶ್ರಮಿಸುವುದಾಗಿ ಸಂಸದ ಬಿ.ವೈ ರಾಘವೇಂದ್ರ ತಿಳಿಸಿದರು.

ಪಟ್ಟಣದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿನ ಮಾರಿಕಾಂಬಾ ಬಯಲು ರಂಗಮಂದಿರದಲ್ಲಿ ಇದೇ ಪ್ರಥಮ ಬಾರಿಗೆ ಅಘೋರ ಅಭಿಮಾನಿ ಬಳಗದ ವತಿಯಿಂದ ಭಾನುವಾರ ಸಂಜೆ ನಡೆದ ರಾಜ್ಯ ಮಟ್ಟದ ಕುರಿ ಕಾಳಗ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿ, ಜಾನಪದ ಕ್ರೀಡೆ ಉಳಿಸಿ ಬೆಳೆಸುವುದು ಇಂದಿನ ಅಗತ್ಯವಾಗಿದ್ದು, ಹಲವು ಕ್ರೀಡೆಗಳು ಅವಸಾನದ ಅಂಚಿನಲ್ಲಿದೆ. ಹೋರಿ ಬೆದರಿಸುವ ಸ್ಪರ್ಧೆ, ಕುರಿಕಾಳಗ ಮತ್ತಿತರ ಜಾನಪದ ಕ್ರೀಡೆಗಳು ಈ ನಾಡಿನ ಭವ್ಯ ಇತಿಹಾಸ ಪರಂಪರೆ ಪ್ರತಿಬಿಂಬಿಸುತ್ತಿದೆ. ಪೂರ್ವಜರು ಹುಟ್ಟು ಹಾಕಿದ ಪ್ರತಿಯೊಂದು ಕ್ರೀಡೆ ಸಹಿತ ಸಂಪ್ರದಾಯ ಪದ್ಧತಿಗಳಲ್ಲಿ ವೈಜ್ಞಾನಿಕ ನೆಲೆಗಟ್ಟು ಅಡಕವಾಗಿದೆ. ಕುರಿ ಕಾಳಗಕ್ಕೆ ನೂರಾರು ವರ್ಷಗಳ ಭವ್ಯ ಇತಿಹಾಸವಿದ್ದು ನೋಡುಗರನ್ನು ಅತ್ಯಾಕರ್ಷಿಸುವ ರೋಮಾಂಚನಕಾರಿ ಕ್ರೀಡೆಯಾಗಿ ಕುರಿ ಕಾಳಗ ಪ್ರಸಿದ್ಧವಾಗಿದೆ ಎಂದು ತಿಳಿಸಿದರು.

ಕುರಿ ಕಾಳಗ ಪ್ರಾರಂಭದಿಂದ ಅಂತ್ಯದವರೆಗೂ ಕ್ರೀಡಾ ಪ್ರೇಮಿಗಳನ್ನು ಹಿಡಿದಿಟ್ಟುಕೊಂಡು ತುದಿಗಾಲಲ್ಲಿ ನಿಲ್ಲಿಸುತ್ತದೆ. ಕ್ರೀಡೆ ವೀಕ್ಷಿಸುವಾಗ ನಿತ್ಯ ದೈನಿಂದಿನ ಜಂಜಾಟದಿಂದ ಕೆಲ ಕಾಲ ಹೊರಬಂದು ಹೊಸ ಹುರುಪನ್ನು ನೀಡಲಿದೆ. ತಾಲೂಕಿನಲ್ಲಿ ಈಗಾಗಲೇ ಹೋರಿ ಬೆದರಿಸುವ ಸ್ಪರ್ಧೆ ಅತ್ಯಂತ ಜನಪ್ರಿಯ ಕ್ರೀಡೆಯಾಗಿದ್ದು, ಇದೇ ರೀತಿಯಲ್ಲಿ ಕುರಿ ಕಾಳಗ, ಕೋಳಿ ಕಾಳಗ ಮತ್ತಿತರ ಎಲ್ಲ ಜಾನಪದ ಕ್ರೀಡೆ ನೇಪತ್ಯಕ್ಕೆ ಸರಿಯದಂತೆ ಪಕ್ಷಬೇಧ ಮರೆತು ಪ್ರತಿಯೊಬ್ಬರೂ ವೈಮನಸ್ಸು ಬಿಟ್ಟು ಪ್ರೋತ್ಸಾಹಿಸಬೇಕಾಗಿದೆ ಎಂದರು.

