ಪ್ರವಾದಿ ಮುಹಮ್ಮದ್ ಪೈಗಂಬರ್ ಜನ್ಮದಿನ: ಎಲ್ಲೆಡೆ ಈದ್ ಮಿಲಾದ್ ಸಂಭ್ರಮಾಚರಣೆ

KannadaprabhaNewsNetwork |  
Published : Aug 27, 2026, 02:15 AM IST
ಕ್ಯಾಪ್ಷನ26ಕೆಡಿವಿಜಿ40, 41, 42, 43 ದಾವಣಗೆರೆಯಲ್ಲಿ ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಿದರು. ಹಬ್ಬದ ಹಿನ್ನಲೆಯಲ್ಲಿ ಮೆರವಣಿಗೆ ನಡೆಯಿತು.  | Kannada Prabha

ಸಾರಾಂಶ

ಮುಸ್ಲಿಂ ಬಾಂಧವರು ಬುಧವಾರ ನಗರದಲ್ಲಿ ಪ್ರವಾದಿ ಮುಹಮ್ಮದ್ ಪೈಗಂಬರ್ ಜನ್ಮದಿನದ ಪ್ರಯುಕ್ತ ಈದ್ ಮಿಲಾದ್ ಹಬ್ಬವನ್ನು ಸಂಭ್ರಮ, ಸಡಗರ ಹಾಗೂ ಶ್ರದ್ಧಾಭಕ್ತಿಯಿಂದ ಆಚರಿಸಿದರು.

ದಾವಣಗೆರೆ: ಮುಸ್ಲಿಂ ಬಾಂಧವರು ಬುಧವಾರ ನಗರದಲ್ಲಿ ಪ್ರವಾದಿ ಮುಹಮ್ಮದ್ ಪೈಗಂಬರ್ ಜನ್ಮದಿನದ ಪ್ರಯುಕ್ತ ಈದ್ ಮಿಲಾದ್ ಹಬ್ಬವನ್ನು ಸಂಭ್ರಮ, ಸಡಗರ ಹಾಗೂ ಶ್ರದ್ಧಾಭಕ್ತಿಯಿಂದ ಆಚರಿಸಿದರು.

ಈದ್ ಮಿಲಾದ್ ಅಂಗವಾಗಿ ಆಯೋಜಿಸಿದ ಮೆರವಣಿಗೆಯಲ್ಲಿ ಸಮುದಾಯದವರು ಭಾಗವಹಿಸಿ ಮೆಕ್ಕಾ-ಮದೀನಾ ಮಾದರಿ ನಾತ್‌ಗಳು, ಸಲಾಂಗಳನ್ನು ಹಾಡುತ್ತಾ ಮಳೆಯನ್ನು ಲೆಕ್ಕಿಸದೇ ಹೆಜ್ಜೆ ಹಾಕಿದರು. ಮೆರವಣಿಗೆಯಲ್ಲಿ ಇಸ್ಲಾಂ ಧರ್ಮದ ಹಸಿರು ಧ್ವಜಗಳನ್ನು ಪ್ರದರ್ಶಿಸಿದರು. ಆಜಾದ್ ನಗರದಿಂದ ಆರಂಭವಾದ ಮೆರವಣಿಗೆ ವಿವಿಧೆಡೆ ಸಂಚರಿಸಿ ಮಿಲಾದ್ ಮೈದಾನದಲ್ಲಿ ಮುಕ್ತಾಯವಾಯಿತು.

ವಿನೋಬನಗರ, ಕೆಟಿಜೆ ನಗರ, ಭಗತ್ ಸಿಂಗ್ ನಗರ, ಲೇಬರ್ ಕಾಲನಿ ಇತರೆ ಭಾಗಗಳಲ್ಲಿಯೂ ಮೆರವಣಿಗೆ ಮೂಲಕ ಬಂದು ಅಂಬೇಡ್ಕರ್ ವೃತ್ತದಲ್ಲಿ, ಗಾಂಧಿ ವೃತ್ತದಲ್ಲಿ ಸೇರಿ ಹೆಜ್ಜೆ ಹಾಕಿದರು. ಮೆರವಣಿಗೆಯಲ್ಲಿ ಪ್ರಮುಖ ರಸ್ತೆ, ವೃತ್ತಗಳಲ್ಲಿ ಲಘು ಉಪಾಹಾರ, ತಂಪು ಪಾನೀಯ, ಮಜ್ಜಿಗೆ, ನೀರು ವಿತರಿಸುತ್ತಿದ್ದ ದೃಶ್ಯ ಕಂಡುಬಂತು. ಮುಸ್ಲಿಂ ಯುವಕರು, ಹಿರಿಯರು, ಮಕ್ಕಳು ಸಂತಸ ಹಂಚಿಕೊಂಡರು.

ವಾಹನ ಸವಾರರು, ಬಸ್ಸುಗಳ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಾಗಿತ್ತು. ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಮೆರವಣಿಗೆ ಮಿಲಾದ್ ಮೈದಾನ ತಲುಪಿದ ಬಳಿಕ ಬೃಹತ್ ಧಾರ್ಮಿಕ ಸಭೆ ನಡೆಯಿತು. ಪ್ರವಾದಿ ಮಹಮ್ಮದ್ ಪೈಗಂಬರರ ಜೀವನ, ಮಾನವೀಯ ಮೌಲ್ಯಗಳು, ಸಹೋದರತ್ವ, ಶಾಂತಿ ಹಾಗೂ ಸೌಹಾರ್ದದ ಮಹತ್ವ ಕುರಿತು ಧಾರ್ಮಿಕ ಮುಖಂಡರು ಸಂದೇಶ ನೀಡಿದರು.

ಈದ್ ಮಿಲಾದ್ ಆಚರಣೆಯ ಮೂಲಕ ಸಮಾಜದಲ್ಲಿ ಪರಸ್ಪರ ಪ್ರೀತಿ, ಸಹಬಾಳ್ವೆ ಹಾಗೂ ಸಹೋದರತ್ವ ಮತ್ತಷ್ಟು ಬಲಗೊಳ್ಳಬೇಕು ಎಂಬ ಆಶಯ ವ್ಯಕ್ತವಾಯಿತು. ಸಮಾಜದ ಗಣ್ಯರು, ಮುಖಂಡರು, ಯುವಕರು ಇತರರು ಭಾಗವಹಿಸಿ ಶುಭಾಷಯ ವಿನಿಮಯ ಮಾಡಿಕೊಂಡರು.

- - -

-26ಕೆಡಿವಿಜಿ40, 41, 42, 43:

ದಾವಣಗೆರೆಯಲ್ಲಿ ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಿದರು. ಹಬ್ಬದ ಹಿನ್ನಲೆಯಲ್ಲಿ ಮೆರವಣಿಗೆ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೂ ಮಳೆ ಸುರಿಸಿ ಕ್ಯಾಪ್ಟನ್‌ ‘ಅಭಿಮನ್ಯು’ಗೆ ಬೀಳ್ಕೊಡುಗೆ
ಯುವ ಜನತೆ ಕಲೆ ಸಂಸ್ಕೃತಿಗೆ ಜೀವ ತುಂಬಬೇಕು: ನಟರಾಜ್‌