ಪುರಸಭಾ ಸದಸ್ಯ ಮಹೇಶ್ ಹುಲ್ಮಾರ್ ಮಾತನಾಡಿ, ಅನಾದಿ ಕಾಲದಿಂದ ಕುರಿ ಕಾಳಗ, ಹೋರಿ ಸ್ಪರ್ಧೆಗೆ ಶಿಕಾರಿಪುರ ಅತ್ಯಂತ ಪ್ರಸಿದ್ಧವಾಗಿದ್ದು ಕುರಿ ಕಾಳಗ ರೈತರಿಗೆ ಹುಮ್ಮಸ್ಸು ಹೆಚ್ಚಿಸಲಿದೆ. ಎಲ್ಲ ವರ್ಗದ ಜನತೆ ಕುರಿ ಕಾಳಗ ಹೆಚ್ಚು ಇಷ್ಟಪಡುತ್ತಾರೆ ಎಂದ ಅವರು, ಸ್ಪರ್ಧೆಗೆ ಸಂಸದರ ಪ್ರೋತ್ಸಾಹ ಬಹು ಮುಖ್ಯ ಕಾರಣವಾಗಿದೆ. ಇದರೊಂದಿಗೆ ಮಾರಿಕಾಂಬ ದೇವಾಲಯಕ್ಕೆ ರಂಗಮಂದಿರ ನಿರ್ಮಿಸಿ ವಿಶಾಲ ಮೈದಾನ ಜಾಗಕ್ಕೆ ಕಾಂಪೌಂಡ್ ನಿರ್ಮಿಸಿ ದೇವಾಲಯದ ಕಳೆ ಹೆಚ್ಚಳದ ಜತೆಗೆ ಎಲ್ಲ ರೀತಿಯ ಸ್ಪರ್ಧೆಗೆ ಯಡಿಯೂರಪ್ಪನವರು, ಸಂಸದ ಶಾಸಕರ ಸಹಕಾರ ಅವಿಸ್ಮರಣೀಯ ಎಂದರು.

ಅಧ್ಯಕ್ಷತೆಯನ್ನು ಅಘೋರ ಬಳಗದ ಶಿವು ಸಂದಿಮನೆ, ನಿತಿನ್ ವಹಿಸಿದ್ದರು. ವೇದಿಕೆಯಲ್ಲಿ ಪುರಸಭಾ ಸದಸ್ಯ ಗೋಣಿ ಪ್ರಕಾಶ್, ಪ್ರಶಾಂತ ಜೀನಳ್ಳಿ, ತಾ. ಕುರುಬ ಸಮಾಜದ ಮುಖಂಡ ಕಬಾಡಿ ರಾಜಣ್ಣ, ಟಿಎಪಿಸಿಎಂಎಸ್ ಅಧ್ಯಕ್ಷ ಸುಧೀರ ಮಾರವಳ್ಳಿ, ವೀರಶೈವ ಸಮಾಜದ ಅಧ್ಯಕ್ಷ ಈರೇಶ್, ಮುಖಂಡ ನಗರದ ಮಹಾದೇವಪ್ಪ, ಶ್ರೀಕಾಂತ್, ಗೋಣಿ ಮಾಲತೇಶ್, ಶಿವಕುಮಾರ್ ದುರ್ಗವ್ವಾರ, ಪಚ್ಚಿ ಗಿಡ್ಡಪ್ಪ, ಭೋಗಿ ಚೇತನ, ಸಂದೀಪ ಇತರರಿದ್ದರು.

8 ಹಲ್ಲಿನ ಹುಬ್ಬಳ್ಳಿ ಛತ್ರಪತಿ ಶಿವಾಜಿ ಟಗರಿಗೆ ಹಾಗೂ 6 ಹಲ್ಲಿನ ರಾಣೇಬೆನ್ನೂರಿನ ಆರ್.ಎನ್.ಆರ್ ಬಾಳು ಟಗರಿಗೆ ಪ್ರಥಮ ಬಹುಮಾನ ಬೈಕ್ ನೀಡಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